ಸತ್ಯದ ಹಾದಿಗೆ ಸಿದ್ಧರಾಮೇಶ್ವರ ವಚನ ಪ್ರೇರಣೆ


Team Udayavani, Jan 29, 2019, 10:08 AM IST

ray-2.jpg

ರಾಯಚೂರು: ಸಮಾಜದಲ್ಲಿನ ಅಸಮಾನತೆ ಖಂಡಿಸಿ ಸತ್ಯದ ಹಾದಿಯಲ್ಲಿ ನಡೆಯಲು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ವಚನಗಳು ಪ್ರೇರಣೆಯಾಗಿದ್ದವು. ಇಂದಿಗೂ ಅವರ ವಚನಗಳು ಪ್ರಸ್ತುತತೆ ಕಾಯ್ದುಕೊಂಡಿವೆ ಎಂದು ಹಿರಿಯ ಸಾಹಿತಿ ರಮೇಶಬಾಬು ಯಾಳಗಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಿದ್ಧರಾಮೇಶ್ವರರ 847ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾವು ನಿರ್ವಹಿಸಿದ ಕಾಯಕವನ್ನು ಶ್ರದ್ಧೆಯಿಂದ ನಿಭಾಯಿಸಬೇಕು ಎನ್ನುವ ಸಂದೇಶ ನೀಡಿದ್ದ ಶಿವಯೋಗಿ ಸಿದ್ಧರಾಮೇಶ್ವರರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅನುಸರಿಸಿದಲ್ಲಿ ಆದರ್ಶ ಜೀವನ ನಡೆಸಲು ಸಾಧ್ಯ. 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ವಚನಗಳನ್ನು ಬರೆಯುವ ಮೂಲಕ ವಚನ ಸಾಹಿತ್ಯ ಚಳವಳಿಯಲ್ಲಿ ಎಲ್ಲರ ಗಮನ ಸಳೆದಿದ್ದರು ಎಂದರು.

ಬಸವಾದಿ ಶರಣರ ಪರಂಪರೆಯಲ್ಲಿ ಬೆಳೆದು ವಚನ ಸಾಹಿತ್ಯದ ಮೂಲಕ ಈ ನಾಡಿಗೆ ಹೊಸ ವಿಚಾರಗಳನ್ನು ನೀಡಿ ಸಮಾಜ ಸುಧಾರಣೆಗೆ ಮುಂದಾದರು. ಶಿವಯೋಗಿ ಸಿದ್ಧರಾಮೇಶ್ವರರು 68 ಸಾವಿರ ವಚನ ಬರೆದಿದ್ದು, 1,672 ವಚನಗಳು ಮಾತ್ರ ಪ್ರಸ್ತುತ ಲಭ್ಯ ಇವೆ ಎಂದರು.

ಜಯಂತಿಗಳು ಒಂದು ಜಾತಿಗೆ ಸಿಮೀತಗೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಶರಣರು ಇಡೀ ಸಮಾಜಕ್ಕಾಗಿ ದುಡಿದರು. ಅವರನ್ನು ಎಲ್ಲರೂ ಸ್ಮರಿಸುವ ಕೆಲಸವಾಗಬೇಕು ಎಂದರು.

ಚಿತ್ರದುರ್ಗ ಮತ್ತು ಬಾಗಲಕೋಟೆ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಜಗದ್ಗುರು ಶ್ರೀಮದ್‌ ನಿರಂಜನ ಸ್ವಾಮೀಜಿ ಮಾತನಾಡಿ, ಜಯಂತಿಗಳು ಆಚರಣೆಗೆ ಸಿಮೀತವಾಗದೇ ಅವರ ವೈಚಾರಿಕತೆ ಅನುಸರಿಸುವಂತಾಗಬೇಕು. ಭೋವಿ ಸಮಾಜ ಮುಖ್ಯವಾಹಿನಿಗೆ ಬರುವ ಮೂಲಕ ಎಲ್ಲ ರಂಗದಲ್ಲೂ ಸಾಧನೆ ಮಾಡಬೇಕು ಎಂದರು.

ಶಾಸಕ ಡಾ| ಶಿವರಾಜ ಪಾಟೀಲ, ಕಿಲ್ಲೇ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಗಬ್ಬೂರಿನ ಶ್ರೀ ಬೂದಿಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಬಿ.ನೀಲಮ್ಮ, ಭೋವಿ ಸಮಾಜ ರಾಷ್ಟ್ರೀಯ ಅಧ್ಯಕ್ಷ ಡಾ| ರವಿ, ಸಿಪಿಐ ಹನುಮಂತರೆಡ್ಡಿ, ರಾಜ್ಯಾಧ್ಯಕ್ಷ ಯಲ್ಲಪ್ಪ, ಜಿಲ್ಲಾಧ್ಯಕ್ಷ ನಾರಾಯಣ ಸ್ವಾಮಿ, ತಾಲೂಕು ಅಧ್ಯಕ್ಷ ಆಂಜನೇಯ ಗಾಣದಾಳ, ಮಹಿಳಾ ಘಟಕ ಅಧ್ಯಕ್ಷೆ ಶಶಿಕಲಾ ಸೇರಿ ಸಮಾಜದ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.