ಬಾಸೂರು ಕಾವಲ್‌ ಪ್ರದೇಶ ರಕ್ಷಣೆಗೆ ಒತ್ತಾಯ


Team Udayavani, Jan 30, 2019, 9:06 AM IST

chikk-3.jpg

ಕಡೂರು: ತಾಲೂಕಿನ ಅಮೃತ್‌ ಮಹಲ್‌ ಬಾಸೂರು ಕಾವಲಿನಲ್ಲಿ ಹುಲ್ಲುಗಾವಲಿಗೆ ಮತ್ತು ಕುರುಚಲು ಕಾಡಿಗೆ ದುಷ್ಕರ್ಮಿಗಳು ಅಲ್ಲಲ್ಲಿ ಬೆಂಕಿ ಹಚ್ಚುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಇದರಿಂದ ಅಪಾರ ಪ್ರಮಾಣದಲ್ಲಿ ಕಾಡು ನಾಶವಾಗುತ್ತಿದೆ.

ಬಯಲು ಸೀಮೆಯ ವನ್ಯಜೀವಿಗಳಿಗೆ ಮತ್ತು ಅಮೃತ್‌ಮಹಲ್‌ ತಳಿಯ ಗೋವುಗಳಿಗೆ ಮೇಯಲು ಸಮೃದ್ಧವಾಗಿ ಹುಲ್ಲು ಬೆಳೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಹುಲ್ಲುಗಾವಲು ಸುಟ್ಟು ಹೋಗುತ್ತಿದೆ. ಬಾಸೂರು ಸಮುದಾಯ ಸಂರಕ್ಷಣಾ ಮೀಸಲು ಅಡಿಯಲ್ಲಿ ಅಲ್ಲಿ ಸಂರಕ್ಷಣೆಯನ್ನು ಅರಣ್ಯ ಇಲಾಖೆ ಮಾಡುತ್ತಿದೆ.

ಬೇಸಿಗೆ ಪ್ರಾರಂಭದಲ್ಲೆ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದರಿಂದ ವನ್ಯಜೀವಿಗಳು ಆತಂಕದಲ್ಲಿವೆ. ಕೆಲ ದುಷ್ಕರ್ಮಿಗಳು ಅರಣ್ಯ ಪ್ರವೇಶಿಸಿ ಒಣಗಿರುವ ಹುಲ್ಲುಗಾವಲು ಮತ್ತು ಕುರುಚಲು ಕಾಡಿಗೆ ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ.

ಅಪರೂಪದ ಕೃಷ್ಣಮೃಗ ಸೇರಿದಂತೆ ನೂರಾರು ಪಕ್ಷಿ ಸಮೂಹ ಮತ್ತು ವಲಸೆ ಹಕ್ಕಿಗಳು ಈ ಭಾಗದಲ್ಲಿ ಕಂಡುಬರುತ್ತದೆ. ಕೆಲವು ಪಕ್ಷಿಗಳು ನೆಲದ ಹುಲ್ಲುಗಾವಲಿನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟು ಸಂತಾನೋತ್ಪತಿ ಪ್ರಕ್ರಿಯೆಯಲ್ಲಿ ತೊಡಗುತ್ತವೆ. ಚಿರತೆ ಸೇರಿದಂತೆ ಹಲವು ಪ್ರಾಣಿಗಳು ಇಲ್ಲಿವೆ ಈ ಬೆಂಕಿಯಿಂದ ಇವೆಲ್ಲ ನಾಶವಾಗುವ ಭೀತಿ ಎದುರಾಗಿದೆ. ಸಮೃದ್ಧ ಹುಲ್ಲು ಬೆಂಕಿಗೆ ಆಹುತಿ ಆಗುವುದರಿಂದ ಗೋವುಗಳಿಗೂ ಮೇವಿನ ಕೊರತೆ ಎದುರಾಗುವ ಸಾಧ್ಯತೆ ಇದೆ.

ಕಡೂರು ವಲಯದ ಅರಣ್ಯ ಇಲಾಖೆ ಬೆಂಕಿಕೊಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಬೆಂಕಿಯಿಂದ ಬಾಸೂರು ಕಾವಲು ಅರಣ್ಯವನ್ನು ಸಂರಕ್ಷಿಸಲು ಬೆಂಕಿ ನಿಗ್ರಹ ತಂಡವನ್ನು ರಚಿಸಿ ಬೆಂಕಿಬೀಳದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಪರಿಸರಾಸಕ್ತರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.