ಚಿಟ್ಫಂಡ್ ಸ್ಕ್ಯಾಮ್;ಸಿಬಿಐ ತಂಡವನ್ನೇ ಬಂಧಿಸಿದ ಕೋಲ್ಕತಾ ಪೊಲೀಸರು
Team Udayavani, Feb 3, 2019, 1:49 PM IST
ಕೋಲ್ಕತಾ: ಚಿಟ್ ಫಂಡ್ ಹಗರಣದ ತನಿಖೆಯ ಅಂಗವಾಗಿ ಸಿಬಿಐ ಅಧಿಕಾರಿಗಳು ಭಾನುವಾರ ಸಂಜೆ ಕೋಲ್ಕತಾ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಐವರು ಸಿಬಿಐ ಅಧಿಕಾರಿಗಳನ್ನು ಪೊಲೀಸರು ಗೇಟ್ ಬಳಿ ತಡೆದು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಘಟನೆ ನಡೆದ ಬೆನ್ನಲ್ಲೇ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲಂಡನ್ ಸ್ಟ್ರೀಟ್ನಲ್ಲಿರುವ ಕುಮಾರ್ ಅವರ ನಿವಾಸಕ್ಕೆ ದೌಡಾಯಿಸಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಶ್ಚಿಮ ಬಂಗಾಳದ ಡಿಜಿಪಿ ಮತ್ತು ಕೋಲ್ಕತಾ ಮೇಯರ್ ಉಪಸ್ಥಿತರಿದ್ದರು.
ರೋಸ್ ವ್ಯಾಲಿ ಹಗರಣ ಮತ್ತು ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆಸುತ್ತಿದ್ದು , ರಾಜೀವ್ ಕುಮಾರ್ ಅವರನ್ನು ಬಂಧಿಸಲು ಆಗಮಿಸಿದ್ದರು ಎನ್ನಲಾಗಿದೆ.
ಐಪಿಎಸ್ ಅಧಿಕಾರಿಯಾಗಿದ್ದ ರಾಜೀವ್ ಕುಮಾರ್ ಅವರು ಪಶ್ಚಿಮ ಬಂಗಾಳ ಸರಕಾರ ರಚಿಸಿದ್ದ ಎಸ್ಐಟಿಯಲ್ಲಿ ತನಿಖಾಧಿಯಾಗಿದ್ದರು. ಹಗರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿರುವ ಕಡತಗಳು ಮತ್ತು ಮಹತ್ವದ ದಾಖಲೆಗಳಿಗೆ ಸಂಬಂಧಿಸಿ ಅವರನ್ನು ವಿಚಾರಣೆ ನಡೆಸಲು ಸಿಬಿಐ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ
SIT ಎದುರು ಎಚ್.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ
HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು