ಮಂಜಿಗೆ ಬಿಸಿಲೂರು ಥಂಡಾ!


Team Udayavani, Jan 30, 2019, 10:25 AM IST

ray-1.jpg

ರಾಯಚೂರು: ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂಜಾನೆ ಮಂಜಿಗೆ ಬಿಸಿಲೂರು ಜನ ಥರಗುಟ್ಟುವಂತಾಗಿದೆ. ಶೀತಗಾಳಿಗೆ ಜನ ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ.

ಸಾಮಾನ್ಯವಾಗಿ ಜಿಲ್ಲೆಯಲ್ಲಿ ಫೆಬ್ರವರಿ ವೇಳೆಗೆ ಸಣ್ಣ ಪ್ರಮಾಣದ ಬಿಸಿಲು ಶುರುವಾಗುತ್ತದೆ. ಸಂಕ್ರಾಂತಿ ವೇಳೆ ಸೂರ್ಯ ಪಥ ಬದಲಾವಣೆ ಈ ಭಾಗದ ಬೇಸಿಗೆ ಆರಂಭದ ಸಂಕೇತ. ಆದರೆ, ಈ ಬಾರಿ ಇನ್ನೂ ಅಷ್ಟೊಂದು ಪ್ರಮಾಣದ ಬಿಸಿಲು ದಾಖಲಾಗಿಲ್ಲ. ಅದರ ಬದಲಿಗೆ ಬೆಳಗಿನ ಜಾವ ಕೊರೆವ ಚಳಿ ಇದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ 14-15 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ.

ಸಾಮಾನ್ಯವಾಗಿ ಜನವರಿಯಲ್ಲಿ ಕೇಡು ಮಳೆ ಬರುವ ಸಾಧ್ಯತೆ ಇದೆ ಎನ್ನುತ್ತಾರೆ ರೈತರು. ಬೆಳೆದು ನಿಂತು ಜೋಳ ಕೇಡು ಮಳೆಯಿಂದ ಕಾಡಿಗೆ (ಕಪ್ಪು) ಆಗುವ ಸಾಧ್ಯತೆ ಇರುತ್ತದೆ. ಆದರೆ, ಕೆಲವೆಡೆ ಮಳೆ ಆದರೆ ಉಳಿದೆಲ್ಲ ಕಡೆ ಮಂಜು ಮುಸುಕಿದ ವಾತಾವರಣ ಇದೆ. ಅದೂ ಅಲ್ಲದೇ, 1-2 ಮಿ.ಮೀ. ಮಳೆಯಾಗುತ್ತಿದ್ದು, ಈ ಬಾರಿ 10 ಮಿ.ಮೀ. ಮಳೆಯಾಗಿದೆ.

ರೈತರಲ್ಲಿ ಆತಂಕ: ಈ ಬಾರಿ ಮುಂಗಾರು, ಹಿಂಗಾರು ಮಳೆ ಸಂಪೂರ್ಣ ಕೈಕೊಟ್ಟಿದೆ. ಹಿಂಗಾರಿನಲ್ಲಿ ಕೆಲವೆಡೆ ರೈತರು ಜೋಳ, ಕಡಲೆ ಬಿತ್ತನೆ ಮಾಡಿದ್ದಾರೆ. ಈಗ ಜೋಳ ಕಾಯಿ ಕಟ್ಟುವ ವೇಳೆಯಾಗಿದೆ. ಇನ್ನು ಕಡಲೆ ಕೂಡ ಬಿಡಿಸಲಾಗುತ್ತಿದೆ. ಇಂಥ ಹೊತ್ತಲ್ಲಿ ಕೇಡು ಮಳೆ ಬಂದಲ್ಲಿ, ಇಲ್ಲವೇ ಇಂಥ ವಾತಾವರಣ ಇದ್ದರೆ ಜೋಳ ಕಾಡಿಗೆ ಆಗಲಿದೆ. ಕಿತ್ತು ಹಾಕಿದ ಒಣಕಡಲೆ ಮೊಳಕೆ ಬರುವ ಸಾಧ್ಯತೆ ಇರಲಿದೆ. ಈ ಕಾರಣಕ್ಕೆ ರೈತರಲ್ಲಿ ಆತಂಕ ಮನೆ ಮಾಡಿದೆ. ಸಾಕಷ್ಟು ಕಡೆ ಹಿಂಗಾರು ಬಿತ್ತನೆ ಮಾಡಲಾಗಿದೆ ಆದರೂ ಸೂಕ್ತ ಇಳುವರಿಯೇ ಬಂದಿಲ್ಲ. ಬಂದಿರುವ ಅಲ್ಪ ಸ್ವಲ್ಪ ಇಳುವರಿ ಹೀಗೆ ಪ್ರಕೃತಿ ವಿಕೋಪಕ್ಕೆ ಸಿಲುಕಿದರೆ ಹೇಗೆ ಎಂಬ ಚಿಂತೆ ರೈತಾಪಿ ವರ್ಗವನ್ನು ಕಾಡುತ್ತಿದೆ.

ಬರೀ ಚಳಿ ಇದ್ದರೆ ಸಮಸ್ಯೆ ಇರಲಿಲ್ಲ. ಆದರೆ, ಅದರ ಜತೆಗೆ ತಂಪು ಗಾಳಿ ಬಿಸುತ್ತಿದೆ. ಇದರಿಂದ ಜೋಳದ ಗಿಡಗಳು ನೆಲಕ್ಕೆ ಉರುಳುತ್ತಿವೆ. ಕೆಲವೆಡೆ ಸಣ್ಣ ಪ್ರಮಾಣದ ಮಳೆಯಾಗಿದೆ. ಇದರಿಂದ ಜೋಳ ಕಪ್ಪಾಗುವ ಸಾಧ್ಯತೆ ಇದೆ. ಇನ್ನು ಒಣಕಡಲೆ ಕೂಡ ತಂಪಾಗುವುದರಿಂದ ಮತ್ತೆ ಅದನ್ನು ಒಣಗಿಸುವ ಕೆಲಸ ಮಾಡಬೇಕಿದೆ. ತಂಪು ಹೆಚ್ಚಾದರೂ ಸಮಸ್ಯೆ ಎದುರಾಗಲಿದೆ.
•ಜಯಪ್ಪಸ್ವಾಮಿ ಉಡುಮಗಲ್‌, ರೈತ ಮುಖಂಡ

ಸಾಮಾನ್ಯವಾಗಿ ಮಳೆ ಬಂದರೆ ಇಷ್ಟು ತಂಪು ವಾತಾವರಣ ಇರುವುದಿಲ್ಲ. ಇದು ಸೈಕ್ಲೋನ್‌ ಪರಿಣಾಮ. ಶೀತ ಗಾಳಿ ಜತೆ ಚಳಿ ಹೆಚ್ಚಾಗಿರುವುದು ಚಂಡಮಾರುತಗಳಿದ್ದಾಗ ಮಾತ್ರ. ಕಳೆದೆರಡು ದಿನಗಳಿಗೆ ಹೋಲಿಸಿದರೆ, ಈಗ ಸ್ವಲ್ಪ ವಾತಾವರಣ ತಿಳಿಯಾಗಿದೆ.
•ಡಾ| ಸತ್ಯನಾರಾಯಣ, ಕೃಷಿ ವಿವಿ ಹವಾಮಾನ ತಜ್ಞ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.