ಯಕ್ಷಲೋಕದಿಂದ ಮರೆಯಾದ ಅಗರಿ ರಘುರಾಮ ಭಾಗವತರು 


Team Udayavani, Feb 3, 2019, 12:50 AM IST

70.jpg

ಯಕ್ಷರಂಗ ಇತ್ತೀಚೆಗೆ ಹಿರಿಯ ಕೊಂಡಿಯನ್ನು ಕಳೆದುಕೊಂಡಿದೆ. ತನ್ನದೆ ಆದ ಕೊಡುಗೆಗಳನ್ನು ಯಕ್ಷರಂಗಕ್ಕೆ ನೀಡಿದ ಹಿರಿಯ ಚೇತನ,ತೆಂಕಿನ ಧೀಮಂತ ಭಾಗವತ ಅಗರಿ ರಘುರಾಮ ಭಾಗವತರು ಇನ್ನು ನೆನಪು ಮಾತ್ರ. 

ತೆಂಕು ತಿಟ್ಟಿನ ದಿಗ್ಗಜ ಭಾಗವತರಾಗಿದ್ದ ಅಗರಿ ಶೈಲಿಯ ಖ್ಯಾತಿಯ ಶ್ರೀನಿವಾಸ ಭಾಗವತ ಮತ್ತು ರುಕ್ಮಿಣಿ ಅಮ್ಮನವರ ಪುತ್ರರಾಗಿ 1935 ರಲ್ಲಿ ಜನನ. ರಘುರಾಮ ಭಾಗವತರು ಉನ್ನತ ವ್ಯಾಸಂಗ ಮಾಡಿ ಸರ್ಕಾರಿ ಉದ್ಯೋಗವನ್ನು ಪಡೆದಿದ್ದರು. ಆದರೂ ವೃತ್ತಿ ಭಾಗವತನಾಗಿ ಕಾಣಿಸಿಕೊಂಡದ್ದು ಆ ಕಾಲಕ್ಕೂ ಈ ಕಾಲಕ್ಕೂ ವಿಶೇಷವೇ.

ಮನೆಯಲ್ಲೇ ಯಕ್ಷಗಾನ ವಾತಾವರಣದ ಪ್ರೇರಣೆಯಿಂದ ಕಲಾವಿದ ನಾಗಿ ಬೆಳೆದ ರಘುರಾಮ ಭಾಗವತರು, ಸರ್ಕಾರಿ ಉದ್ಯೋಗದ ನಡುವೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮೆಚ್ಚುಗೆಗೆ ಪಾತ್ರರಾಗಿದ್ದರು. 

ತುಳು ಪ್ರಸಂಗಗಳ ಪ್ರದರ್ಶನಗಳು ಜನಪ್ರಿಯವಾಗಿದ್ದ ಕಾಲದಲ್ಲಿ ವೃತ್ತಿ ಮೇಳಕ್ಕೆ ಅಗರಿ ರಘುರಾಮ ಭಾಗವತರು ಅನಿವಾರ್ಯವಾಗಿದ್ದರು. 
ತಂದೆ ಶ್ರೀನಿವಾಸ ಭಾಗವತರು ತುಳು ಹಾಡುಗಳನ್ನು ಹಾಡಲು ಒಲ್ಲೆ ಎಂದಾಗ ಅಂದಿನ ಸುರತ್ಕಲ್‌ ಮೇಳದಲ್ಲಿ  ಅಗರಿ ರಘುರಾಮ ಭಾಗವತರು ಭಾಗವತಿಕೆ ಮಾಡುತ್ತಿದ್ದರು ಎನ್ನುವುದನ್ನು ಹಿರಿಯ ವಿಮರ್ಶಕರು ನೆನೆಸಿಕೊಳ್ಳುತ್ತಾರೆ. 

ತಂದೆ ಸುರತ್ಕಲ್‌ ಮೇಳ ತೊರೆದಾಗ ಅನಿವಾರ್ಯತೆಯಿಂದ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿ ಪ್ರಧಾನ ಭಾಗವತರಾಗಿ ಸುರತ್ಕಲ್‌ ಮೇಳ ಸೇರಿದ ರಘುರಾಮ ಭಾಗವತರು  ಹಲವು ವರ್ಷ ಸೇವೆ ಸಲ್ಲಿಸಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು.

ಡೇರೆ ಮೇಳಕ್ಕೆ ಅನಿವಾರ್ಯವಾಗಿದ್ದ ಹೊಸ ಪ್ರಸಂಗಗಳೂ ಮತ್ತು ಪೌರಾಣಿಕ ಪ್ರಸಂಗಗಳಿಗೆ ತನ್ನ ಕಂಠಸಿರಿಯಿಂದ ಜೀವ ತುಂಬುವ ಶಕ್ತಿ ಅಗರಿ ರಘುರಾಮ ಭಾಗವತರದ್ದು ಎಂದು ಹಿರಿಯ ಅಭಿಮಾನಿಗಳು ನೆನಪಿಸಿಕೊಳ್ಳುತ್ತಾರೆ. 

ಮಲ್ಪೆ ರಾಮದಾಸ ಸಾಮಗ, ಶೇಣಿ ಗೋಪಾಲಕೃಷ್ಣ  ಭಟ್‌, ಕುಂಬ್ಳೆ ಸುಂದರ್‌ ರಾವ್‌ , ಕೊಳ್ಯೂರು ರಾಮಚಂದ್ರ ರಾವ್‌ , ಗೋವಿಂದ ಭಟ್‌ ಸೂರಿಕುಮೇರು , ಜಲವಳ್ಳಿ ವೆಂಕಟೇಶ್‌ ರಾವ್‌ , ಎಂ. ವಾಸುದೇವ ಸಾಮಗ , ಶಿವರಾಮ ಜೋಗಿ ,  ಪಾತಾಳ ವೆಂಕಟರಮಣ , ವಿಟ್ಲ ಜೋಷಿ ,  ಎಂ.ಕೆ.ರಮೇಶಾಚಾರ್ಯ , ವೇಣೂರು ಸುಂದರಾಚಾರ್ಯ , ಕೊಕ್ಕಡ ಈಶ್ವರ ಭಟ್ ಮೊದಲಾದ ದಿಗ್ಗಜರಿಗೆ ಭಾಗವತಿಕೆ ಮಾಡಿ ಸೈ ಎನಿಸಿಕೊಂಡವರು ಅಗರಿ ರಘುರಾಮ ಭಾಗವತರು. 

ಶ್ರೀನಿವಾಸ ಭಾಗವತರ ನಂತರ ರಘುರಾಮ ಭಾಗವತರು ಜನಪ್ರಿಯಗೊಳಿಸಿದ ಅಗರಿ ಶೈಲಿ ಯಕ್ಷರಂಗದಲ್ಲಿ ಸ್ಥಾಯಿಯಾಗಿ ಉಳಿಯಲಿ. ಅವರು ನೀಡಿದ ಕಲಾ ಮೌಲ್ಯಗಳು ಇಂದಿನ ಭಾಗವತರಿಗೆ ಆದರ್ಶವಾಗಲಿ ಎನ್ನುವುದು ಆಶಯ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.