ಗುರುಕುಲಗಳಿಂದ ಉತ್ತಮ ಸಮಾಜ ನಿರ್ಮಾಣ


Team Udayavani, Jan 29, 2019, 9:33 AM IST

bid-4.jpg

ಕೊಪ್ಪ: ಆಧುನಿಕ ಶಿಕ್ಷಣದಿಂದ ಆತ್ಮಶಾಂತಿ ಸಿಗುತ್ತಿಲ್ಲ. ಹಣ ಗಳಿಕೆಯೇ ಮನುಷ್ಯನ ಧ್ಯೇಯವಲ್ಲ. ಜೀವನದ ವಿಕಾಸಕ್ಕೆ ಬೇಕಾಗುವಂತಹ ಪೂರಕ ಶಿಕ್ಷಣದ ಅಗತ್ಯತೆ ಇದ್ದು, ಅಂತಹ ಶಿಕ್ಷಣವನ್ನು ಗುರುಕುಲದಲ್ಲಿ ಪಡೆಯಬಹುದು ಎಂದು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ಹರಿಹರಪುರ ಸಮೀಪದ ಚಿತ್ರಕೂಟದ ಪ್ರಭೋದಿನಿ ಗುರುಕುಲದಲ್ಲಿ ಹಮ್ಮಿಕೊಂಡಿದ್ದ ಅರ್ಧಮಂಡಲೋತ್ಸವ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಉತ್ತಮ ಸಮಾಜ ನಿರ್ಮಾಣಕ್ಕಾಗಿ ಗುರುಕುಲಗಳು ಹೆಚ್ಚಾಗಬೇಕು. ಪಂಚಮುಖೀ ಶಿಕ್ಷಣಗಳಾದ ವೇದ ,ಕೃಷಿ ಯೋಗ, ವಿಜ್ಞಾನ ,ಕಲೆ ಇವುಗಳ ಶಿಕ್ಷಣ ಪಡೆದರೆ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳುತ್ತಾರೆ ಎಂದರು.

ಭಾರತ ಧರ್ಮ ಮತ್ತು ಸಂಸ್ಕೃತಿ ಪ್ರಧಾನವಾದ ದೇಶವಾಗಿದ್ದು, ಹಗಲು ಸೂರ್ಯ ಬೆಳಕು ನೀಡಿದರೆ ರಾತ್ರಿ ಚಂದ್ರ ಬೇಳಕು ನೀಡುತ್ತಾನೆ. ಹಾಗೆ ಧರ್ಮ ಸದಾಕಾಲ ಬೆಳಕು ನೀಡುತ್ತದೆ. ಯಾವಗಲೂ ಸತ್ಯ ಮಾತನಾಡತ್ತಾ ಧರ್ಮದ ಜೀವನ ನಡೆಸುವುದು ನಮ್ಮ ಸಂಸ್ಕೃತಿಯಾಗಿದೆ ಎಂದು ನುಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖೀಲ ಭಾರತ ವ್ಯವಸ್ಥಾ ಪ್ರಮುಖ್‌ ಮಂಗೇಶ್‌ ಭೇಂಡೆ ಮಾತನಾಡಿ, ಒಂದು ದೇಶದ ವಿಕಾಸವನ್ನು ಲೆಕ್ಕ ಹಾಕುವುದು ಆ ದೇಶದ ಶೈಕ್ಷಣಿಕ ವಿಸ್ತಾರದ ಮೇಲೆ. ಸ್ವಾತಂತ್ರ್ಯ ಬಂದಾಗ ಇದ್ದಂತಹ ಶಾಲಾಕಾಲೇಜುಗಳ ಸಂಖ್ಯೆಗೂ ಈಗಿನ ಸಂಖ್ಯೆಗೂ ಅಜಗಜಾಂತರ ವ್ಯತ್ಯಾಸವಿದೆ. ಇಷ್ಟೆಲ್ಲಾ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ಬೆಳೆದಿದ್ದರೂ ದೇಶದ ಸ್ಥಿತಿ ಭಿನ್ನವಾಗಿಲ್ಲ ಎಂದರು.

ಗುರುಕುಲದ ವ್ಯವಸ್ಥಾಪಕ ಉಮೇಶ್‌ರಾವ್‌ ಮಾತನಾಡಿ, ಕಳೆದ 24 ವರ್ಷಗಳಿಂದ ವೇದ, ವಿಜ್ಞಾನ, ಯೋಗ, ಕೃಷಿ ಮತ್ತು ಕಲೆಗಳೆಂಬ ವಿಶಿಷ್ಟ ಪಂಚಮುಖೀ ಶಿಕ್ಷಣವನ್ನು ಆಹಾರ ಹಾಗೂ ವಸತಿ ಸೌಲಭ್ಯಗಳೊಂದಿಗೆ ಗುರುಕುಲ ಪದ್ದತಿಯಲ್ಲಿ ಶಿಕ್ಷಣ ನೀಡುತ್ತಾ ಬರಲಾಗಿದೆ. 2019-20ನೇ ವರ್ಷವನ್ನು ಅರ್ಧಮಂಡಲೋತ್ಸವ ಎಂಬುದಾಗಿ ಆಚರಿಸಲು ತೀರ್ಮಾನಿಸಿದ್ದು, ಇದೇ ಅರ್ಧಮಂಡಲೋತ್ಸವ ಆಚರಣೆ ಹಿನ್ನೆಲೆಯಲ್ಲಿ ವರ್ಷಪೂರ್ತಿ ಕರ್ನಾಟಕದ ಪ್ರಮುಖ ಸ್ಥಾನಗಳಲ್ಲಿ ‘ಗುರುಕುಲ ದರ್ಶನಂ’ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಗುರುಕುಲ ಶಿಕ್ಷಣದ ಪ್ರಸ್ತುತತೆಯನ್ನು ಪ್ರಚುರಪಡಿಸಲಾಗುತ್ತದೆ ಎಂದರು.

ಸ್ವಾಗತ ಸಮಿತಿ ಗೌರವಾಧ್ಯಕ್ಷ ಶೃಂಗೇರಿ ಶ್ರೀ ಮಠದ ಆಡಳಿತಾಧಿಕಾರಿ ಡಾ| ವಿ.ಆರ್‌. ಗೌರಿಶಂಕರ್‌ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮವನ್ನು ಹಿಂದೂಸ್ಥಾನಿ ಗಾಯಕ ಪಂಡಿತ್‌ ವಿನಾಯಕ ತೊರವಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ, ವಿಆರ್‌ಎಲ್‌ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ| ವಿಜಯ ಸಂಕೇಶ್ವರ, ಕಾರ್ಯಾಧ್ಯಕ್ಷ ಬಾಳೆಹೊನ್ನೂರಿನ ಎಚ್.ಬಿ. ರಾಜಗೋಪಾಲ್‌, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಪಟ್ಟಾಭಿರಾಮನ್‌, ಕಜಂಪಾಡಿ ಸುಬ್ರಹ್ಮಣ್ಯ ಭಟ್, ಸೀತಾರಮ ಕೆದಿಲಾರು, ನಾರಾಯಣ ಶೇವ್ರೆ ಮುಂತಾದವರು ಉಪಸ್ಥಿತರಿದ್ದರು.

ಈಗಿನ ಶಿಕ್ಷಣ ವಿದ್ಯಾರ್ಥಿಗಳನ್ನು ಸಾಕ್ಷರರನ್ನಾಗಿ ಮಾಡುತ್ತಿವಿಯೇ ಹೊರತು ಸುಶಿಕ್ಷಿತರನ್ನಾಗಿ ಮಾಡುತ್ತಿಲ್ಲ. ಮನೆಗಳಲ್ಲಿ ಉತ್ತಮ ಶಿಕ್ಷಣ ಸಿಗಬೇಕು. ದುದೆ„ರ್ವೆಂದರೆ ಮನೆಗಳಲ್ಲಿ ಸಂಸ್ಕಾರ ಸಿಗುತ್ತಿಲ್ಲ. ಮುಂದಿನ ಪೀಳಿಗೆಗೆ ದೇಶಭಕ್ತ ನಾಗರಿಕ ನಿರ್ಮಾಣಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆಯಾಗಬೇಕು ಎಂಬ ಕಾರಣಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಗುರುಕುಲ ಪದ್ದತಿ ಶಿಕ್ಷಣ ವ್ಯವಸ್ಥೆ ಪ್ರಾರಂಭಿಸಿದೆ. ಆ ಮೂಲಕ ಹಿಂದೂ ಸಂಸ್ಕೃತಿಯ ಪುನರುಜ್ಜೀವನ ಕಾರ್ಯಕ್ಕೆ ಮುಂದಾಗಿದೆ
• ಮಂಗೇಶ್‌ ಭೇಂಡೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖೀಲ ಭಾರತ ವ್ಯವಸ್ಥಾ ಪ್ರಮುಖ್‌

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.