ಸಾಧಿಕ್‌ ನಗರಕ್ಕೆ ಮೂಲ ಸೌಲಭ್ಯ ಕಲ್ಪಿಸಿ


Team Udayavani, Jan 30, 2019, 9:50 AM IST

cta-2.jpg

ಚಿತ್ರದುರ್ಗ: ಇಲ್ಲಿನ ಸಾಧಿಕ್‌ ನಗರದ ಎಲ್ಲ ನಿವಾಸಿಗಳಿಗೆ ಕೂಡಲೇ ವಿದ್ಯುತ್‌ ಸಂಪರ್ಕ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ಹೊಣೆಗಾರಿಕೆ ಜಿಲ್ಲಾಡಳಿತದ ಮೇಲಿದೆ ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಹೇಳಿದರು.

ಸಾಧಿಕ್‌ ನಗರಕ್ಕೆ ಮಂಗಳವಾರ ಭೇಟಿ ನೀಡಿ ನಿವಾಸಿಗಳ ಅಹವಾಲುಗಳನ್ನು ಆಲಿಸಿ ಅವರು ಮಾತನಾಡಿದರು. ಹತ್ತಾರು ವರ್ಷಗಳಿಂದ ನಿವಾಸಿಗಳು ವಿದ್ಯುತ್‌ ಇಲ್ಲದೆ ಕತ್ತಲಲ್ಲಿ ಬದುಕಲು ಹೇಗೆ ಸಾಧ್ಯ, ಗುಡ್ಡ, ಬೆಟ್ಟದ ಸಮೀಪ ರಾಜೀವ್‌ ಗಾಂಧಿ ವಸತಿ ಯೋಜನೆ ಅಡಿ ಮನೆಗಳನ್ನು ನಿರ್ಮಿಸಿ ಸರ್ಕಾರವೇ ನೀಡಿದೆ. ಆದರೆ ವಿದ್ಯುತ್‌, ಕುಡಿಯುವ ನೀರು, ಚರಂಡಿಯ ಮೂಲ ಸೌಲಭ್ಯಗಳನ್ನು ಕಲ್ಪಿಸದಿದ್ದರೆ ಹೇಗೆಂದು ಪ್ರಶ್ನಿಸಿದರು. ಸಮಸ್ಯೆ ನಿವಾರಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಇಲಾಖೆ, ಬೆಸ್ಕಾಂ, ನಗರಸಭೆ ಅಧಿಕಾರಿಗಳು ಕಾನೂನಿನ ತೊಡಕು ನಿವಾರಿಸಿಕೊಂಡು ಸಾಧಿಕ್‌ ನಗರದ ವಿವಿಧ ಬೀದಿಗಳಿಗೆ ವಿದ್ಯುತ್‌ ಕಂಬ ಹಾಕಿ ಒಂದು ವಾರದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಮುಂದಾಗಬೇಕು ಎಂದರು.

ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಮಾತನಾಡಿ, ಈ ಬಡಾವಣೆಗೆ ವಿದ್ಯುತ್‌ ಏಕೆ ನೀಡಲಾಗಿಲ್ಲ ಎನ್ನುವ ಸಮಸ್ಯೆ ಅರಿತು ಇನ್ನೊಂದು ವಾರದಲ್ಲಿ ತಾಂತ್ರಿಕ ತೊಂದರೆ ಏನು ಎಂಬುದನ್ನು ತಿಳಿಸಲಾಗುತ್ತದೆ. ನಿರ್ದಿಷ್ಟ ಸಮಸ್ಯೆ ತಿಳಿದ ಮೇಲೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.

ಕಂದಾಯ, ಬೆಸ್ಕಾಂ, ನಗರಾಭಿವೃದ್ಧಿ ಇಲಾಖೆ, ನಗರಸಭೆ ಅಧಿಕಾರಿಗಳು ಜ. 30 ರಂದು ಒಟ್ಟಿಗೆ ಸಭೆ ನಡೆಸಬೇಕು. ಸಮಸ್ಯೆ ಏನೆಂದು ಅರಿತು ವರದಿ ನೀಡಬೇಕು ಎಂದು ಸೂಚಿಸಿದರು.

ಅನರ್ಹ ಫಲಾನುಭವಿಗಳಿಗೆ ಆಶ್ರಯ ಮನೆಗಳು ಮಂಜೂರಾಗಿದ್ದು ಅವರೆಲ್ಲ ಬಡವರಿಗೆ ಬಾಡಿಗೆ ನೀಡಿ ಹೋಗಿದ್ದಾರೆ ಎನ್ನುವ ದೂರು ಆಲಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಪರಿಶೀಲನೆ ನಡೆಸಿ ಯಾವ ಮನೆಯಲ್ಲಿ ಅನರ್ಹರು ವಾಸವಾಗಿದ್ದಾರೆ, ಯಾರಿಗೆ ಮಂಜೂರಾಗಿತ್ತು, ಮಂಜೂರುದಾರರು ಏಕೆ ವಾಸಿಸುತ್ತಿಲ್ಲ ಇತ್ಯಾದಿ ಮಾಹಿತಿಗಳುಳ್ಳ ವರದಿಯನ್ನು ತುರ್ತಾಗಿ ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು.

ಬೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಮಲ್ಲಿಕಾರ್ಜುನ್‌ ಮಾತನಾಡಿ, ಸಾಧಿಕ್‌ ನಗರದ ಸಮಗ್ರ ನಕ್ಷೆ, ಸರ್ಕಾರದಿಂದ ಭೂ ಪರಿವರ್ತನೆಯಾದ ದಾಖಲೆ, ಯಾವ್ಯಾವ ಮನೆ, ಬೀದಿಗಳಿಗೆ ವಿದ್ಯುತ್‌ ಕಂಬ ಹಾಕಿ ಲೈನ್‌ ಎಳೆಯಬೇಕು ಎನ್ನುವ ಪ್ರತ್ಯೇಕ ನಕ್ಷೆ ನೀಡಿದರೆ ಅಂದಾಜು ಪಟ್ಟಿ ತಯಾರಿಸಿ ಅನುಮೋದನೆ ನೀಡಲಾಗುತ್ತದೆ. ಕನಿಷ್ಠ 10 ಲಕ್ಷ ರೂ. ವೆಚ್ಚ ಆಗುವ ಸಾಧ್ಯತೆ ಇದ್ದು ಇದರಲ್ಲಿ ಶೇ.10 ರಷ್ಟು ನಿರ್ವಹಣಾ ವೆಚ್ಚವನ್ನು ಬೆಸ್ಕಾಂಗೆ ತುಂಬಬೇಕು. ವಿದ್ಯುತ್‌ ಕಂಬ, ವೈರ್‌ ಖರೀದಿ ಮಾಡಿ ಕೊಟ್ಟರೆ ಒಂದು ವಾರದಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತದೆ ಎಂದರು.

ನಗರಸಭೆ ಸಹಾಯಕ ಇಂಜಿನಿಯರ್‌ ರಂಗನಾಥ್‌ ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ ವತಿಯಿಂದ 2004ರಲ್ಲೇ ಅನುಮೋದನೆ ಪಡೆಯಲಾಗಿದೆ. ಮತ್ತೆ ಪ್ರತ್ಯೇಕ ನಕ್ಷೆ ಕೇಳಿದರೆ ಕೊಡಲು ಬರುವುದಿಲ್ಲ. ಇರುವ ನಕ್ಷೆಗೆ ಇಂತಿಷ್ಟು ಭಾಗದಲ್ಲಿ ವಿದ್ಯುತ್‌ ಲೈನ್‌ ಎಳೆದಿಲ್ಲ, ಇದಕ್ಕೆ ಎಸ್ಟಿಮೇಟ್ ಮಾಡಿಕೊಟ್ಟರೆ ನಿರ್ವಹಣಾ ವೆಚ್ಚ ಕಟ್ಟಿ ವಿದ್ಯುತ್‌ ಲೈನ್‌ ಎಳೆಸಬಹುದು ಎಂದು ಹೇಳಿದರು.

ಉಪವಿಭಾಗಾಧಿಕಾರಿ ವಿಜಯ್‌ಕುಮಾರ್‌ ಮಾತನಾಡಿ, ಸರ್ಕಾರಿ ಬಡಾವಣೆಗಳಿಗೆ ಅಥವಾ ಸರ್ಕಾರದ ಜಮೀನುಗಳನ್ನು ಭೂ ಪರಿವರ್ತನೆ ಮಾಡಿಕೊಡುವ ಅಗತ್ಯವಿಲ್ಲ. ಬೆಸ್ಕಾಂ ಅಧಿಕಾರಿಗಳು ಭೂ ಪರಿವರ್ತನೆ ದಾಖಲೆ ಕೇಳಿದರೆ ಹೇಗೆ ಕೊಡಲು ಸಾಧ್ಯ, ಇರುವ ದಾಖಲೆಗಳನ್ನೇ ಪಡೆದು ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು ಎಂದರು.

ದೂರುಗಳ ಸುರಿಮಳೆ
ಗುಡ್ಡ, ಬೆಟ್ಟದ ಸಮೀಪ ಇದ್ದು ಹತ್ತಾರು ವರ್ಷಗಳಿಂದ ಕತ್ತಲಲ್ಲಿ ಬದುಕುತ್ತಿದ್ದೇವೆ. ಬಹುತೇಕ ಮನೆಗಳು ಕಳಪೆಯಾಗಿವೆ. ಅನರ್ಹರಿಗೆ ಮನೆ ಮಂಜೂರು ಮಾಡಲಾಗಿದ್ದು, ಅವರೆಲ್ಲ ಬಾಡಿಗೆಗೆ ನೀಡಿ ಹೋಗಿದ್ದಾರೆ. ಬಡವರು ವಾಸಿಸುತ್ತಿದ್ದು ಅವರನ್ನೇ ಫಲಾನುಭವಿಗಳು ಎಂದು ತೀರ್ಮಾನ ಮಾಡಬೇಕು. ಕುಡಿಯುವ ನೀರು, ಚರಂಡಿ, ಬೀದಿದೀಪದ ವ್ಯವಸ್ಥೆ ಮಾಡಬೇಕು ಎಂದು ಸಂಸದರು, ಜಿಲ್ಲಾಧಿಕಾರಿಗಳ ಬಳಿ ಸಾಧಿಕ್‌ ನಗರದ ನಿವಾಸಿಗಳು ದೂರುಗಳ ಸುರಿಮಳೆಗೈದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.