ಮತ್ತೆ ಹಳಿ ತಪ್ಪಿದ ಭಾರತದ ಬ್ಯಾಟಿಂಗ್
Team Udayavani, Feb 3, 2019, 4:06 AM IST
ವೆಲ್ಲಿಂಗ್ಟನ್ : ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯವಾಡಲಿಳಿದ ಭಾರತ ತಂಡದ ಬ್ಯಾಟಿಂಗ್ ಮತ್ತೆ ಹಳಿ ತಪ್ಪಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ತಂಡ ಆರಂಭಿಕ ಕುಸಿತದ ನಂತರ ಸುಧಾರಿಸಿದ ಭಾರತ 40 ಓವರ್ ನಷ್ಟಕ್ಕೆ ಐದು ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ. ಅಂಬಟಿ ರಾಯುಡು 75 ರನ್ ಗಳಿಸಿ ಆಟವಾಡುತ್ತಿದ್ದಾರೆ.
ಕಳೆದ ಪಂದ್ಯದಂತೆ ಭಾರತದ ಆರಂಭಿಕರು ಉತ್ತಮ ಅಡಿಪಾಯ ಹಾಕುವಲ್ಲಿ ವಿಫಲರಾದರು. ನಾಯಕ ರೋಹಿತ್ ಶರ್ಮಾ ಕೇವಲ ಎರಡು ರನ್ ಗಳಿಸಿ ಮ್ಯಾಟ್ ಹೆನ್ರಿ ಗೆ ವಿಕೆಟ್ ಒಪ್ಪಿಸಿದರೆ, ಶಿಖರ್ ಧವನ್ ಗಳಿಕೆ ಆರು ರನ್. ಯುವ ಆಟಗಾರ ಶುಭ್ಮನ್ ಗಿಲ್ ಮತ್ತೊಂದು ಚಾನ್ಸ್ ಪಡೆದರೂ ಗಳಿಸಿದ್ದು ಮಾತ್ರ ಏಳು ರನ್.
ಕಳೆದೆರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ಅನುಭವಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಕೇವಲ ಒಂದು ರನ್ ಮಾಡಿ ಬೌಲ್ಟ್ ಗೆ ಬೌಲ್ಡ್ ಆದರು. ಸದ್ಯ ಅಂಬಾಟಿ ರಾಯುಡುಗೆ ಉತ್ತಮ ಸಾಥ್ ನೀಡಿ ವಿಜಯ್ ಶಂಕರ್ 45 ರನ್ ಮಾಡಿ ಔಟಾದರು.
ಮ್ಯಾಟ್ ಹೆನ್ರಿ ಮತ್ತು ಟ್ರೆಂಟ್ ಬೌಲ್ಟ್ ತಲಾ ಎರಡು ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಭಾರತ ಮೂರು ಬದಲಾವಣೆ ಮಾಡಿಕೊಂಡಿತು. ದಿನೇಶ್ ಕಾರ್ತಿಕ್, ಖಲೀಲ್ ಅಹಮದ್, ಕುಲದೀಪ್ ಯಾದವ್ ಬದಲಿಗೆ ಮಹೇಂದ್ರ ಸಿಂಗ್ ಧೋನಿ, ಮೊಹಮ್ಮದ್ ಶಮಿ, ವಿಜಯ್ ಶಂಕರ್ ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ