ಭಕ್ತರಿಗಿದೆ ಉಟಕನೂರು ತಾತನ ಶ್ರೀರಕ್ಷೆ


Team Udayavani, Jan 30, 2019, 10:28 AM IST

ray-2.jpg

ಬಳಗಾನೂರು: ನಾಡಿನ ಅನೇಕ ಮಠಮಾನ್ಯಗಳು ಆಧ್ಯಾತ್ಮ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುತ್ತಿವೆ. ಅಂತಹ ಮಠಗಳಲ್ಲಿ ಉಟಕನೂರು ಶ್ರೀ ಮರಿಬಸವಲಿಂಗ ಶಿವಯೋಗಿಗಳ ಮಠವೂ ಒಂದಾಗಿದೆ. ಉಟಕನೂರು ತಾತನ ಆಶೀರ್ವಾದ, ಶ್ರೀರಕ್ಷೆ ಸದಾ ಭಕ್ತರಿಗೆ ಇದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಸಮೀಪದ ಉಟಕನೂರು ಗ್ರಾಮದಲ್ಲಿ ಶ್ರೀ ಬಸವಲಿಂಗ ದೇಶಿಕೇಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ, 28ನೇ ಜಾತ್ರಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಆಧ್ಯಾತ್ಮ ಜೀವನ ದರ್ಶನ ಪ್ರವಚನ ಮಂಗಲ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉಟಕನೂರು ತಾತಪ್ಪ ಎಂದೇ ಖ್ಯಾತರಾದ ಶ್ರೀ ಮರಿಬಸವಲಿಂಗ ಶಿವಯೋಗಿಗಳ ಪಾದ ಸ್ಪರ್ಶದಿಂದ ಈ ಗ್ರಾಮ ಪುಣ್ಯಕ್ಷೇತ್ರವಾಗಿದೆ. ತಾತಪ್ಪನವರ ನುಡಿಗಳು ಭಕ್ತರಲ್ಲಿ ಆತ್ಮಸ್ಥೈರ್ಯ ತುಂಬಿ ಬಾಳು ಬೆಳಗಿದೆ. ತಾತನವರ ಕೃಪಾಶೀರ್ವಾದಿಂದ ತಾವು ಮೂರು ಬಾರಿ ಶಾಸಕರಾಗಿದ್ದಾಗಿ ಹೇಳಿದರು.

ಉಪನ್ಯಾಸ ನೀಡಿದ ಮಲ್ಲಣ್ಣ ನಾಗರಾಳ, ಪ್ರತಿಯೊಬ್ಬರಿಗೂ ತುತ್ತು ಅನ್ನ ನೀಡುವ ಒಕ್ಕಲುತನ ಎಲ್ಲ ಉದ್ಯೋಗಗಳ ಮೂಲವಾಗಿದೆ. ಮಣ್ಣು ನಂಬಿ ಬದುಕಿದವರಿಗೆ ಯಾವತ್ತಿಗೂ ಬಡತನ ಬರುವುದಿಲ್ಲ. ಮಣ್ಣಿನ ಸಂರಕ್ಷಣೆ, ಮಳೆ ನೀರು ಸಂಗ್ರಹಕ್ಕೆ ಆದ್ಯತೆ ನೀಡಬೇಕು. ಹಿರಿಯ ಕೃಷಿಕರ ಮಾರ್ಗದರ್ಶನದಲ್ಲಿ ಯುವಜನತೆ ಕೃಷಿಯಲ್ಲಿ ಮುಂದುವರಿಯಬೇಕು. ಕೃಷಿಕರಾದ ನಾವೇ ದೇಶದ ಸಂಪತ್ತು ಎನ್ನುವುದನ್ನು ಮರೆಯಬಾರದು ಎಂದರು.

ಯೋಧರಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ಸಂಗನಗೌಡ ಸಿಂಧನೂರು, ಬಿಎಸ್‌ಎಫ್‌ ಯೋಧ ನೀರಮಾನ್ವಿ ಜೆ. ಹನುಮಂತಪ್ಪ, ಸಿಆರ್‌ಎಫ್‌ಇ ಉಟಕನೂರಿನ ಗುಡದಯ್ಯ ಪ್ರಜಾರಿ, ಮಾಜಿ ಸೈನಿಕ ಶೇಖರಪ್ಪ ತಡಕಲ್‌. ಬಿಎಸ್‌ಎಫ್‌ ಯೋಧ ರಮೇಶ ಮುಷ್ಟೂರು, ಸಿಆರ್‌ಎಫ್‌ಇ ಹನುಮಂತಪ್ಪ ನಸಲಾಪುರ, ತಿಪ್ಪಣ್ಣ ಹರವಿ ಅವರನ್ನು ಗೌರವಿಸಲಾಯಿತು.

ರೈತರಿಗೆ ಸನ್ಮಾನ: ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಾದ ಸಿರಗುಪ್ಪ ಪಂಪನಗೌಡ ಜಗಿನಾಳ, ರೈತ ಹೋರಾಟಗಾರ ಬಸವರಾಜಪ್ಪಗೌಡ ಹರ್ವಾಪುರ ಅವರನ್ನು ಸನ್ಮಾನಿಸಲಾಯಿತು.

ವೈದ್ಯರಿಗೆ ಸನ್ಮಾನ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ| ಶಂಕರಗೌಡ ಸಿಂಧನೂರು, ಡಾ| ಬಿ. ಬಸವರಾಜಪ್ಪ ಉಟಕನೂರು, ಡಾ| ಅಮರೇಶ ನಾಗಲೀಕರ ಬಳಗಾನೂರು, ಡಾ| ಬಸವಲಿಂಗಪ್ಪ ದಿವಟರ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸೇವೆಗೈದ ನಿವೃತ್ತ ಮುಖ್ಯಗುರು ಬಳಗಾನೂರಿನ ವೀರಣ್ಣ ಹಂಪಗುಂದಿ ಅವರನ್ನು ಸನ್ಮಾನಿಸಲಾಯಿತು. ಸಂತೆಕಲ್ಲೂರಿನ ಶ್ರೀ ಮಹಾಂತಲಿಂಗ ಸ್ವಾಮೀಜಿ, ಕರೆಗುಡ್ಡದ ಶ್ರೀ ಮಹಾಂತಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ನೇತೃತ್ವ ವಹಿಸಿದ್ದ ಶ್ರೀ ಮರಿ ಬಸವರಾಜ ದೇಶಿಕೇಂದ್ರ ಸ್ವಾಮೀಜಿ ಅವರು ಶಾಸಕ ಪ್ರತಾಪಗೌಡ ಪಾಟೀಲ ಹಾಗೂ ಶ್ರೀಮಠಕ್ಕೆ ಸೇವೆಗೈದ ಭಕ್ತರು, ದಾನಿಗಳು, ಕಲಾವಿದರಿಗೆ ಆಶೀರ್ವದಿಸಿದರು.

ಗೌಡನಬಾವಿ ಶ್ರೀಮಠದ ನಾಗಪ್ಪ ತಾತನವರು, ಮುಖಂಡರಾದ ಶೇಖರಪ್ಪ ಮೇಟಿ, ಹಿರಿಯ ಸಾಹಿತಿ ಮಹಾಂತೇಶ ಮಸ್ಕಿ ಸೇರಿದಂತೆ ಮುಖಂಡರು, ಸುತ್ತಲಿನ ಗ್ರಾಮಗಳ ಭಕ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ;ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ;ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ;ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ;ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.