ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ: ಸಿರಿಗೆರೆ ಶ್ರೀ


Team Udayavani, Feb 2, 2019, 10:01 AM IST

cta-3.jpg

ಸಿರಿಗೆರೆ: ಹರಿಹರದ ಬಳಿಯ ರಾಜನಹಳ್ಳಿ ಏತ ನೀರಾವರಿ ಯೋಜನೆಯಡಿ ಸಿರಿಗೆರೆ-ಭರಮಸಾಗರ ಭಾಗದ 41 ಹಾಗೂ ಜಗಳೂರು-ದಾವಣಗೆರೆ ಭಾಗದ 53 ಕೆರೆಗಳಿಗೆ ನೀರು ತುಂಬಿಸುವ 1202 ಕೋಟಿ ರೂ. ಮಹತ್ವದ ಯೋಜನೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ನೀರಾವರಿ ನಿಗಮದ ಸಭೆಯಲ್ಲಿ ಮಂಜೂರಾತಿ ದೊರೆತಿದೆ ಎಂದು ಶ್ರೀ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಿರಿಗೆರೆ ಶ್ರೀ ಬೃಹನ್ಮಠದ ಸದ್ಧರ್ಮ ನ್ಯಾಯಪೀಠದಲ್ಲಿ ರೈತ ಮುಖಂಡರಿಗೆ ಸಿಹಿ ಹಂಚಿ ಮಾತನಾಡಿದ ಅವರು, ಇಂದು ತಮಗೆ ಅತೀವ ಸಂತೋಷ ಮತ್ತು ಸಡಗರದ ದಿನವಾಗಿದೆ ಎಂದರು.

ಜಗಳೂರು ಪಟ್ಟಣದಲ್ಲಿ ನಡೆದಿದ್ದ ತರಳಬಾಳು ಹುಣ್ಣಿಮೆಯಲ್ಲಿ ಭಾಗವಹಿಸಿದ್ದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭರಮಸಾಗರ-ಸಿರಿಗೆರೆ ಭಾಗದ 41 ಕೆರೆಗಳು ಹಾಗೂ ಜಗಳೂರು-ದಾವಣಗೆರೆ ಭಾಗದ 53 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕಾರ್ಯಗತಗೊಳಿಸುವಂತೆ ಮಾಡಲಾಗಿತ್ತು. ಅದರಂತೆ ಭರಮಸಾಗರ ಭಾಗದ 41 ಕೆರೆಗಳಿಗೆ 525 ಕೋಟಿ ರೂ., ಜಗಳೂರು ಭಾಗದ ಕೆರೆಗಳಿಗೆ 660 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯ ಮಲ್ಲಶೆಟ್ಟಿಹಳ್ಳಿ ಜಾಕ್‌ವೆಲ್‌ ಬಳಿ ಸುಮಾರು 18 ಎಕರೆ ಪ್ರದೇಶದಲ್ಲಿ ಕೆರೆ ನಿರ್ಮಾಣಕ್ಕೆ 5 ಕೋಟಿ ರೂ.ಗಳನ್ನು ನೀರಾವರಿ ನಿಗಮ ತನ್ನ ಪ್ರಸ್ತಾವನೆಯಲ್ಲಿ ಮಂಜೂರು ಮಾಡಿದೆ. ಅಣಜಿ ಕೆರೆಯಿಂದ ತುಪ್ಪದಹಳ್ಳಿ ಕೆರೆಗೆ ನೀರು ಭರ್ತಿಗೆ ಸಂಪರ್ಕ ಕಲ್ಪಸುವ ಕೊಳವೆ ಯೋಜನೆಗೆ 1.5 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದರು.

ತೋಟಗಳನ್ನು ಹೊಂದಿರುವ ರೈತರು ನೀರಿಗಾಗಿ ಪಡುತ್ತಿದ್ದ ಬವಣೆ ಹೇಳ ತೀರದಾಗಿತ್ತು. ಹೇಗಾದರೂ ಮಾಡಿ ರೈತರು ಒಂದೆರಡು ವರ್ಷಗಳ ಕಾಲ ತಮ್ಮ ತೋಟಗಳನ್ನು ಉಳಿಸಿಕೊಳ್ಳುವ ಯತ್ನ ಮಾಡಬೇಕು. ಆ ನಂತರ ಈ ಭಾಗವು ಶಾಶ್ವತವಾಗಿ ನೀರಿನ ತೊಂದರೆ ಇಲ್ಲದೆ ಸಮೃದ್ಧವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಹರಿಹರದದ ರಾಜನಹಳ್ಳಿ ಬಳಿ ಇರುವ ಹೊಳೆಯಿಂದ ಮಲ್ಲಶೆಟ್ಟಿಹಳ್ಳಿಯಲ್ಲಿ ನಿರ್ಮಿಸಲಾಗುವ ಹೊಸದಾದ ಕೆರೆಗೆ ನೀರು ಸಂಗ್ರಹಿಸಲಾಗುವುದು. ಮಲ್ಲಶೆಟ್ಟಿಹಳ್ಳಿಯಲ್ಲಿ ನಿರ್ಮಿಸಲಾಗಿರುವ ಜಾಕ್‌ವೆಲ್‌ ಮೂಲಕ ನೀರನ್ನು ಭರಮಸಾಗರದ ದೊಡ್ಡ ಕೆರೆಗೆ ಹರಿಸಲಾಗುವುದು. ಭರಮಸಾಗರ ಕೆರೆಯ ಸಮೀಪ ಜಾಕ್‌ವೆಲ್‌ ನಿರ್ಮಿಸಿ ಅಲ್ಲಿಂದ ಈ ಯೋಜನೆಯ ವ್ಯಾಪ್ತಿಗೆ ಬರುವ ಕೆರೆಗಳಿಗೆ ಕೊಳವೆಗಳ ಮೂಲಕ ನೀರು ಹರಿಸಲಾಗುವುದು. ಇದರಿಂದ ಭರಮಸಾಗರ, ನೀರ್ಥಡಿ, ಹಳವುದರ, ಹಂಪನೂರು, ಸಿರಿಗೆರೆ, ದೊಡ್ಡಾಲಗಟ್ಟ, ಹಿರೇಗುಂಟನೂರು, ಲಕ್ಷಿ ್ಮೕಸಾಗರ, ಬಿದರಕೆರೆ, ಕೊಡಗವಳ್ಳಿ, ಕಾತ್ರಾಳ್‌ ಕೆರೆ, ಹಿರೇಗುಂಟನೂರು, ಕೊಳಹಾಳ್‌, ಚಿಕ್ಕಬೆನ್ನೂರು ಮುಂತಾದ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ತಿಳಿಸಿದರು.

ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬಿಜೆಪಿ ಮುಖಂಡ ಜಿ. ಮಂಜುನಾಥ್‌, ಬಿಜೆಪಿ ಭರಮಸಾಗರ ಕಾರ್ಯದರ್ಶಿ ಕೆ.ಬಿ. ಮೋಹನ್‌, ಗ್ರಾಪಂ ಸದಸ್ಯರಾದ ಎಂ. ಬಸವರಾಜಯ್ಯ, ಎಂ.ಜಿ. ದೇವರಾಜ್‌, ಸಿರಿಗೆರೆ ಹಾಗೂ ಸುತ್ತಲಿನ ರೈತ ಮುಖಂಡರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.