ಬಿಸಿಯೂಟಕ್ಕೆ ಕಳಪೆ ದಿನಸಿ, ನೀರು ಬಳಸಿದ್ದಕ್ಕೆ ತರಾಟೆ


Team Udayavani, Feb 1, 2019, 7:05 AM IST

m3-bisiyuta.jpg

ಕೆ.ಆರ್‌.ನಗರ: ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗಕ್ಕೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾ.ರಾ.ನಂದೀಶ ಗುರುವಾರ ಮದ್ಯಾಹ್ನ ದಿಢೀರ್‌ ಭೇಟಿ ನೀಡಿ ಬಿಸಿಯೂಟದ ಅವ್ಯವಸ್ಥೆ ಕಂಡು ಕೆಂಡಮಂಡಲವಾದರು.

ಹೆಣ್ಣು ಮಕ್ಕಳಿಗೆ ಸರ್ಕಾರ ನೀಡುತ್ತಿದ್ದ ಬಿಸಿಯೂಟದಲ್ಲಿ ನಿಯಮಗಳ ಪ್ರಕಾರ ಅಕ್ಕಿ, ತರಕಾರಿ, ಬೇಳೆ ಮೊದಲಾದವುಗಳನ್ನು ಉಪ ಯೋಗಿಸಿಲ್ಲದಿರುವುದು, ಆಹಾರದ ಗುಣಮಟ್ಟ ದಲ್ಲಿ ಕಳಪೆ, ಶುಚಿಯಾದ ನೀರನ್ನು ಬಳಸದೇ ಇರುವುದನ್ನು ಕಂಡು ಶಾಲೆಯ ಉಪ ಪ್ರಾಂಶುಪಾಲ ರಾಮ ಸ್ವಾಮಿಗೌಡ ಮತ್ತು ಸ್ಟೋರ್‌ ಇನ್‌ಚಾರ್ಜ್‌ ಶಿಕ್ಷಕ ಜ್ಞಾನದೇವ್‌ ಅವರನ್ನು ತರಾಟೆಗೆ ತೆಗೆದುಕೊಂಡರು.

ತಪಾಸಣೆ ವೇಳೆ ಬೇಜವಾಬ್ದಾರಿ ವರ್ತನೆ ತೋರಿದ ಶಿಕ್ಷಕ ಜ್ಷಾನದೇವ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕು ಶಿಕ್ಷಣಾಧಿಕಾರಿ ರಾಜು ಅವರಿಗೆ ಸೂಚಿಸಿದರು. ಕುಡಿಯುವ ನೀರು ಹಾಗೂ ಬಿಸಿಯೂಟಕ್ಕೆ ಬಳಸುವ ಸಂಪ್‌ ನೀರನ್ನು ಶುಚಿಯಾಗಿರುವಂತೆ ನೋಡಿಕೊಳ್ಳವಲ್ಲಿ ಬೇಜವಾಬ್ದಾರಿತನ ತೋರುತ್ತಿರು ವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ನಿಮ್ಮ ಮಕ್ಕಳಿಗೂ ಇಂತಹ ನೀರನ್ನೇ ಬಳಸುತ್ತೀರಾ ಎಂದು ಪ್ರಶ್ನಿಸಿದರಲ್ಲದೇ, ಮಕ್ಕಳು ಕಾಯಿಲೆಗೆ ತುತ್ತಾದರೆ ಯಾರು ಹೊಣೆ ಎಂದು ಆತಂಕ ವ್ಯಕ್ತಪಡಿಸಿದರು. ಬಿಇಒ ರಾಜುರವರು ಸಮಸ್ಯೆಗಳ ಬಗ್ಗೆ ಜಿಲ್ಲಾ ಪಂಚಾಯಿತ್‌ ಅಧ್ಯಕ್ಷರಿಗೆ ಮಾಹಿತಿ ನೀಡಿ ಶಿಕ್ಷಕರಿಗೆ ಎಚ್ಚರಿಕೆ ನೀಡಿದರು. ಇದೇ ವೇಳೆ ಸಾ.ರಾ. ನಂದೀಶ್‌ ಅವರು ಅಡುಗೆ ಪರಿಚಾರಕಿಯರು ಹಾಗೂ ಸ್ಟೋರ್‌ ಇನ್ಚಾರ್ಜ್‌ರವರ ಮಾತುಗಳಿಂದ ಅಸಮಾಧಾನಗೊಂಡರಲ್ಲದೇ ಬಿಸಿಯೂಟ ಸವಿದು ಗುಣಮಟ್ಟದ ಬಗ್ಗೆ ಪರಿಶೀಲಿಸಿದರು.

ಬಿಸಿಯೂಟದ ಖರ್ಚಿನ ಉಳಿಕೆ ಹಣದಲ್ಲಿ ಮೊಸರು ಅಥವಾ ಮಜ್ಜಿಗೆ ನೀಡುವಂತೆ ಶಿಕ್ಷಕರಿಗೆ ತಾಕೀತು ಮಾಡಿದರು. ಬಿಸಿಯೂಟದ ಅಧಿಕಾರಿ ಪ್ರದೀಪ್‌ ಅವರಿಂದ ಬಿಸಿಯೂಟಕ್ಕೆ ನೀಡುವ ಅಕ್ಕಿ, ಬೇಳೆ ಸಾಮಗ್ರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಮಾತನಾಡಿದ ಸಾ.ರಾ.ನಂದೀಶ್‌, ಬಿಸಿ ಯೂಟಕ್ಕೆ ಬಳಸುವ ನೀರು ಸ್ವಚ್ಛವಾಗಿಲ್ಲ,

ಶೌಚಾ ಲಯಗಳ ಸ್ವಚ್ಛತೆ ಸಾಲದು, ಮಕ್ಕಳಿಗೆ ಗುಣಮಟ್ಟದ ಆಹಾರ ಕೊಡಬೇಕು. ಸರ್ಕಾರ ನೀಡುವ ಬೇಳೆ, ಅಕ್ಕಿ ಗುಣಮಟ್ಟ ಸಾಲುತ್ತಿಲ್ಲ ಹಾಗೂ ಅಡುಗೆ ಯವರು ಸ್ವಚ್ಛತೆ ಕಾಪಾಡಬೇಕು ಎಂದರು. ಈ ವೇಳೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್‌, ಪುರಸಭಾಧ್ಯಕ್ಷೆ ಹರ್ಷಲತಾ ಶ್ರೀಕಾಂತ್‌, ಕ್ಷೇತ್ರ ಸಮನ್ವಯಾಧಿಕಾರಿ ರುದ್ರಪ್ಪ, ಶಿಕ್ಷಕ ಹನುಮಂತು ಇತರರಿದ್ದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.