ವಾದ್ರಾಗೆ ಷರತ್ತುಬದ್ಧ ಮಧ್ಯಂತರ ಜಾಮೀನು
Team Udayavani, Feb 3, 2019, 1:08 AM IST
ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನ ಭೀತಿ ಎದುರಿಸುತ್ತಿದ್ದ ರಾಬರ್ಟ್ ವಾದ್ರಾ ಅವರಿಗೆ ದೆಹಲಿಯ ಕೋರ್ಟ್ ಶನಿವಾರ ಮಧ್ಯಂತರ ಜಾಮೀನು ನೀಡಿದೆ. ಫೆ.16ರವರೆಗೆ ಜಾಮೀನು ಮಂಜೂರು ಮಾಡಲಾಗಿದ್ದು, ಫೆ.6ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕು ಮತ್ತು ತನಿಖೆಯಲ್ಲಿ ಸಹ ಕರಿಸಬೇಕು ಎಂಬ ಷರತ್ತನ್ನೂ ಹಾಕಲಾಗಿದೆ.
ಲಂಡನ್ನ ಬ್ರ್ಯಾನ್ಸ್ಟನ್ ಸ್ಕ್ವೇರ್ ನಲ್ಲಿರುವಂಥ 1.9 ದಶಲಕ್ಷ ಪೌಂಡ್ ಮೌಲ್ಯದ ಆಸ್ತಿಯ ಖರೀದಿ ವೇಳೆ ಹಣಕಾಸು ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ವಾದ್ರಾ ಮೇಲಿದೆ. ಶನಿವಾರ ವಿಚಾರಣೆ ವೇಳೆ ಹಾಜರಾಗಿದ್ದ ಇ.ಡಿ. ಪರ ವಕೀಲರಾದ ನಿತೇಶ್ ರಾಣಾ, ‘ವಾದ್ರಾ ಅವರು ಲಂಡನ್ನಲ್ಲಿ ಹಲವು ಆಸ್ತಿಪಾಸ್ತಿಗಳನ್ನು ಹೊಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಎರಡು ಮನೆಗಳು, 6 ಫ್ಲ್ಯಾಟ್ಗಳು ಸೇರಿದಂತೆ ಹಲವು ಆಸ್ತಿಯನ್ನು ಅವರು ಹೊಂದಿದ್ದಾರೆ. ವಾದ್ರಾ ಅವರು ನಮ್ಮ ಮುಂದೆ ಬಂದು ಅವುಗಳ ವಿವರ ನೀಡಬೇಕು. ಜತೆಗೆ, 2009ರ ಪೆಟ್ರೋಲಿಯಂ ಡೀಲ್ನಲ್ಲಿಯೂ ವಾದ್ರಾ ಕಿಕ್ಬ್ಯಾಕ್ ಪಡೆದಿದ್ದಾರೆ. ಹೀಗಾಗಿ, ಅವರಿಗೆ ಜಾಮೀನು ನೀಡಬಾರದು’ ಎಂದು ವಾದಿಸಿದರು.
ವಾದ್ರಾ ಪರ ವಾದಿಸಿದ ವಕೀಲ ಕೆಟಿಎಸ್ ತುಳಸಿ, ನನ್ನ ಕಕ್ಷಿದಾರ ತಮ್ಮ ತಾಯಿಯ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದಾರೆ. ಅವರು ಖಂಡಿತಾ ವಾಪಸ್ ಬಂದು, ತನಿಖೆಯಲ್ಲಿ ಸಹಕರಿಸುತ್ತಾರೆ. ಹಾಗಾಗಿ ಅವರಿಗೆ ಜಾಮೀನು ನೀಡಬೇಕು ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು