ಕೇಂದ್ರ ಬಜೆಟ್: ಚುನಾವಣಾ ಪ್ರಣಾಳಿಕೆಯಷ್ಟೆ


Team Udayavani, Feb 3, 2019, 7:20 AM IST

kendra.jpg

ಕೊರಟಗೆರೆ: ಕೇಂದ್ರ ಸರ್ಕಾರದ 2019ರ ಆಯವ್ಯಯ ಕೇವಲ ಚುನಾವಣಾ ಪ್ರಣಾಳಿಕೆಯಷ್ಟೆ ಹೊರತು ರೈತರು, ಮಧ್ಯಮ ವರ್ಗ ಹಾಗೂ ಬಡವರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಸಂಸದ ಎಸ್‌.ಪಿ. ಮುದ್ದಹನುಮೇಗೌಡ ತಿಳಿಸಿದರು.

ಕೊರಟಗೆರೆ ಕ್ಷೇತ್ರದಲ್ಲಿ ಶಾಸಕ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ರವರ ಅನುದಾನದ 2.5 ಕೋಟಿ ರೂ.ಗಳ ಎಸ್‌ಇಟಿ, ಪಿಎಸ್‌ಟಿ ಯೋಜನೆಯ ಕಾಮಗಾರಿಗಳಿಗೆ ಜಟ್ಟಿ ಅಗ್ರಹಾರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚಾಲನೆ ನೀಡಿ ಮಾತನಾಡಿದರು.

ಸೋತ ಮೇಲೆ ಕಾಳಜಿ: ಕೇಂದ್ರದ ಪ್ರಧಾನಿ ಮೋದಿ ಸರ್ಕಾರಕ್ಕೆ ಇತ್ತೀಚೆಗೆ ಪಂಚರಾಜ್ಯಗಳ ಚುನಾವಣೆ ಯಲ್ಲಿ ಸೋತ ಮೇಲೆ ರೈತರ ಹಾಗೂ ಬಡವರ ಬಗ್ಗೆ ಕಾಳಜಿ ಬಂದಿದ್ದು, 2019ರ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರೈತರಿಗೆ ವರ್ಷಕ್ಕೆ 6 ಸಾವಿರ ರೂ. ಬ್ಯಾಂಕ್‌ ಖಾತೆಗೆ ಹಾಕುವುದು ಸೇರಿದಂತೆ ಮಧ್ಯಮ ಹಾಗೂ ಬಡವರಿಗೆ ಅನುಕೂಲವಾಗುವ ಯೋಜನೆ ಗಳನ್ನು ಕಣ್ಣೊರೆಸುವ ತಂತ್ರವಾಗಿ ಮಂಡಿಸಿದ್ದಾರೆ.

ಆದರೆ, ಈ ಕೆಲಸವನ್ನು ಕೇಂದ್ರ ಸರ್ಕಾರ 4 ವರ್ಷದ ಹಿಂದೆಯೇ ಬಜೆಟ್‌ನಲ್ಲಿ ಘೋಷಿಸಿದ್ದರೆ ಆ ವರ್ಗದ ಜನರ ಬಗ್ಗೆ ಕಾಳಜಿ ಇರುವುದಾಗಿ ನಂಬಹುದಿತ್ತು. ಆದರೆ, 4 ವರ್ಷಗಳ ಆಯವ್ಯಯದಲ್ಲಿ ಪ್ರಧಾನಿ ಮೋದಿ ಸರ್ಕಾರವು ಉದ್ಯಮಿ ಹಾಗೂ ಶ್ರೀಮಂತರಿಗೆ ಅನುಕೂಲವಾಗುವ ಬಜೆಟ್ ನೀಡಿ ಈಗ ಚುನಾವಣೆ ಸಂದರ್ಭದಲ್ಲಿ ಕೆಳ ವರ್ಗದ ಜನರಿಗೆ ಬಜೆಟ್ ನೀಡಿದ್ದು, ಈ ಆಯವ್ಯಯವು ಜನರಿಗೆ ತಲುವ ಹೊತ್ತಿಗೆ ಚುನಾವಣೆ ಬರಲಿದ್ದು, ಕೇವಲ ಪ್ರಣಾಳಿಕೆಯಾಗಿ ಉಳಿಯಲಿದೆ ಎಂದು ತಿಳಿಸಿದರು.

ಅನುದಾನ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಕೊರಟಗೆರೆ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ತರುತ್ತಿದ್ದು, ಅವರಿಗೆ ಕ್ಷೇತ್ರದ ಜನರು ಅವರಿಗೆ ನೀಡಿರುವ ಅಧಿಕಾರಕ್ಕೆ ಜನರ ಋಣ ತೀರಿಸುವ ಕೆಲಸವನ್ನು ಪ್ರಮಾಣಿಕವಾಗಿ ಮಾಡುತ್ತಿದ್ದಾರೆ. ಈಗಾಗಲೇ ಕೊರಟಗೆರೆ ಪಟ್ಟಣ ಸೇರಿದಂತೆ ಕ್ಷೇತ್ರದ ಎಲ್ಲಾ ಹೋಬಳಿಗಳಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಅನುದಾನ ಹಾಗೂ ಶಾಶ್ವತ ಕಾಮಗಾರಿಗಳಿಗೆ ವಿಶೇಷ ಅನುದಾನ ತರುವ ಕೆಲಸದಲ್ಲಿ ರಾಜ್ಯದ ಜವಾಬ್ದಾರಿಯೊಂದಿಗೆ ಹಗಲಿ ರುಳು ಶ್ರಮಿಸುತ್ತಿದ್ದಾರೆ ಎಂದರು.

ಈ ವೇಳೆ ಜಿಪಂ ಸದಸ್ಯೆ ಅಕ್ಕಮಹಾದೇವಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್‌, ಅರಕೆರೆ ಶಂಕರ್‌, ಮಾಜಿ ಅಧ್ಯಕ್ಷ ಮೈಲಾರಪ್ಪ, ಮಹಿಳಾ ಅಧ್ಯಕ್ಷೆ ಜಯಮ್ಮ, ಜೆಡಿಎಸ್‌ ಕಾರ್ಯಾ ಧ್ಯಕ್ಷ ನರಸಿಂಹರಾಜು, ಗ್ರಾಪಂ ಅಧ್ಯಕ್ಷರಾದ ನಂದೀಶ್‌, ಮಹಿಮಾ, ಸದಸ್ಯರಾದ ಸಂಜೀವ ರಾಯಪ್ಪ, ಸುನಿತಾ, ಪಪಂ ಸದಸ್ಯ ಎ.ಡಿ. ಬಲರಾಮಯ್ಯ, ಲೋಕೋಪಯೋಗಿ ಇಲಾಖೆ ಎಇಇ ಜಗದೀಶ್‌, ತಾಪಂ ಉಪಾಧ್ಯಕ್ಷ ನರಸಮ್ಮ, ಮಾಜಿ ಸದಸ್ಯರಾದ ಬಸವರಾಜು, ಅಂಜಿನಪ್ಪ, ಮುಖಂಡರಾದ ಮಧುಸೂದನ್‌, ಮಂಜುಳಾ ರಾಧ್ಯ, ಚೆಲುವರಾಜು ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.