ಮತದಾನ ಹಕ್ಕು ವಿವೇಚನೆಯಿಂದ ಬಳಸಿ


Team Udayavani, Jan 31, 2019, 11:53 AM IST

yad-1.jpg

ಸುರಪುರ: ದೇಶದ ಅಭಿವೃದ್ಧಿ ಯುವಕರ ಕೈಯಲ್ಲಿ ಅಡಗಿದೆ. ದೇಶದ ಅಭಿವೃದ್ಧಿಗಾಗಿ ಮತದಾನದ ಹಕ್ಕು ಸಂವಿಧಾನದತ್ತವಾಗಿ ಕೊಡಮಾಡಲ್ಪಟ್ಟಿದೆ. ಈ ಮತದಾನ ಹಕ್ಕನ್ನು ಯುವಕರು ವಿವೇಚನೆಯಿಂದ ಬಳಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಡಿ. ನಾಗರಾಜೇಗೌಡ ಹೇಳಿದರು.

ಇಲ್ಲಿಯ ಜೆಎಂಎಫ್‌ಸಿ ನ್ಯಾಯಾಲಯ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಮತ್ತು ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರಬಲ ಅಸ್ತ್ರ. ಈ ಅಸ್ತ್ರದ ಮೂಲಕ ನಾಗರಿಕರು ತಮಗೆ ಬೇಕಾದ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇದೆ. ದೇಶದ ಅಭಿವೃದ್ಧಿ ಹಾಗೂ ಸ್ಥಿತಿಗತಿಗಳು ನಿಮ್ಮ ಮತವನ್ನು ಅವಲಂಬಿಸಿದೆ. ಇಲ್ಲಿ ಪ್ರತಿ ಮತಕ್ಕೂ ಮೌಲ್ಯವಿದೆ. ಹೀಗಾಗಿ ಯುವಕರು ವಿವೇಚನೆಯಿಂದ ಮತ ಚಲಾಯಿಸಬೇಕು ಎಂದು ಸಲಹೆ ನೀಡಿದರು.

18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾರರಾಗಿ ಹೆಸರು ನೋಂದಾಯಿಸಿಕೊಳ್ಳುವ ಜತೆಗೆ ಪ್ರತಿ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು. ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಬೇಕು. ಶ್ರೀಮಂತ, ಬಡವನ ಮತಕ್ಕೆ ಮೌಲ್ಯ ಒಂದೇ. ಮತ ಎಂಬುದು ದೇಶದ ಭವಿಷ್ಯ ಬದಲಿಸುವ ಪ್ರಬಲ ಅಸ್ತ್ರ ಇದ್ದಂತೆ. ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಜೊತೆಗೆ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಹೇಳಿದರು.

ಸಿವಿಲ್‌ ನ್ಯಾಯಾಧಿಧೀಶ ವಿನೋದ ಬಾಳನಾಯ್ಕ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಯುವ ಜನತೆ ಚುನಾವಣಾ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. 18 ವರ್ಷ ತುಂಬಿದ ಯುವಕ-ಯುವತಿಯರು ತಪ್ಪದೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಸಂವಿಧಾನ ಕಲ್ಪಿಸಿರುವ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಹೆಚ್ಚುವರಿ ನ್ಯಾಯಾಧೀಶ ಅಮರನಾಥ ಬಿ.ಎನ್‌. ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಜನ ನಾಯಕ ಚುನಾಯಿಸುವ ಅಧಿಕಾರವನ್ನು ಪ್ರಜೆಗಳಿಗೆ ನೀಡಿದ್ದು, ಇದಕ್ಕಾಗಿ ಪ್ರತಿಯೊಬ್ಬರು ಮತದಾನ ಮಾಡುವುದು ಅವಶ್ಯಕ. ಯುವ ಜನತೆ ದೇಶದ ಭವಿಷ್ಯವನ್ನು ಬದಲಾಯಿಸುವ ಶಕ್ತಿ ಹೊಂದಿದ್ದು, ದೇಶದ ಎಲ್ಲ ಜನತೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಮತದಾನ ಮಾಡಿದಲ್ಲಿ ಸುಭದ್ರ, ಸುಸ್ಥಿರ, ಬಲಿಷ್ಟ ಸರ್ಕಾರ ಮತ್ತು ಉತ್ತಮ ಪ್ರಜಾಪ್ರಭುತ್ವಕ್ಕೆ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದು ನುಡಿದರು.

ವಕೀಲರಾದ ವಿಶ್ವಮಿತ್ರ ಕಟ್ಟಿಮನಿ ಮತ್ತು ಗೋಪಾಲ ತಳವಾರ ಉಪನ್ಯಾಸ ನೀಡಿದರು. ನ್ಯಾಯವಾದಿಗಳಾದ ದೇವಿಂದ್ರಪ್ಪ ಬೇವಿನಕಟ್ಟಿ, ಬಸವರಾಜ ಕಿಲ್ಲೇದಾರ್‌, ಎಪಿಪಿ ಮಹಾಂತೇಶ ಮಸಳಿ, ಬಸಲಿಂಗಪ್ಪ ಪಾಟೀಲ ದೇವಿಂದ್ರಪ್ಪ ಭೇವಿನಕಟ್ಟಿ, ಬಸವರಾಜ ಕಿಲ್ಲೇದಾರ ಇದ್ದರು. ಹಿರಿಯ-ಕಿರಿಯ ವಕೀಲರು ಕಕ್ಷಿದಾರರು ಇದ್ದರು. ಯಂಕಾರಡ್ಡಿ ಹವಲ್ದಾರ್‌ ಸ್ವಾಗತಿಸಿದರು. ಅಪ್ಪಣ್ಣ ಗಾಯಕವಾಡ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.