ಜೆಟ್‌ ಏರ್‌ವೇಸ್‌ ಬಿಕ್ಕಟ್ಟು: ಬೇಕಿದೆ ಕಾಯಕಲ್ಪ


Team Udayavani, Feb 1, 2019, 12:30 AM IST

x-32.jpg

ದೇಶದ ಎರಡನೇ ಅತಿ ದೊಡ್ಡ ವಾಯುಯಾನ ಸಂಸ್ಥೆಯಾಗಿರುವ ಜೆಟ್‌ ಏರ್‌ವೇಸ್‌ ಎದುರಿಸುತ್ತಿರುವ ತೀವ್ರ ಹಣಕಾಸಿನ ಬಿಕ್ಕಟ್ಟು ವಾಯುಯಾನ ಕ್ಷೇತ್ರದಲ್ಲಿ ತಳಮಳಕ್ಕೆ ಕಾರಣವಾಗಿದೆ. ಸುಮಾರು 6 ಸಾವಿರ ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್‌ ಏರ್‌ವೇಸ್‌ ಈಗಾಗಲೇ 19 ಬೋಯಿಂಗ್‌ ದರ್ಜೆಯ ವಿಮಾನಗಳ ಸಂಚಾರ  ರದ್ದುಗೊಳಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಮಾನಗಳು ವಿಶ್ರಾಮಗೃಹ ಸೇರುವ ಸಾಧ್ಯತೆಗಳು ಕಾಣಿಸುತ್ತಿದ್ದು, ಕಿಂಗ್‌ಫಿಶರ್‌ ಏರ್‌ಲೈನ್ಸ್‌ಗೆ ಆಗಿರುವ ಗತಿ ಜೆಟ್‌ ಏರ್‌ವೆàಸ್‌ಗೂ ಆಗಲಿದೆಯೇ ಎಂಬ ಆತಂಕ ಕಾಡುತ್ತಿದೆ. ಜೆಟ್‌ ಏರ್‌ವೆàಸ್‌ ಎಂದಲ್ಲ ದೇಶದ ವಾಯುಯಾನ ಕ್ಷೇತ್ರದ ಎಲ್ಲ ಪ್ರಮುಖ ಸಂಸ್ಥೆಗಳು ಈಗ ಬಿಕ್ಕಟ್ಟು ಎದುರಿಸುತ್ತಿವೆ. ಅತಿ ದೊಡ್ಡ ಸಂಸ್ಥೆ ಎಂಬ ಹಿರಿಮೆಯಿರುವ ಸರಕಾರಿ ಸ್ವಾಮ್ಯದ ಇಂಡಿಯನ್‌ ಏರ್‌ಲೈನ್ಸ್‌ ನಷ್ಟ ಅನುಭವಿಸಲು ತೊಡಗಿ ವರ್ಷಗಳೇ ಕಳೆದವು. ಸರಕಾರ ಆಗಾಗ ನೀಡುವ ನೆರನಿಂದಾಗಿ ಅದಿನ್ನೂ ಹಾರಾಡುತ್ತಿದೆ. ಆದರೆ ಖಾಸಗಿ ವಲಯದ ಸಂಸ್ಥೆಗಳಿಗೆ ಸರಕಾರ ಹೀಗೆ ನೇರವಾಗಿ ಹಣಕಾಸಿನ ನೆರವು ನೀಡಲು ಅಸಾಧ್ಯವಾಗಿರುವ ಕಾರಣ ಅವುಗಳ ಭವಿಷ್ಯ ಡೋಲಾಯಮಾನವಾಗಿದೆ. ವಾಯುಯಾನ ಕ್ಷೇತ್ರದ ಈ ಗಂಭೀರ ಪರಿಸ್ಥಿತಿ ಒಂದಕ್ಕಿಂತ ಹೆಚ್ಚು ಕಾರಣಗಳಿಗೆ ಚಿಂತೆಗೆ ಕಾರಣವಾಗಿದೆ. 

ವಾಯುಯಾನ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ತೆರೆದುಕೊಂಡ ಬಳಿಕ ಈ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿರುವುದು ನಿಜ. ಶ್ರೀಮಂತರು ಮತ್ತು ಅತ್ಯುನ್ನತ ಸ್ಥಾನದಲ್ಲಿರುವವರಿಗೆ ಮಾತ್ರ ವಿಮಾನ ಪ್ರಯಾಣ ಭಾಗ್ಯ ಎಂಬಲ್ಲಿಂದ ಜನಸಾಮಾನ್ಯರು ಕೂಡಾ ವಿಮಾನದಲ್ಲಿ ಪ್ರಯಾಣಿಸಬಹುದು ಎಂಬಲ್ಲಿಗೆ ತಲುಪಲು ವಾಯುಯಾನ ಕ್ಷೇತ್ರಕ್ಕೆ ಖಾಸಗಿ ಸಂಸ್ಥೆಗಳು ಪ್ರವೇಶಿಸಿದ್ದೇ ಕಾರಣ. ಖಾಸಗಿಯವರಿಂದಾಗಿ ವಿಮಾನ ಸೇವೆಯ ಗುಣಮಟ್ಟದಲ್ಲೂ ಬಹಳ ಸುಧಾರಣೆಯಾಗಿದೆ. ಜೆಟ್‌, ಕಿಂಗ್‌ಫಿಶರ್‌ನಂಥ ಸಂಸ್ಥೆಗಳು ಯಾವ ವಿದೇಶಿ ವಿಮಾನ ಯಾನ ಸಂಸ್ಥೆಗಳಿಗೆ ಕಡಿಮೆಯಿಲ್ಲದ ಸೇವೆ ಮತ್ತು ಸೌಲಭ್ಯ ನೀಡಿ ಮೆಚ್ಚುಗೆಗೆ ಪಾತ್ರವಾಗಿದ್ದವು. ಇದೇ ವೇಳೆ ಗ್ರಾಹಕರನ್ನು ಆಕರ್ಷಿಸಲು ಅವುಗಳ ನಡುವೆ ತೀವ್ರ ದರ ಪೈಪೋಟಿಯೂ ಇದೆ. ಈ ದರ ಸಮರವೇ ಈಗ ವಿಮಾನಯಾನ ಸಂಸ್ಥೆಗಳಿಗೆ ಮುಳುವಾಗುತ್ತಿದೆ. ಜತೆಗೆ ಏರುತ್ತಿರುವ ಇಂಧನ ಬೆಲೆ, ಅಸ್ಥಿರ ಮಾರುಕಟ್ಟೆ, ಡಾಲರ್‌ ಎದುರು ಕುಸಿಯುತ್ತಿರುವ ರೂಪಾಯಿ ಮೌಲ್ಯ, ವಿದೇಶಿ ಕಂಪೆನಿಗಳಿಂದ ಎದುರಾಗಿರುವ ಸ್ಪರ್ಧೆ ಈ ಮುಂತಾದ ಅಂಶಗಳು ದೇಶೀ ಕಂಪೆನಿಗಳು ಕಂಗೆಡುವಂತೆ ಮಾಡಿವೆ. 

ಜೆಟ್‌ ಏರ್‌ವೆàಸ್‌ ವಿಚಾರದಲ್ಲೂ ಇದೇ ಆಗಿದೆ. ಭಾರೀ ಸಂಖ್ಯೆಯಲ್ಲಿರುವ ಸಿಬಂದಿ, ಅವರಿಗೆ ನೀಡುತ್ತಿರುವ ದೊಡ್ಡ ಮೊತ್ತದ ಸಂಬಳ, ಲಾಭದ ಪ್ರಮಾಣದಲ್ಲಿ ಇಳಿಕೆ ಈ ಮುಂತಾದ ಕಾರಣಗಳಿಂದ ಜೆಟ್‌ ಕುಂಟುತ್ತಿದೆ. ಪ್ರಸ್ತುತ ಕಂಪೆನಿಯಲ್ಲಿ 23,000 ಸಿಬಂದಿಗಳಿದ್ದು, ಇವರ ವೇತನ ವಿಲೇವಾರಿಯೇ ಕಂಪೆನಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಕಿಂಗ್‌ಫಿಶರ್‌ ಕೂಡಾ ಈ ಮಾದರಿಯ ಕಾರಣಗಳಿಂದಲೇ ನೆಲಕಚ್ಚಿರುವುದರಿಂದ ಜೆಟ್‌ ಭವಿಷ್ಯವೂ ಗೋಡೆ ಮೇಲಿನ ಬರಹದಂತೆ ಸ್ಪಷ್ಟವಾಗುತ್ತಿದೆ ಎನ್ನುತ್ತಿರುವ ಮಾರುಕಟ್ಟೆ ತಜ್ಞರ ಎಚ್ಚರಿಕೆಯನ್ನು ಈ ಹಂತದಲ್ಲಾದರೂ ಸರಕಾರ ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ. ಖಾಸಗಿ ವಲಯಕ್ಕೆ ಸಂಬಂಧಪಟ್ಟಂತೆ ಸರಕಾರದ್ದೇನಿದ್ದರೂ ನೀತಿ ರೂಪಣೆಯ ಪಾತ್ರವಷ್ಟೇ ಎಂದು ಹೇಳಿ ಕೈಕೊಡವಿಕೊಳ್ಳುವ ಸಂದರ್ಭ ಇದಲ್ಲ. 

ಇದು ಚುನಾವಣಾ ಕಾಲವಾಗಿರುವುದರಿಂದ ಜೆಟ್‌ ನೆಲ ಕಚ್ಚದಂತೆ ನೋಡಿಕೊಳ್ಳುವುದು  ಸರಕಾರದ ಪಾಲಿಗೆ ಅನಿವಾರ್ಯವೂ ಹೌದು. ಏಕೆಂದರೆ ದೇಶದ ವಾಯುಯಾನ ಕ್ಷೇತ್ರ 7.5 ದಶಲಕ್ಷ ಮಂದಿಗೆ ನೇರ ಮತ್ತು ಪರೋಕ್ಷವಾಗಿ ನೌಕರಿ ನೀಡಿದೆ. ವಾಯುಯಾನ ಕ್ಷೇತ್ರದಲ್ಲಾಗುವ ಯಾವುದೇ ಪಲ್ಲಟ ಈ ನೌಕರಿಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗಾದರೆ ಸಹಜವಾಗಿಯೇ ಬಿಸಿ ತಟ್ಟಲಿದೆ. ಈಗಲೇ ನಿರುದ್ಯೋಗ ನಿವಾರಣೆ ಮಾಡಿಲ್ಲ ಎಂಬ ಆರೋಪ ಎದುರಿಸುತ್ತಿರುವ ಕೇಂದ್ರಕ್ಕೆ ಇದು ದುಬಾರಿಯಾಗಿ ಪರಿಣಮಿಸಬಹುದು. ವಾಯು ಯಾನ ಕ್ಷೇತ್ರದ ಹಿಂಜರಿಕೆ ಈ ಕ್ಷೇತ್ರದ ಮಾತ್ರವಲ್ಲದೆ ಒಟ್ಟಾರೆಯಾಗಿ ಎಲ್ಲ ವಿದೇಶಿ ಹೂಡಿಕೆಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುವಂಥದ್ದು. ಹಾಗೆಂದು ಜೆಟ್‌ ಏರ್‌ವೆàಸನ್ನು ಸಾಲದ ಸುಳಿಯಿಂದ ಪಾರು ಮಾಡಲು ಬ್ಯಾಂಕ್‌ಗಳ ಒಕ್ಕೂಟ ರಚಿಸಿ ಹೊಸ ಸಾಲ ನೀಡುವುದು ತಾತ್ಕಾಲಿಕ ಉಪಶಮನವಾಗಬಹುದಷ್ಟೆ. ಕಿಂಗ್‌ಫಿಶರ್‌ ಏರ್‌ಲೈನ್ಸ್‌ ಹೀಗೆ ಸಾಲ ಪಡೆದು ಮುಳುಗಿಸಿ ಹೋದ ಉದಾಹರಣೆ ಕಣ್ಣೆದುರಿಗೇ ಇರುವಾಗ  ಇನ್ನೊಂದು ದುಸ್ಸಾಹಸಕ್ಕೆ ಮುಂದಾಗುವುದು ಸರಿಯಲ್ಲ. ಇದರ ಬದಲಾಗಿ ಇಡೀ ವಾಯುಯಾನ ಕ್ಷೇತ್ರವನ್ನು ಕಾಪಾಡುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಸರ್ಜರಿಗೆ ಮುಂದಾಗಬೇಕು. 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.