12ರಂದು ಸವಿತಾ ಮಹರ್ಷಿ ಜಯಂತಿ ಆಚರಣೆಗೆ ನಿರ್ಧಾರ
Team Udayavani, Feb 2, 2019, 5:25 AM IST
ಹೊನ್ನಾಳಿ: ಸವಿತಾ ಮಹರ್ಷಿ ಜಯಂತ್ಯುತ್ಸವವನ್ನು ಫೆ. 12ರಂದು ಪ.ಪಂ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ತುಷಾರ ಬಿ.ಹೊಸೂರು ಹೇಳಿದರು.
ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ತಾಲೂಕು ಸವಿತಾ ಸಮಾಜ ಸಂಯುಕ್ತಾಶ್ರಯದಲ್ಲಿ ತಾಲೂಕು ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತ್ಯುತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಸರ್ಕಾರದಿಂದ ಸವಿತಾ ಮಹರ್ಷಿ ಜಯಂತಿ ಆಚರಣೆಗೆ ಅಧಿಕೃತ ಘೋಷಣೆಯಾಗಿದೆ. ಸಮಾಜದ ಬಾಂಧವರು ಈ ಬಾರಿ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೆ ಒಪ್ಪಿಗೆ ನೀಡಿದ್ದು, ಸರಳ, ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಎನ್.ಎಲ್. ರವಿ ಮಾತನಾಡಿ, ಸರ್ಕಾರ ಸವಿತಾ ಸಮಾಜವನ್ನು ಗುರ್ತಿಸಿ ದಾರ್ಶನಿಕ ಸವಿತಾ ಮಹರ್ಷಿ ಜಯಂತಿಗೆ ಚಾಲನೆ ನೀಡಿರುವುದಕ್ಕೆ ಅಭಿನಂದಿಸಿದರು. ಪ್ರಥಮ ಬಾರಿಗೆ ಸರ್ಕಾರದ ವತಿಯಿಂದ ಆಚರಿಸುವ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಸಮಾಜದ ಎಲ್ಲಾ ಬಾಂಧವರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ವಿನಂತಿಸಿದರು. ಸವಿತಾ ಸಮಾಜದ ನಿರ್ದೇಶಕರಾದ ಗೋವಿಂದರಾಜ್, ಎನ್.ಕೆ.ತಿಪ್ಪಣ್ಣ, ಎನ್.ಆರ್. ಕೃಷ್ಣಮೂರ್ತಿ, ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ