ಕೆಎಫ್ಡಿ ಸಂಶೋಧನೆಗೆ ಸಮಿತಿ ರಚನೆ
Team Udayavani, Jan 30, 2019, 8:49 AM IST
ಸಾಗರ: ಶಿವಮೊಗ್ಗ ಜಿಲ್ಲೆಯ ಮಂಗನ ಕಾಯಿಲೆ ನಿಯಂತ್ರಣದ ಬಗ್ಗೆ ಸರ್ಕಾರ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಿದ್ದು ಹಲವಾರು ವರ್ಷಗಳಿಂದ ಇರುವ ಕಾಯಿಲೆ ಬಗ್ಗೆ ಸಂಶೋಧನೆ ನಡೆಸಲು ಮದನ್ ಗೋಪಾಲ್ ಅವರ ನೇತೃತ್ವದಲ್ಲಿ ಮೂರು ಜನರ ತಜ್ಞರ ಸಮಿತಿಯನ್ನು ಮುಖ್ಯಮಂತ್ರಿಗಳು ರಚನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಅವರು ಪತ್ರಿಕೆಯೊಂದಿಗೆ ಮಾತನಾಡಿ, ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವುದಕ್ಕೆ ಸದ್ಯದಲ್ಲಿಯೇ ತೀರ್ಮಾನಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಅರಳಗೋಡು ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಸದ್ಯದಲ್ಲಿಯೇ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯ ಅನೇಕ ಭಾಗದಲ್ಲಿ ಮಂಗನ ಕಾಯಿಲೆಯು ಆವರಿಸುತ್ತಾ ಇದೆ. ಜನರು ಭಯಭೀತರಾಗಿ ಕೃಷಿ ಚಟುವಟಿಕೆಗಳನ್ನು ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಬಾರಿ ಕಾಯಿಲೆಯು ಭೀಕರ ಸ್ವರೂಪವನ್ನು ಪಡೆದಿದ್ದು 9 ಜನರನ್ನು ಬಲಿ ತೆಗೆದುಕೊಂಡಿದೆ. ಕಾಯಿಲೆಯ ಮುಂಜಾಗ್ರತಾ ಕ್ರಮವಾಗಿ ಕೊಡಬೇಕಾದ ಲಸಿಕೆ ಹಾಗೂ ಡಿಎಂಪಿ ಆಯಿಲ್ ಸರಬರಾಜು ಕೊರತೆಯಿಂದ ಜನರಿಗೆ ನೀಡಲು ಸಾಧ್ಯವಾಗುತ್ತಿಲ್ಲ ಎನ್ನುವುದರ ಬಗ್ಗೆ ಕಾಗೋಡು ಮುಖ್ಯಮಂತ್ರಿಗಳ ಗಮನ ಸೆಳೆದರು.
ಬುಧವಾರದಿಂದಲೇ ಲಸಿಕೆ ಹಾಗೂ ಡಿಎಂಪಿ ಆಯಿಲ್ ಕೊರತೆಯನ್ನು ನೀಗಿಸಬೇಕು ಎಂದು ಖಡಕ್ ಸೂಚನೆಯನ್ನು ಸಿಎಂ ಅಧಿಕಾರಿಗಳಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಶಿವಾನಂದ ಪಾಟೀಲ್ ಅವರು ಇದ್ದರು. ಅವರು ಭೆೇಟಿ ನೀಡಿದ್ದ ಸಂದರ್ಭದಲ್ಲಿನ ಪರಿಸ್ಥಿತಿ ಕುರಿತಂತೆ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ನೀಡಿ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಕಾಗೋಡು ಪತ್ರಿಕೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ