ವಚನ ವಿಶ್ವವಿದ್ಯಾಲಯ ಆರಂಭ ಅಗತ್ಯ: ಪ್ರೊ| ಕೋರಗಲ್‌


Team Udayavani, Feb 2, 2019, 7:44 AM IST

bid-3.jpg

ಬಸವಕಲ್ಯಾಣ: ಕಲ್ಯಾಣ ಕರ್ನಾಟಕದಲ್ಲಿ ವಚನ ಸಾಹಿತ್ಯ ಬೆಳೆದಂತೆ, ಆಧುನಿಕ ಸಾಹಿತ್ಯ ಕೂಡ ಬೆಳೆಯುತ್ತಿರುವುದು ಸಾಹಿತಿಗಳಿಗೆ ಮತ್ತು ಸಾಹಿತ್ಯ ಆಸಕ್ತರಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹಾವೇರಿಯ ಸಾಹಿತಿ ಪ್ರೊ| ವಿರೂಪಾಕ್ಷಪ್ಪಾ ಕೋರಗಲ್‌ ಹೇಳಿದರು.

ಸಸ್ತಾಪುರ ಗ್ರಾಮದಲ್ಲಿ ಶ್ರೀ ಸದ್ಗುರು ಯಲ್ಲಾಲಿಂಗೇಶ್ವರ ಪ್ರಭುಗಳ 33ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ವಚನ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕಾಯಕ ಸಂಸ್ಕೃತಿ ಮೂಲಕ ವಿಶ್ವಗುರು ಬಸವಣ್ಣನವರು, ದಾಸೋಹ ಸಂಸ್ಕೃತಿ ಕಲಿಸಿದ್ದರು. ಹಾಗಾಗಿ ಆಧುನಿಕ ವಚನಕಾರರು, ಪ್ರಸಕ್ತ ಸಮಸ್ಯೆಗಳನ್ನು ಇಟ್ಟುಕೊಂಡು ವಚನ ರಚಿಸಲಿ ಎಂದ ಅವರು, ಜೀವನಕ್ಕೆ ಧಾರ್ಮಿಕ ಆಚರಣೆಗಳು ಮತ್ತು ವಚನಗಳು ದಾರಿದೀಪವಾಗಿವೆ ಎಂದು ಹೇಳಿದರು.

ಸಮ್ಮೇಳನಾಧ್ಯಕ್ಷರಾದ ಉದಗಿರಿಯ ಸಾಹಿತಿ ಮಾಣಿಕರಾವ್‌ ಬಿರಾದಾರ್‌ ಮಾತನಾಡಿ, ವಚನ ಸಾಹಿತ್ಯದ ಅನುಭವ ಹಾಗೂ ಅನುಭಾವದಿಂದಲೇ ಆಧುನಿಕ ವಚನ ಸಾಹಿತ್ಯ ಹುಟ್ಟಿಕೊಂಡಿದೆ. ವಚನ ಸಾಹಿತ್ಯ ಇಂದು ಆಂಧ್ರ, ಮಹಾರಾಷ್ಟ್ರ ಮತ್ತು ಕರ್ನಾಟಕದಿಂದಲೇ ಹೊರ ಬಂದಿದೆ ಎಂದರು.

ಆದ್ದರಿಂದ ವಚನ ಸಾಹಿತ್ಯ ವಿಶ್ವ ಸಾಹಿತ್ಯಕ್ಕೆ ಕನ್ನಡ ಕೊಟ್ಟ ಅದ್ಭುತ ದೇಣಿಯಾಗಿದ್ದು, ಇಂದು ದೇಶಕ್ಕೆ ಮಾನವತೆಗೆ ಪೀಡಿಸುತ್ತಿರುವ ಭಯೋತ್ಪಾದನೆ, ಕೋಮುವಾದ, ಭ್ರಷ್ಟಾಚಾರ ನಿರ್ಮೂಲನೆಗೆ ವಚನಗಳು ಸಂಜೀವಿಯಾಗಲಿರುವ ವಚನಗಳ ಪ್ರಚಾರದ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು. ಶರಣರ ಕ್ರಾಂತಿಯ ನಾಡಾದ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಅಗತ್ಯವಿದೆ. ಇದರ ಶಾಖೆಗಳನ್ನು ಉಳವಿ, ಕೂಡಲ ಸಂಗಮ, ವಿಜಯಪುರ, ಸೊಲ್ಲಾಪುರ, ತೆಲಂಗಾಣ, ಹೈದರಾಬಾದ್‌ನಲ್ಲಿ ಆರಂಭಿಸುವುದು ಅವಶ್ಯಕವಾಗಿದೆ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಸಸ್ತಾಪುರ ಗ್ರಾಮದ ಶ್ರೀ ಯಲ್ಲಾಲಿಂಗೇಶ್ವರ ಮಠದ ಬಾಲತಪಸ್ವಿನಿ ಶಿವಶರಣೆ ಮಹಾದೇವಿ ತಾಯಿ, ಸಾನ್ನಿಧ್ಯ ವಹಿಸಿದ್ದ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಹಾಗೂ ಬೇಲೂರಿನ ಉರುಲಿಂಗ ಪೆದ್ದಿ ಮಠದ ಶ್ರೀ ಪಂಚಾಕ್ಷರಿ ಸ್ವಾಮಿಜಿ ಮಾತನಾಡಿದರು.

ಹಿರಿಯ ಸಾಹಿತಿ ಹಾಗೂ ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಡಾ| ವಜ್ರಾ ಪಾಟೀಲ್‌, ಎಂ.ಎಂ.ತಂಬಾಕೆ, ಗ್ರಾಪಂ ಅಧ್ಯಕ್ಷೆ ಬ್ರಹ್ಮಾರೆಡ್ಡಿ, ಬಾಬುರೆಡ್ಡಿ ಚಾಮಲೆ, ಸಿದ್ರಾಮಪ್ಪಾ ಗುದಗೆ, ಸಮ್ಮೇಳನದ ಸಮಿತಿ ಸಂಯೋಜಕ ಡಾ| ಗವಿಸಿದ್ದಪ್ಪಾ ಪಾಟೀಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.