ವಿಮಾನ, ರಸ್ತೆಗಳ ಜತೆ ಸಾಗರಮಾಲಾ
Team Udayavani, Feb 2, 2019, 12:40 AM IST
ಗ್ರಾಮೀಣ ರಸ್ತೆಗೆ 19,000 ಕೋಟಿ ರೂ.
ಗ್ರಾಮೀಣ ಭಾಗದಲ್ಲಿ ರಸ್ತೆಗಳ ನಿರ್ಮಾಣ ಪ್ರಮಾಣ ಮೂರು ಪಟ್ಟು ವೃದ್ಧಿಯಾಗಿದೆ. 2019-20ನೇ ಸಾಲಿನಲ್ಲಿ ಯೋಜನೆಗೆ 19,000 ಕೋಟಿ ರೂ. ಮೀಸಲಿಡಲಾಗಿದೆ (ಕಳೆದ ವರ್ಷ (15,500 ಕೋಟಿ). 17.84 ಲಕ್ಷ ಜನವಸತಿ ಪ್ರದೇಶಗಳ ಪೈಕಿ 15.80 ಲಕ್ಷ ಜನವಸತಿ ಪ್ರದೇಶಗಳನ್ನು ಈಗಾಗಲೇ ಪ್ರಮುಖ ಪಕ್ಕಾ ರಸ್ತೆಗಳಿಗೆ ಸಂಪರ್ಕಿಸಲಾಗಿದೆ. ಮಕ್ಕಳು ಶಾಲೆ ತಲುಪಲು ಹಲವು ಕಿ.ಮೀ. ನಡೆದು ಹೋಗಬೇಕಿದ್ದ ಸ್ಥಿತಿ ಈಗ ಬದಲಾಗಿದೆ. ಉತ್ತಮ ರಸ್ತೆ ಪರಿಣಾಮ, ಶಾಲಾ ವಾಹನಗಳು ಮನೆ ಬಾಗಿಲಿಗೇ ಬರುತ್ತಿವೆ. 2014-18ರ ಅವಧಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 1.53 ಕೋಟಿ ಮನೆಗಳನ್ನು ನಿರ್ಮಿಸಿಕೊಡಲಾಗಿದೆ.
ವಿಮಾನ ನಿಲ್ದಾಣ 100ಕ್ಕೂ ಹೆಚ್ಚು
ಎನ್ಡಿಎ ಸರ್ಕಾರದ ಮಹತ್ವಾಕಾಂಕ್ಷಿ ‘ಉಡಾನ್’ ಯೋಜನೆಯಿಂದಾಗಿ ಇಂದು ಸಾಮಾನ್ಯ ನಾಗರಿಕನೂ ವಿಮಾನದಲ್ಲಿ ಪ್ರಯಾಣಿಸುವಂತಾಗಿದೆ. ಸಿಕ್ಕಿಂನ ಪಕ್ಯಾಂಗ್ನಲ್ಲಿ ವಿಮಾನ ನಿಲ್ದಾಣ ಆರಂಭಿಸುವುದರೊಂದಿಗೆ ದೇಶದಲ್ಲಿನ ನಿಲ್ದಾಣಗಳ ಸಂಖ್ಯೆ 100ನ್ನು ದಾಟಿದೆ. ಕಳೆದ ಐದು ವರ್ಷಗಳಲ್ಲಿ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಿದೆ. ಇದೇ ವೇಳೆ ಸಾಕಷ್ಟು ಉದ್ಯೋಗಗಳೂ ಸೃಷ್ಟಿಯಾಗಿವೆ.
ಜಗತ್ತಲ್ಲೇ ವೇಗದ ಹೆದ್ದಾರಿ ನಿರ್ಮಾಣ
ದೇಶದಲ್ಲಿ ದಿನವೊಂದಕ್ಕೆ 27 ಕಿ.ಮೀ ಉದ್ದದ ಹೆದ್ದಾರಿ ನಿರ್ಮಾಣವಾಗುತ್ತಿದ್ದು, ಜಗತ್ತಿನಲ್ಲೆ ಅತ್ಯಂತ ವೇಗವಾಗಿ ಹೆದ್ದಾರಿ ಅಭಿವೃದ್ಧಿಪಡಿಸುತ್ತಿರುವ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಇದರೊಂದಿಗೆ ದಶಕಗಳಿಂದ ನನೆಗುದಿಗೆ ಬಿದ್ದಿದ್ದ ದೆಹಲಿ ಸುತ್ತಲ ಪೂರ್ವ ಪೆರಿಫೆರಲ್ ಹೆದ್ದಾರಿ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ಬೋಗಿಬೀಲ್ ರೈಲು ಕಂ ರಸ್ತೆ ಸೇತುವೆ ರೀತಿಯ ಯೋಜನೆಗಳನ್ನು ಎನ್ಡಿಎ ಸರ್ಕಾರ ಪೂರ್ಣಗೊಳಿಸಿದೆ.
ಜಲಮಾರ್ಗದಲ್ಲಿ ಸಾಗರಮಾಲಾ
ಜಲ ಮಾರ್ಗದಲ್ಲಿ ಆಮದು ಮತ್ತು ರಫ್ತು ಕಾರ್ಗೋಗಳ ತ್ವರಿತ ನಿರ್ವಹಣೆಗಾಗಿ, ಮಹತ್ವಾಕಾಂಕ್ಷಿ ಸಾಗರಮಾಲಾ ಯೋಜನೆಯಡಿ ದೇಶದ ಕರಾವಳಿ ಭಾಗದಲ್ಲಿ ಹಲವು ಬಂದರು ಅಭಿವೃದ್ಧಿ ಪಡಿಸಲಾಗಿದೆ. ಇದೇ ಮೊದಲ ಬಾರಿ ಕೋಲ್ಕತಾ ಮತ್ತು ವಾರಾಣಸಿ ನಡುವಿನ ಒಳನಾಡಿನ ಜಲಮಾರ್ಗದ ಮೂಲಕ ಸರಕು ಕಂಟೈನರ್ಗಳ ಸಾಗಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ