ಲ್ಯಾನ್ಸ್‌ಡೌನ್‌ ಬಿಲ್ಡಿಂಗ್‌, ದೇವರಾಜ ಮಾರುಕಟ್ಟೆ ನೆಲಸಮಕ್ಕೆ ನಿರ್ಣಯ


Team Udayavani, Jan 30, 2019, 7:30 AM IST

m5-lansedown.jpg

ಮೈಸೂರು: ಶತಮಾನಗಳ ಇತಿಹಾಸ ಹೊಂದಿರುವ ನಗರದ ಪಾರಂಪರಿಕ ಕಟ್ಟಡಗಳಾದ ಲ್ಯಾನ್ಸ್‌ಡೌನ್‌ ಬಿಲ್ಡಿಂಗ್‌ ಮತ್ತು ದೇವರಾಜ ಮಾರುಕಟ್ಟೆಯನ್ನು ನೆಲಸಮಗೊಳಿಸಿ, ಪುನರ್‌ ನಿರ್ಮಾಣ ಮಾಡಲು ತೀರ್ಮಾನಿಸಿರುವ ನಗರ ಪಾಲಿಕೆ, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಧರಿಸಿದೆ.

ಮೇಯರ್‌ ಪುಷ್ಪಲತಾ ಜಗನ್ನಾಥ್‌ ಅಧ್ಯಕ್ಷತೆ ಯಲ್ಲಿ ಬುಧವಾರ ನಡೆದ ನಗರಪಾಲಿಕೆಯ ಸಾಮಾನ್ಯ ಕೌನ್ಸಿಲ್‌ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಸದಸ್ಯರು, ಈ ಎರಡೂ ಪಾರಂಪರಿಕ ಕಟ್ಟಡಗಳಿಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ಟಾಸ್ಕ್ ಫೋರ್ಸ್‌ನ ತೀರ್ಮಾನದಂತೆ ಲ್ಯಾನ್ಸ್‌ ಡೌನ್‌ ಬಿಲ್ಡಿಂಗ್‌ ಮತ್ತು ದೇವರಾಜ ಮಾರುಕಟ್ಟೆ ಕಟ್ಟಡವನ್ನು ನೆಲಸಮಗೊಳಿಸಿ ಮರು ನಿರ್ಮಾಣ ಮಾಡುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಣಯ ಕೈಗೊಳ್ಳಲಾಯಿತು.

ಮಾಜಿ ಮೇಯರ್‌ ಅಯೂಬ್‌ ಖಾನ್‌ ನಗರ ಪಾಲಿಕೆ 1ನೇ ವಲಯ ಸಹಾಯಕ ಆಯುಕ್ತರ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಸ್ವಚ್ಛ ಭಾರತ ಸರ್ವೇಕ್ಷಣೆ ನಡೆಯುತ್ತಿದೆ. ಅರಮನೆಯು ನಗರದ ಹೃದಯ ಭಾಗದಲ್ಲಿದ್ದು, ಅಲ್ಲಿಗೆ ಪ್ರತಿನಿತ್ಯ ಸಾವಿರಾರು ಮಂದಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಂತಹ ಸಂದರ್ಭದಲ್ಲಿ ಅರಮನೆಯ ಸುತ್ತಲೂ ಫ‌ುಟ್ಪಾತ್‌ ಮೇಲೆ ವ್ಯಾಪಾರ ಮಾಡುವವರನ್ನು ಯಾಕೆ ತೆರವುಗೊಳಿಸಿಲ್ಲ ಎಂದು ಪ್ರಶ್ನಿಸಿದರು.

ಈ ಬಗ್ಗೆ ಸಹಾಯಕ ಆಯುಕ್ತ ಸುನಿಲ್‌ ಬಾಬು ನೀಡಿದ ಸಮಜಾಯಿಷಿಯನ್ನು ಒಪ್ಪದ ಅಯೂಬ್‌ ಖಾನ್‌, ವಲಯ ಕಚೇರಿ 1ರ ಸಹಾಯಕ ಆಯುಕ್ತರನ್ನು ನಗರ ಪಾಲಿಕೆ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಮಾತೃ ಸಂಸ್ಥೆಗೆ ಕಳುಹಿಸಿಕೊಡಬೇಕು. ಅವರನ್ನು ಕರೆಸಿ ನಡೆದಿರುವ ಲೋಪದ ಕುರಿತು ವಿವರಣೆ ಕೊಡಿಸಬೇಕು ಎಂದು ಪಟ್ಟು ಹಿಡಿದರು.

ಇದಕ್ಕೆ ದನಿಗೂಡಿಸಿದ ಮ.ವಿ.ರಾಮಪ್ರಸಾದ್‌, ಜಾನ್ಸಿರಾಣಿ ಲಕ್ಷ್ಮೀಬಾಯಿ ರಸ್ತೆಯ ಇಕ್ಕೆಲಗಳಲ್ಲಿ ರಾತ್ರೋ ರಾತ್ರಿ ಅನೇಕ ಅಂಗಡಿಗಳು ತಲೆ ಎತ್ತುತ್ತಿವೆ. ಕೆಲವು ವ್ಯಕ್ತಿಗಳು ಮತ್ತು ಇಲಾಖೆಗಳು ಇದನ್ನು ದಂಧೆ ಮಾಡಿಕೊಂಡಿದ್ದಾರೆ. ಇಂತಿಷ್ಟು ರಸ್ತೆ ಎಂದು ಹಂಚಿಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಸುಬ್ಬಯ್ಯ, ಡಾ. ಅಶ್ವಿ‌ನಿ ಶರತ್‌ ಕೂಡ ದನಿಗೂಡಿ ಸಿದರು. ಈ ವೇಳೆ ಮೇಯರ್‌ ಪುಷ್ಪಲತಾ ಜಗ ನ್ನಾಥ್‌ ಅವರು, ವಲಯ ಸಹಾಯಕ ಆಯುಕ್ತ ಸುನಿಲ್‌ ಬಾಬು ಮತ್ತು ಆರೋಗ್ಯಾಧಿಕಾರಿ ಡಾ. ನಾಗರಾಜ್‌ ಅವರನ್ನು ಕರ್ತವ್ಯದಿಂದ ಬಿಡುಗಡೆ ಗೊಳಿಸುವುದಾಗಿ ರೂಲಿಂಗ್‌ ನೀಡಿದರು.

ಸಿದ್ಧಗಂಗಾ ಶ್ರೀಗೆ ಸಂತಾಪ: ಸಿದ್ಧಗಂಗಾ ಶ್ರೀಗಳಿಗೆ ನಗರಪಾಲಿಕೆ ಕೌನ್ಸಿಲ್‌ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಸದಸ್ಯರು ಶ್ರೀಗಳಿಗೆ ಭಾರತ ರತ್ನ ನೀಡುವಂತೆ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸುವಂತೆ ಆಗ್ರಹಿಸಿದರು. ಕೆಲವರು ಕುವೆಂಪುನಗರದಲ್ಲಿನ ಶಿವಕುಮಾರ ಸ್ವಾಮೀಜಿ ವೃತ್ತವನ್ನು ಅಭಿವೃದ್ಧಿಪಡಿಸಬೇಕು ಎಂದರೆ, ವಿರೋಧ ಪಕ್ಷದ ನಾಯಕ ಬಿ.ವಿ.ಮಂಜುನಾಥ್‌, ನಗರ ಪಾಲಿಕೆಯ ಹಳೇ ಕೌನ್ಸಿಲ್‌ ಸಭಾಂಗಣಕ್ಕೆ ಶಿವಕುಮಾರ ಸ್ವಾಮೀಜಿಗಳ ಹೆಸರು ನಾಮಕರಣ ಮಾಡುವಂತೆ ಕೋರಿದರು. ಉಪ ಮೇಯರ್‌ ಶಫೀ ಅಹಮದ್‌, ಆಯುಕ್ತ ಕೆ.ಎಚ್.ಜಗದೀಶ್‌ ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

6-hunsur’

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Rahul Gandhi resfused to take Leader of Opposition post In Lok Sabha

Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

Goa Calangute Beach: ಮೊಬೈಲ್,ಬ್ಯಾಗ್‍ ಕಳ್ಳತನ; ಮೂವರ ಬಂಧನ

ಬಾಗಲಕೋಟೆ: ಇಳಕಲ್ಲ ಸೀರೆಯುಟ್ಟು ಓಡಿದ 1500 ನಾರಿಯರು !

ಬಾಗಲಕೋಟೆ: ಇಳಕಲ್ಲ ಸೀರೆಯುಟ್ಟು ಓಡಿದ 1500 ನಾರಿಯರು !

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.