ಮುಳುಗು ತಜ್ಞರ ಯತ್ನ ವಿಫಲ
Team Udayavani, Feb 2, 2019, 3:52 AM IST
ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಮತ್ತು ಅದರಲ್ಲಿದ್ದ 7 ಮಂದಿ ಮೀನುಗಾರರು ನಾಪತ್ತೆಯಾಗಿ 47 ದಿನಗಳು ಕಳೆದಿವೆ. ಮೀನುಗಾರರು ಎಲ್ಲಿ ಹೋದರು, ಏನಾದರು ಎಂಬುದು ಇನ್ನೂ ರಹಸ್ಯವಾಗಿಯೇ ಉಳಿದಿದೆ. ರಾಜ್ಯ-ಕೇಂದ್ರ ಸರಕಾರದ ಮಟ್ಟದಲ್ಲಿ ನಾಪತ್ತೆಯಾಗಿರುವ ಮೀನುಗಾರರ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ.
ನೌಕಾಪಡೆಯ ಹಡಗು ಶೋಧ ಮುಂದುವರಿಸಿದ್ದು, ಗುರುವಾರ ಮುಳುಗು ತಜ್ಞರನ್ನು ಕರೆಯಿಸಲಾಗಿದೆ. ಸಮುದ್ರದಲ್ಲಿ ಸುಮಾರು 35 ಮೀ. ಆಳದ ವರೆಗೆ ಮುಳುಗಿ ಶೋಧನೆ ನಡೆಸಿದ ಅವರು ತಳಭಾಗದಲ್ಲಿ ಕತ್ತಲು ಆವರಿಸಿರುವುದರಿಂದ ಹಿಂದಿರು ಗಿದ್ದಾರೆ ಎಂದು ತಿಳಿದು ಬಂದಿದೆ.
ಹೋರಾಟಕ್ಕೆ ಸಜ್ಜು
ಇತ್ತ ಮೀನುಗಾರರ ಆಕ್ರೋಶ ಹೆಚ್ಚುತ್ತಿದ್ದು, ಸರಕಾರದಿಂದಾಗಲಿ, ಅಧಿಕಾರಿಗಳಿಂದಾ ಗಲೀ ಸಮರ್ಪಕ ಮಾಹಿತಿ ಸಿಗುತ್ತಿಲ್ಲ; ವಾರದೊಳಗೆ ಸಮರ್ಪಕ ಮಾಹಿತಿ ಲಭಿಸದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿ ಪ್ರತಿಭಟಿಸುತ್ತೇವೆ ಎಂದು ಮೀನುಗಾರರು ಎಚ್ಚರಿಸಿದ್ದಾರೆ.
ದೇವಿ ಅಭಯ
ಅಂಬಲಪಾಡಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ದೇವಿ ದರ್ಶನದಲ್ಲಿ ನಾಪತ್ತೆಯಾಗಿರುವ ಎಲ್ಲ ಮೀನುಗಾರರು ಎಲ್ಲೋ ಒಂದು ಕಡೆ ಬಂದಿಗಳಾಗಿದ್ದಾರೆ; ಮೂರು ವಾರದ ಒಳಗೆ ಅವರ ಸುಳಿವು ಕೊಡುತ್ತೇನೆ ಎಂದು ದೇವಿಯ ನುಡಿ ಆಗಿರುವುದಾಗಿ ಕುಟುಂಬಿಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ