‘ಮೆಟ್ರೋದಿಂದ ಜನಜೀವನ ಸುಗಮ’


Team Udayavani, Jan 30, 2019, 5:50 AM IST

30-january-6.jpg

ಮಹಾನಗರ: ಮೆಟ್ರೋ ಸಂಚಾರ ವ್ಯವಸ್ಥೆ ಆರಂಭವಾದ ಬಳಿಕ ದೇಶ-ವಿದೇಶದ ಹಲವು ನಗರದ ಜೀವನ ಮಟ್ಟ ಬಹಳಷ್ಟು ಸುಧಾರಣೆ ಕಂಡಿದೆ ಎಂದು ದೆಹಲಿ ಟ್ರಾನ್ಸಿಟ್ ಡಿಸೈನ್‌ನ ಕಾರ್ಯಕಾರಿ ನಿರ್ದೇಶಕ, ಸಾರಿಗೆ ತಜ್ಞ ಸುಶಿಲ್‌ ವರ್ಮ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ನಿರ್ಮಿತಿ ಕೇಂದ್ರ ವತಿಯಿಂದ ನಗರದ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ಮಂಗಳ ವಾರ ಆಯೋಜಿಸಿದ್ದ ‘ಸಾರಿಗೆ ಆಧಾರಿತ ಅಭಿವೃದ್ಧಿ’ ಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹೊಸದಿಲ್ಲಿಯಲ್ಲಿ ಮೆಟ್ರೋ ಬಂದ ಬಳಿಕ ಬದಲಾವಣೆ ಬಹಳಷ್ಟು ನಡೆದಿದೆ. ಇಲ್ಲಿ ಎರಡನೇ ಹಂತದ ನಗರಗಳಿಗೆ ಮೆಟ್ರೋ ವಿಸ್ತರಣೆ ಆದ ಬಳಿಕ ಅಲ್ಲಿನ ನಗರಗಳು ಅಭಿವೃದ್ಧಿ ಕಂಡಿವೆ. ರಿಯಲ್‌ ಎಸ್ಟೇಟ್ ಮಾರುಕಟ್ಟೆ ಕ್ಷಿಪ್ರವಾಗಿ ಬೆಳೆದಿದೆ. ಮೆಟ್ರೋ ವ್ಯವಸ್ಥೆ ಹಲವರಿಗೆ ಲಾಭವಾದರೂ ಅದನ್ನು ಬಳಸಿಕೊಳ್ಳಲು ಮೆಟ್ರೋ ವ್ಯವಸ್ಥೆಗೆ ಸಾಧ್ಯ ವಾಗಲಿಲ್ಲ. ಇಂತಹ ತಪ್ಪನ್ನು ಬೇರೆ ನಗರ ಪುನರಾವರ್ತಿಸಬಾರದು ಎಂದರು.

ಮೆಟ್ರೋ ವ್ಯವಸ್ಥೆಯಲ್ಲಿ ನಿಲ್ದಾಣಗಳಿಗೆ ಕನಿಷ್ಠ ಪ್ರವೇಶ ದ್ವಾರಗಳನ್ನು ರೂಪಿಸುವ ಬದಲು ಹಾಂಕಾಂಗ್‌, ಬ್ಯಾಂಕಾಕ್‌ ಮಾದರಿಯಲ್ಲಿ ಬಹುಪ್ರವೇಶ ದ್ವಾರಗಳನ್ನು, ಪ್ರಯಾಣಿಕರ ಕಾಲುದಾರಿಗಳನ್ನು ನಿರ್ಮಿ ಸುವ ಮೂಲಕ ಸಂಪರ್ಕ ಕಲ್ಪಿಸಿದರೆ ಸೂಕ್ತ, ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು.

ಅಭಿವೃದ್ಧಿಗೆ ಉತ್ತಮ ಅವಕಾಶ
ವಿಚಾರಸಂಕಿರಣವನ್ನು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜ್‌ ನಿವೃತ್ತ ಡೀನ್‌ ಪ್ರೊ| ಜಿ.ಆರ್‌. ರೈ ಉದ್ಘಾಟಿಸಿದರು. ಸ್ಮಾರ್ಟ್‌ ಸಿಟಿಯಾಗಿ ಆಯ್ಕೆಯಾಗಿರುವ ಮಂಗಳೂರಿ ನಲ್ಲಿ ಸಾರಿಗೆ ಆಧಾರಿತ ಅಭಿವೃದ್ಧಿಗೆ ಉತ್ತಮ ಅವಕಾಶವಿದೆ. ಇಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆಯಲ್ಲಿಯೂ ಏರಿಕೆ ಕಾಣುತ್ತಿದೆ. ಹೀಗಾಗಿ ಇಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕಿದೆ ಎಂದರು.

ಮಹಾನಗರಪಾಲಿಕೆ ಆಯುಕ್ತ ಮಹಮ್ಮದ್‌ ನಜೀರ್‌, ಮುಡಾ ಆಯುಕ್ತ ಶ್ರೀಕಾಂತ್‌ ರಾವ್‌ ಮಾತನಾಡಿದರು. ನಿರ್ಮಿತಿ ಕೇಂದ್ರದ ನಿರ್ದೇಶಕ ರಾಜೇಂದ್ರ ಕಲ್ಬಾವಿ ಸ್ವಾಗತಿಸಿದರು.

ವಿಜಯ ವಿಷ್ಣು ಮಯ್ಯ ನಿರೂಪಿಸಿದರು. ಕನ್ಸೆಲ್ಟಿಂಗ್‌ ಸಿವಿಲ್‌ ಎಂಜಿನಿಯರ್ ಅಸೋ ಸಿಯೇಶನ್‌ ಮಂಗಳೂರು ಕೇಂದ್ರದ ಅಧ್ಯಕ್ಷ ಅನಿಲ್‌ ಸೆಬಾಸ್ಟಿಯನ್‌ ಡಿ’ಸೋಜಾ ಅವರು ವಂದಿಸಿದರು.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.