ತಪ್ಪು ಮಾಡದಿದ್ದರೆ ಭಯವೇಕೆ?


Team Udayavani, Feb 3, 2019, 1:24 AM IST

x-23.jpg

ಕೋಲ್ಕತ್ತಾ: ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾದ ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಲೋಕಸಭೆ ಚುನಾವಣೆಯ ಕಹಳೆ ಊದಿದ್ದಾರೆ. ಎರಡು ರ್ಯಾಲಿಗಳಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ಅವರು, ದೀದಿ ವಿರುದ್ಧ ಟೀಕಾಪ್ರಹಾರ ನಡೆಸುವುದರ ಜೊತೆಗೆ, ಮಹಾಮೈತ್ರಿಗೆ ಮುಂದಾದ ಪ್ರತಿಪಕ್ಷಗಳನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

‘ದೀದಿಯವರೇ, ನೀವು ಯಾವುದೇ ತಪ್ಪು ಮಾಡಿಲ್ಲ ಎಂದಾದರೆ, ಈ ಚೌಕಿದಾರನನ್ನು ಕಂಡೊಡನೆ ಹೆದರುವುದೇಕೆ’ ಎಂದು ಪ್ರಶ್ನಿಸಿದ ಮೋದಿ, ನಾನು ಕಪ್ಪುಹಣ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇನೆ ಎಂಬ ಏಕೈಕ ಕಾರಣಕ್ಕೆ ಎಲ್ಲರೂ ನನ್ನನ್ನು ಹೀಗಳೆಯುತ್ತಿದ್ದಾರೆ. ಈ ದೇಶದ ಅತ್ಯಂತ ಪ್ರಭಾವಿ ಕುಟುಂಬದ ಸದಸ್ಯರೂ ತೆರಿಗೆ ತಪ್ಪಿಸಿಕೊಂಡು ಕೋರ್ಟ್‌ ಬಾಗಿಲು ತಟ್ಟುವಂಥ ಪರಿಸ್ಥಿತಿ ಬಂದಿದೆ. ಯಾರೆಲ್ಲ ಪರಾರಿಯಾಗಿದ್ದಾರೋ, ಅವರೆಲ್ಲರನ್ನೂ ಒಬ್ಬೊಬ್ಬರನ್ನಾಗಿ ವಾಪಸ್‌ ಕರೆತರುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ಇದೇ ವೇಳೆ, ದೀದಿ ಮತ್ತು ಅವರ ಪಕ್ಷ್ಷವು ಹಿಂಸೆಯಲ್ಲಿ ಯಾಕೆ ತೊಡಗಿದೆ ಎಂದು ಈಗ ಅರ್ಥವಾಯಿತು. ನೀವು ನಮ್ಮ ಮೇಲೆ ತೋರಿಸುತ್ತಿರುವ ಪ್ರೀತಿಯನ್ನು ಅವರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಹೀಗಾಗಿಯೇ ಅವರು ಅಮಾಯಕರನ್ನು ಕೊಲೆ ಮಾಡು ತ್ತಿದ್ದಾರೆ ಎಂದೂ ಮೋದಿ ಆರೋಪಿಸಿದ್ದಾರೆ.

ಮಮತಾ ಸರ್ಕಾರವು ಮಧ್ಯಮ ವರ್ಗದವರ ಇಚ್ಛೆಗಳನ್ನೇ ಕೊಲ್ಲುತ್ತಿದೆ. ಆಡಳಿತಾರೂಢ ಪಕ್ಷವು ತ್ರಿವಳಿ ‘ಟಿ’ಗೆ ಹೆಸರುವಾಸಿಯಾಗಿದೆ. ಅವೆಂದರೆ, ತೃಣಮೂಲ್‌ ತೋಲಾಬಾಜಿ ಟ್ಯಾಕ್ಸ್‌. ತೋಲಾಬಾಜಿ ಎಂದರೆ ಸಂಘಟಿತ ಲೂಟಿ ಎಂದರ್ಥ. ಆದರೆ, ನಮ್ಮ ಸರ್ಕಾರ ಜನರ ಕನಸುಗಳನ್ನು ಈಡೇರಿಸುತ್ತಿದೆ ಎಂದಿದ್ದಾರೆ ಮೋದಿ.

ಬಿಜೆಪಿ-ಟಿಎಂಸಿ ಘರ್ಷಣೆ: ಪ್ರಧಾನಿ ರ್ಯಾಲಿಗೂ ಮುನ್ನ ಅಂದರೆ ಶುಕ್ರವಾರ ರಾತ್ರಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಪೋಸ್ಟರ್‌ ವಾರ್‌ ನಡೆದಿದೆ. ನಾವು ಅಂಟಿಸಿದ್ದ ಪ್ರಧಾನಿ ಮೋದಿ ಅವರ ಪೋಸ್ಟರ್‌ಗಳನ್ನು ಟಿಎಂಸಿ ಕಾರ್ಯಕರ್ತರು, ಕಿತ್ತೆಸೆದು ಅಲ್ಲಿ ಟಿಎಂಸಿ ನಾಯಕರ ಪೋಸ್ಟ್‌ ರಗಳನ್ನು ಅಂಟಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಇದನ್ನು ಅಲ್ಲಗಳೆ ದಿ ರುವ ಟಿಎಂಸಿ, ಸಿಎಂ ಮಮತಾ ಬ್ಯಾನರ್ಜಿ ಅವರ ಪೋಸ್ಟರ್‌ಗೆ ಬಿಜೆಪಿ ಕಾರ್ಯಕರ್ತರು ಮಸಿ ಬಳಿದಿದ್ದರಿಂದಲೇ ಘರ್ಷಣೆ ಆರಂಭ ವಾಯಿತು ಎಂದಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.