ಮುಸ್ಲಿಮರ ಧರ್ಮ ಸಮ್ಮೇಳನಕ್ಕೆ ಕಲಾದಗಿಯಲ್ಲಿ ಸಿದ್ಧತೆ


Team Udayavani, Feb 3, 2019, 1:40 AM IST

16.jpg

ಬಾಗಲಕೋಟೆ: ಬ್ರಿಟಿಷರ ಆಳ್ವಿಕೆಯಲ್ಲಿ ಜಿಲ್ಲಾ ಕೇಂದ್ರವಾಗಿದ್ದ ತಾಲೂಕಿನ ಕಲಾದಗಿಯಲ್ಲಿ ಮುಸ್ಲಿಂ ಸಮುದಾಯದ ದಕ್ಷಿಣ ಭಾರತ ಮಟ್ಟದ ಬಡೇ ಇಜ್ತೆಮಾ (ಧರ್ಮ ಸಮ್ಮೇಳನ)ಕ್ಕೆ ಸಿದ್ಧತೆ ಜೋರಾಗಿ ನಡೆಯುತ್ತಿದೆ.

ಕಲಾದಗಿಯಿಂದ 3 ಕಿ.ಮೀ. ದೂರದಲ್ಲಿರುವ ಪುನರ್‌ವಸತಿ ಕೇಂದ್ರದ ಅಕ್ಕ-ಪಕ್ಕದ ಸುಮಾರು 650 ಎಕರೆ ಕೃಷಿ ಭೂಮಿಯಲ್ಲಿ ಫೆ. 16ರಿಂದ 18ರವರೆಗೆ 3 ದಿನ ನಡೆಯುವ ಈ ಇಜ್ತೆಮಾಕ್ಕೆ ಪೂರ್ವ ಸಿದ್ಧತೆ ನಡೆದಿದೆ. 82 ಎಕರೆ ಪ್ರದೇಶದಲ್ಲಿ (25 ಲಕ್ಷ ಚದರ ಅಡಿ ಸುತ್ತಳತೆ) ಬೃಹತ್‌ ಪೆಂಡಾಲ್‌ ಹಾಕಲಾಗುತ್ತಿದೆ. ದಕ್ಷಿಣ ಭಾರತದ ಕರ್ನಾಟಕ, ಮಹಾರಾಷ್ಟ್ರ ಸಹಿತ ವಿವಿಧೆಡೆಯ ಮುಸ್ಲಿಂ ಸಮುದಾಯದವರು ಪಾಲ್ಗೊಳ್ಳಲಿದ್ದು, ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇದೊಂದು ಧರ್ಮ ಸಮ್ಮೇಳನ. ಇಲ್ಲಿ ಘೋಷಣೆಗಳು, ಮೆರವಣಿಗೆ ಇರುವುದಿಲ್ಲ. ಕೇವಲ ಕುರಾನ್‌, ಮೊಹ್ಮದ ಪೈಗಂಬರ ಕುರಿತ ಪ್ರವಚನ ನಡೆಯುತ್ತದೆ. ಜತೆಗೆ ಮುಸ್ಲಿಂ ಬಾಂಧವರು, ಇತರೆ ಸಮಾಜ ಬಾಂಧವರೊಂದಿಗೆ ಸೌಹಾರ್ದತೆಯಿಂದ ಜೀವನ ನಡೆಸುವ ಕುರಿತು ಧರ್ಮ ಗುರುಗಳು ತಿಳಿವಳಿಕೆಯ ಬೋಧನೆ ಮಾಡುತ್ತಾರೆ. ನಿತ್ಯ ಸಾಮೂಹಿಕ ಪ್ರಾರ್ಥನೆ, ಪ್ರವಚನ ಬಿಟ್ಟರೆ ಬೇರೆ ಯಾವ ಕಾರ್ಯಕ್ರಮಗಳೂ ನಡೆಯುವುದಿಲ್ಲ. ಈ ಕುರಿತು ಕೆಲವರಿಗೆ ತಪ್ಪು ತಿಳಿವಳಿಕೆಯಿದೆ. ವಿರೋಧ ಮಾಡುವವರು, ಸ್ಥಳಕ್ಕೆ ಬಂದು ನೋಡಬೇಕು. ಈ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು, ಮಹಿಳೆಯರಿಗೆ ಪ್ರವೇಶವಿಲ್ಲ. ಯಾವುದೇ ಧರ್ಮ-ಸಮಾಜದ ಪುರುಷರು ಬಂದು ಭಾಗವಹಿಸಬಹುದು. ಉರ್ದು ಭಾಷೆಯಲ್ಲಿ ನಡೆಯುವ ಪ್ರವಚನವನ್ನು ಕನ್ನಡಕ್ಕೆ ಅನುವಾದ ಮಾಡಲೂ ವ್ಯವಸ್ಥೆ ಮಾಡಲಾಗಿದೆ ಎಂದು ಉಸ್ತುವಾರಿ ನೋಡಿಕೊಳ್ಳುತ್ತಿರುವ ಮೊಹ್ಮದಯಾಸೀನ್‌ ಮೊಮಿನ್‌ ತಿಳಿಸಿದರು.

ಲಕ್ಷಾಂತರ ಜನರಿಗಾಗಿ ಕಾರ್ಯಕ್ರಮ ನಡೆಯುವ ಬೃಹತ್‌ ಪೆಂಡಾಲ್‌ ಸುತ್ತಲಿನ ನಾಲ್ಕು ಕಡೆ ಒಟ್ಟು 2 ಸಾವಿರ ತಾತ್ಕಾಲಿಕ ಶೌಚಾಲಯ ನಿರ್ಮಿಸಲಾಗುತ್ತಿದೆ. ಇದಕ್ಕೆ ಇಂಗುಗುಂಡಿ ವ್ಯವಸ್ಥೆ ಮಾಡಿದ್ದು, 10 ಸಕ್ಕಿಂಗ್‌ ಯಂತ್ರವನ್ನೂ ತರಿಸಲಾಗುತ್ತಿದೆ. ಎಂಟು ವೈದ್ಯಕೀಯ ಕೇಂದ್ರಗಳು, 80 ಕುಡಿಯುವ ನೀರು ವಿತರಣೆ ಮಾಡುವ ಕೇಂದ್ರಗಳು, ಎರಡು ಆಂಬ್ಯುಲೆನ್ಸ್‌, 34 ಊಟದ ಸ್ಟಾಲ್‌ಗ‌ಳು, ಒಂದು ಸಾವಿರ ಚಿಕ್ಕ ಚಿಕ್ಕ ಹೊಟೇಲ್‌ಗ‌ಳು, 60 ಅಡಿ ಸುತ್ತಳತೆಯ ಎಂಟು ಕೃಷಿ ಹೊಂಡ ತೋಡಲಾಗಿದೆ. ಕುಡಿಯುವ ನೀರಿಗಾಗಿ 1 ಕೋಟಿ ರೂ. ಮೊತ್ತದ ಒಂದು ಲೀಟರ್‌ನ ಶುದ್ಧ ಕುಡಿಯುವ ನೀರಿನ ಬಾಟಲ್‌ಗ‌ಳನ್ನು ಖರೀದಿಸಲಾಗಿದೆ.

ಸಮ್ಮೇಳನಕ್ಕೆ ಕಲಾದಗಿಯ ಸುಮಾರು 78 ರೈತರ, 630 ಎಕರೆಯಷ್ಟು ಭೂಮಿಯನ್ನೇ ಬಳಕೆ ಮಾಡಲಾಗುತ್ತಿದೆ. ಈ ಭೂಮಿಯಲ್ಲಿ ಒಟ್ಟು 16 ಕೊಳವೆ ಬಾವಿಗಳಿವೆ. ಆ ನೀರನ್ನು ಎಂಟು ಕೃಷಿ ಹೊಂಡಗಳಿಗೆ ತುಂಬಿಸಿಕೊಂಡು, 3 ದಿನ ಉಪಯೋಗಿಸಲಾಗುವುದು. ಪ್ರತಿದಿನ ಶಾಖಾಹಾರಿ ಊಟ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇಲ್ಲಿ ಹಾಕಲಿರುವ ಹೊಟೇಲ್‌ಗ‌ಳಿಗೂ ಮಾಂಸಾಹಾರ ನೀಡದಂತೆ ಸೂಚನೆ ನೀಡಲಾಗಿದೆ. ಒಟ್ಟಾರೆ, ಇದೊಂದು ಸೌಹಾರ್ದಯುತ ಜೀವನಕ್ಕೆ ಬೋಧನೆ ಮಾಡುವ ಧರ್ಮ ಸಮ್ಮೇಳನ ಆಗಿದೆ ಎಂದು ಮೋಮಿನ್‌ ತಿಳಿಸಿದರು.

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.