ಯುಜಿಡಿ-24×7 ನೀರು ಕಾಮಗಾರಿ ವಿಳಂಬಕ್ಕೆ ಸಚಿವ ನಾಡಗೌಡ ಆಕ್ರೋಶ


Team Udayavani, Feb 3, 2019, 9:40 AM IST

ray-4.jpg

ಸಿಂಧನೂರು: ನಗರದಲ್ಲಿ ಯುಜಿಡಿ, ನಗರೋತ್ಥಾನ ಹಾಗೂ 24/7 ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿದ್ದಕ್ಕೆ ಮತ್ತು ಅಧಿಕಾರಿಗಳ ಬೇಜವಾಬ್ದಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಪ್ರಸಂಗ ನಗರಸಭೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜರುಗಿತು.

ನಗರಸಭೆ ಕಾರ್ಯಾಲಯದಲ್ಲಿ ಶನಿವಾರ ಯುಜಿಡಿ ನಗರೋತ್ಥಾನ ಹಾಗೂ 24/7 ಕಾಮಗಾರಿ ಪ್ರಗತಿ ಕುರಿತು ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಬಗ್ಗೆ ಹಲವು ಸಲ ಸಭೆ ನಡೆಸಿದರೂ ಅಧಿಕಾರಿಗಳು ಬೇಜವಾಬ್ದಾರಿ ತೋರುತ್ತಿದ್ದಿರಿ. ನಿಮಗೇನಾದರೂ ಮಾನ, ಮರ್ಯಾದೆ ಇದೆಯೇ, ಇಲ್ಲವೋ ಎಂದು ತರಾಟೆಗೆ ತೆಗೆದುಕೊಂಡರು.

ವಿವಿಧ ವಾರ್ಡ್‌ಗಳಲ್ಲಿ ಅರೆಬರೆ ಕೆಲಸಗಳು ಮಾಡಿದ್ದಿರಿ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಾಮಗಾರಿ ತ್ವರಿತಕ್ಕೆ ಹಲವು ಬಾರಿ ಸಭೆಯಲ್ಲಿ ಸೂಚಿಸಿದ್ದರೂ ನಿರ್ಲಕ್ಷ್ಯ ತೋರಲಾಗುತ್ತಿದೆ. ಇದು ಸರಿಯಲ್ಲ. ಬೇಜವಾಬ್ದಾರಿ ತೋರುವ ಅಧಿಕಾರಿಗಳನ್ನು ಅಮಾನತು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಯುಜಿಡಿ ಹಾಗೂ 24/7 ನೀರು ಕಾಮಗಾರಿಯನ್ನು ಜನ ವಾಸಿಸದ ಪ್ರದೇಶಗಳಲ್ಲಿ ಕೂಡ ಮಾಡಲಾಗಿದೆ. ಅಲ್ಲಿ ಮಾಡಲು ನಿಮಗೆ ಯಾರು ತಿಳಿಸಿದವರು, ಜನದಟ್ಟಣೆ ಇರುವ ವಾರ್ಡ್‌ಗಳಲ್ಲಿ ಕೆಲಸ ಮಾಡುವುದನ್ನು ಬಿಟ್ಟು ನಗರದ ಕೆರೆಯ ಹತ್ತಿರ ಕೆಲಸ ಮಾಡಿರುವುದು ಎಷ್ಟು ಸರಿ. ಇಂತಹ ಬೇಜವಾಬ್ದಾರಿ ಕೆಲಸಗಳು ಪುನಃ ಮುಂದುವರಿದರೆ ಅಧಿಕಾರಿಗಳನ್ನು ಅಮಾನತು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಗರದ ಕೆಲ ವಾರ್ಡ್‌ಗಳಲ್ಲಿ ಯುಜಿಡಿ ಚೇಂಬರ್‌ ಕೆಲಸ ಇನ್ನೂ ಆಗಿಲ್ಲ. ಅಧಿಕಾರಿಗಳು ತೋರಿಸುವ ಮಾಹಿತಿ ಪ್ರಕಾರ ಶೇ.80ರಷ್ಟು ಕೆಲಸ ಮುಗಿದಿರುತ್ತದೆ ಎಂದು ಹೇಳುತ್ತಿರಿ. ಇಂತಹ ಉಡಾಫೆ ಉತ್ತರ ಬಿಟ್ಟು ಕೆಲಸದ ಕಡೆಗೆ ಗಮನ ಹರಿಸಿ. ಯಾರ ಮಾತಿಗೂ ನೀವು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ನಿಮ್ಮ ಕೆಲಸದ ಕಡೆಗೆ ಮಾತ್ರ ಗಮನ ಹರಿಸಿದರೆ ಒಳ್ಳೆಯದು. ಇಲ್ಲವಾದರೆ ನಿಮ್ಮನ್ನು ಮನೆಗೆ ಕಳಿಸಲಾಗುತ್ತದೆ ಎಂದು ಎಚ್ಚರಿಸಿದರು.

ಗಪ್‌ಚುಪ್‌: ಅಧಿಕಾರಿಗಳ ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ಜೆಡಿಎಸ್‌ ಹಾಗೂ ಕೆಲ ನಗರಸಭೆ ಸದಸ್ಯರು ಅಧಿಕಾರಿಗಳಿಗೆ ಪದೇಪದೆ ಪ್ರಶ್ನೆ ಕೇಳಲು ಮುಂದಾಗ ಗರಂ ಆದ ಸಚಿವ ನಾಡಗೌಡ, ನಾನು ಮಾತನಾಡುತ್ತಿರುವಾಗ ಬೇರೆಯವರು ಮಾತನಾಡಬಾರದು. ಸ್ವಲ್ಪ ಬಾಯಿ ಮುಚ್ಚಿಕೊಂಡಿದ್ದರೆ, ಒಳ್ಳೆಯದು ಎಂದು ಗದರಿದರು.

ಜಾಗದ ಕೊರತೆ: ನಗರಸಭೆ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಆಗಮಿಸಿದ್ದರು. ಆದರೆ ಕಾರ್ಯಾಲಯದಲ್ಲಿ ಜಾಗದ ಕೊರತೆ ಹಾಗೂ ಆಸನಗಳು ಇಲ್ಲದ್ದರಿಂದ ಯುಜಿಡಿ, 24/7 ಹಾಗೂ ನಗರೋತ್ಥಾನ ಇಲಾಖೆ ಅಧಿಕಾರಿಗಳನ್ನು ಹೊರಗೆ ಕಳುಹಿಸಿದ ಸಚಿವರು ಸಾರಿಗೆ ಇಲಾಖೆ ಸಭೆ ನಡೆಸಿದರು. ಕೆಲ ಇಲಾಖೆ ಅಧಿಕಾರಿಗಳು ಕೂಡ ಸಚಿವರ ಸೂಚನೆ ಮೇರೆಗೆ ಹೊರಹೋದರು. ವಿವಿಧ ಇಲಾಖೆ ಅಧಿಕಾರಿಗಳಾದ ಗಿರೀಶ ನಾಯಕ, ಅರುಣ, ದಿವಾಕರ, ನಗರಸಭೆ ಸದಸ್ಯರಾದ ಚಂದ್ರಶೇಖರ ಮೈಲಾರ, ದಾಸರ ಸತ್ಯನಾರಾಯಣ, ವೀರೇಶ ಹಟ್ಟಿ, ಆಲಂಬಾಷಾ, ಹನುಮೇಶ ಕುರಕುಂದ, ಮುಖಂಡರಾದ ಸಾಯಿರಾಮ್‌ ಕೃಷ್ಣ, ವೆಂಕಟೇಶ ನಂಜಲದಿನ್ನಿ, ಅಶೋಕಗೌಡ ಗದ್ರಟಗಿ ಇತರರು ಇದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.