ಅಪ್ರತಿಮ ಹೋರಾಟಗಾರ ಜಾರ್ಜ್ ಫರ್ನಾಂಡಿಸ್ ಇನ್ನು ನೆನಪು ಮಾತ್ರ
Team Udayavani, Jan 29, 2019, 1:04 PM IST
ಮಂಗಳೂರು ಬಿಜೈ ಮೂಲದ ಯುವಕನೊಬ್ಬ ರಾಷ್ಟ್ರರಾಜಕಾರಣದಲ್ಲಿ ಮಿಂಚಿ ಮರೆಯಾಗಿದ್ದು ಇದೀಗ ಇತಿಹಾಸವಾಗಿದೆ. ಅಪ್ರತಿಮ ಕಾರ್ಮಿಕ ಹೋರಾಟಗಾರರಾಗಿ, ತುರ್ತು ಪರಿಸ್ಥಿತಿ ವೇಳೆ ಭೂಗತರಾಗಿ ಅಂದಿನ ಪ್ರಧಾನಿ ಇಂದಿರಾಗಾಂಧಿ ವಿರುದ್ಧ ಹೋರಾಟ ನಡೆಸಿದ್ದ ಜಾರ್ಜ್ ಫರ್ನಾಂಡಿಸ್ ಅತ್ಯುತ್ತಮ ವಾಗ್ಮಿಯಾಗಿದ್ದರು. ಧೀಮಂತ ರಾಜಕಾರಣಿಯಾಗಿದ್ದ ಜಾರ್ಜ್ ಫರ್ನಾಂಡಿಸ್ ಅವರು ಕಳೆದ ಕೆಲವು ವರ್ಷಗಳಿಂದ ಅಲ್ಜೈಮರ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ತಿಹಾರ್ ಜೈಲಿನಿಂದಲೇ ಬಿಹಾರದ ಮುಜಾಫರ್ ನಗರದಿಂದ ಸ್ಪರ್ಧಿಸಿ ಗೆದ್ದ ಜಾರ್ಜ್ ಫರ್ನಾಂಡಿಸ್ ಅಪ್ರತಿಮ ಜನನಾಯಕರಾಗಿ ಬೆಳೆದಿದ್ದರು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕೊಂಕಣ್ ರೈಲ್ವೆ, ಕಾರವಾರದ ಸೀ ಬರ್ಡ್ ಸೇರಿದಂತೆ ಹಲವು ಮಹತ್ವದ ಯೋಜನೆಗಳ ರೂವಾರಿ ಜಾರ್ಜ್ ಫರ್ನಾಂಡಿಸ್. ನನಗೆ ಮತ್ತೊಂದು ಜನ್ಮವಿದ್ದರೆ ನಾನು ವಿಯೆಟ್ನಾಮೀಸ್ ಆಗಿ ಹುಟ್ಟಬೇಕು ಎಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ್ದರು. ವಿಯೆಟ್ನಾಂ ಜನರಲ್ಲಿ ಶಿಸ್ತಿದೆ, ಹಿಡಿದ ಕೆಲಸ ಮಾಡಬೇಕೆಂಬ ಛಲ ಅವರಲ್ಲಿದೆ ಎಂದಿದ್ದರು. ಕೊಂಕಣಿ, ತುಳು, ಹಿಂದಿ, ಇಂಗ್ಲೀಷ್, ಮರಾಠಿ, ತಮಿಳು, ಉರ್ದು, ಲ್ಯಾಟಿನ್ ಭಾಷೆಯಲ್ಲಿ ಪರಿಣತರಾಗಿದ್ದ ಜಾರ್ಜ್ ಫರ್ನಾಂಡಿಸ್ ಅವರು ಬಂಗಾಳಿ ಕವಿ, ಕಾದಂಬರಿಕಾರ, ಮಾಜಿ ಕೇಂದ್ರ ಸಚಿವ ಕಬೀರ್ ಅವರ ಪುತ್ರಿ ಲೈಲಾ ಕಬೀರ್ ಅವರನ್ನು ವಿವಾಹವಾಗಿದ್ದರು. ಜಾರ್ಜ್, ಲೈಲಾ ದಂಪತಿಗೆ ಸಿಯಾನ್ ಫರ್ನಾಂಡಿಸ್ ಎಂಬ ಪುತ್ರ ಜನಿಸಿದ್ದ. 1984ರಲ್ಲಿ ಲೈಲಾ ಅವರಿಂದ ವಿಚ್ಛೇದನ ಪಡೆದಿದ್ದ ಜಾರ್ಜ್ ಫರ್ನಾಂಡಿಸ್ ಅವರು ಜಯಾ ಜೇಟ್ಲಿ ಅವರೊಂದಿಗೆ ವಾಸ್ತವ್ಯ ಹೂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ