ಫಲಪುಷ್ಪ ಮೇಳಕ್ಕೆ ಶಿರಸಿ ಸಜ್ಜು


Team Udayavani, Jan 30, 2019, 11:00 AM IST

30-january-22.jpg

ಶಿರಸಿ: ಇನ್ನು ಮೂರೇ ದಿನಗಳಲ್ಲಿ ಶಿರಸೀಲಿ ಫಲ ಪುಷ್ಪಗಳದ್ದೇ ಹವಾ. ಏಕೆಂದರೆ, ಹನ್ನೊಂದನೇ ವರ್ಷದ ಫಲ ಪುಷ್ಪ ಪ್ರದರ್ಶನ ಹಾಗೂ ಕಿಸಾನ್‌ ಮೇಳ ಫೆ.2 ರಿಂದ ಮೂರು ದಿನ ಇಲ್ಲಿನ ತೋಟಗಾರಿಕಾ ಇಲಾಖೆ ಆವಾರದಲ್ಲಿ ಏರ್ಪಡಿಸಲಾಗಿದೆ.

ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಆತ್ಮ ಯೋಜನೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಕಾರದಲ್ಲಿ ನಡೆಯುವ ಫಲಪುಷ್ಪ ಮೇಳದಲ್ಲಿ ಆಕರ್ಷಕ ಪುಷ್ಪ ಸಂತೆ, ತರಕಾರಿ ಬೇಸಾಯ, ಉಪನ್ಯಾಸ, ಜಿಲ್ಲೆಯ ತೋಟಗಾರಿಕಾ ಬೆಳೆಗಳ ಪ್ರದರ್ಶನ, ಸ್ಪರ್ಧೆ ನಡೆಯಲಿದೆ ಎಂದು ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸತೀಶ ಹೆಗಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಳೆದೆರಡು ತಿಂಗಳಿಂದ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ 19 ಅಡಿ ಎತ್ತರದ ಪುಷ್ಪ ಮಂಟಪ, ಆಕರ್ಷಕ ಪುಷ್ಪ ರಂಗೋಲಿ, ಹೂವಿನಿಂದಲೇ ತಯಾರು ಮಾಡಿದ ಡ್ರಾಗನ್‌ ಫ್ಲೈ, ಕುಂಬಳಕಾಯಿ ಹುಳ, ಚಿಟ್ಟೆ, ಫಿರಂಗಿ, ಬನವಾಸಿಯ ಎರಡು ಆನೆಗಳು, ಬುಟ್ಟಿಯಲ್ಲಿರುವ ನಾಯಿ ಮರಿ ಅರಳಲಿವೆ. ತರಕಾರಿ ಬೆಳೆಗಳಾದ ಬದನೆ, ಹೂಕೋಸು, ಖಾಲಿ ಪ್ಲವರ್‌, ಟೊಮೇಟೋ, ಮೆಣಸು, ಮೂಲಂಗಿ, ಕಲ್ಲಂಗಡಿ ಸೇರಿದಂತೆ ವೈವಿಧ್ಯಮಯ ಬೆಳೆಗಳ ವೃತ್ತ ಸಿದ್ಧಗೊಳಿಸಲಾಗಿದೆ. ಇರಿಗೇಶನ್‌ ಸಹಿತ ನೂತನ ಮಾದರಿಯಲ್ಲಿ ಮನೆಯಲ್ಲೂ ತರಕಾರಿ ಬೆಳೆಸಲು ಪ್ರೋತ್ಸಾಹ ಆಗುವ ನಿಟ್ಟಿನಲ್ಲಿ ಬೇಸಾಯ ಮಾಡಲಾಗಿದೆ. ತೆಂಗಿನಕಾಯಿ ಕರಟದ ಆಗೃತಿಗಳ ಪ್ರದರ್ಶನವೂ ಇದೆ. ಜಾಗನಳ್ಳಿಯ ಕಲಾ ತಂಡ ಆಕರ್ಷಕ ಪುಷ್ಪ ಮಂಟಪ ಸಿದ್ದಗೊಳಿಸುತ್ತಿದೆ ಎಂದು ತಿಳಿಸಿದರು.

ಎಂಟ್ರಿನಮ್‌, ಟೊರಿನೋಯಾ, ಪೆಟೂನಿಯಾ, ಜಿರಾನಿಯಂ, ಪೆಂಟಾಸ್‌ ಸೇರಿದಂತೆ 32 ಜಾತಿ ಪುಷ್ಪಗಳು ಇಲ್ಲಿ ಅನಾವರಣವಾಗಲಿದೆ. ಗುಲಾಬಿಯಲ್ಲೂ ಹತ್ತಾರು ಬಗೆಯವು ಇಲ್ಲಿವೆ. ಸೇವಂತಿಗೆಯಲ್ಲಿ ಶಿರಸಿ ತಾಲೂಕಿನಲ್ಲೇ ಬೇಸಾಯ ಮಾಡಿದ ಇಬ್ಬರು ರೈತರಿಂದ ಖರೀದಿಸಲಾಗುತ್ತಿದೆ. ಉಳಿದ ಕಡೆ ಬೆಂಗಳೂರು ಸಹಿತ ರೈತರಿಂದಲೇ ಪುಷ್ಪ ಖರೀದಿಸಲಾಗುತ್ತಿದೆ. ಇಲಾಖೆಯಿದ 6 ಲಕ್ಷ ರೂ. ಅನುದಾನ, ಆತ್ಮ ಯೋಜನೆಯಿಂದ ಎರಡೂವರೆ ಲಕ್ಷ ರೂ. ಅನುದಾನ ಸಿಕ್ಕಿದ್ದು, 13 ಲಕ್ಷ ರೂ. ಖರ್ಚು ಬರುವ ನಿರೀಕ್ಷೆ ಇದೆ ಎಂದ ಅವರು, ಫೆ.2ರ ಬೆಳಗ್ಗೆ 8ರಿಂದ ಪುಷ್ಪ ರಂಗೋಲಿ ಸ್ಪರ್ಧೆ, ಫೆ.3ರ ಬೆಳಗ್ಗೆ 10:30ರಿಂದ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ತರಕಾರಿ ಬೇಸಾಯ ಕೂಡ ನಡೆಯಲಿದೆ. ಹನ್ನೊಂದು ತಾಲೂಕುಗಳ ಹನ್ನೊಂದು ಬೆಳೆಗಳ ಅನಾವರಣ ಕೂಡ ಇಲ್ಲಾಗಲಿದೆ ಎಂದೂ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಫೆ.2ರ ಮಧ್ಯಾಹ್ನ 12ಕ್ಕೆ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವರಾಮ ಹೆಬ್ಟಾರ, ದಿನಕರ ಶೆಟ್ಟಿ, ರೂಪಾಲಿ ನಾಯ್ಕ, ಸುನೀಲ ನಾಯ್ಕ, ಬಸವರಾಜ ಹೊರಟ್ಟಿ, ಶ್ರೀಕಾಂತ ಘೋಕ್ಲೃಕರ್‌, ಜಿಪಂ ಅಧ್ಯಕ್ಷ ಜಯಶ್ರೀ ಮೊಗೇರ ಇತರರು ಪಾಲ್ಗೊಳ್ಳುವರು.

ತೋಟಗಾರಿಕಾ ಅಧಿಕಾರಿ ಗಣೇಶ ಹೆಗಡೆ, ಕೃಷಿ ಅಧಿಕಾರಿ ವಸಂತ ಬೆಳಗಾಂವಕರ್‌, ಕೃಷಿ ವಿಜ್ಞಾನಿ ಎಂ.ಎಸ್‌.ಮಂಜು ಇತರರು ಇದ್ದರು.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.