ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕೋಟ ಬಂದ್
Team Udayavani, Feb 4, 2019, 1:00 AM IST
ಕೋಟ: ಜ. 26ರಂದು ಕೋಟದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಲು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಫೆ.3ರಂದು ಕೋಟದಲ್ಲಿ ಸ್ವಯಂಪ್ರೇರಿತ ಬಂದ್ ನಡೆಯಿತು.
ಕೋಟ ಸಂತೆ ಮಾರುಕಟ್ಟೆ ಸಮೀಪ ಪ್ರತಿಭಟನಾ ಸಭೆ ನಡೆಯಿತು. ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು.
ಆರೋಪಿಗಳ ಬಂಧನಕ್ಕೆ ಆಗ್ರಹ
ಪ್ರಕರಣಕ್ಕೆ ಸಂಬಂಧಿಸಿ ರಾಜಶೇಖರ ರೆಡ್ಡಿ. ಚಂದ್ರಶೇಖರ ರೆಡ್ಡಿ ಹಾಗೂ ಇತರ ನಾಲ್ಕು ಜನರು ಆರೋಪಿಗಳಾಗಿರುವುದಾಗಿ ಪ್ರತ್ಯಕ್ಷದರ್ಶಿ ದೂರು ದಾಖಲಿಸಿದ್ದಾರೆ. ಅವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು ಎನ್ನುವ ಆಗ್ರಹ ಪ್ರತಿಭಟನಾ ಸಭೆಯಲ್ಲಿ ವ್ಯಕ್ತವಾಯಿತು.
ಫೆ.6ರ ತನಕ ಗಡುವು
ಸಭೆಯಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ಈ ಘಟನೆ ನಮ್ಮ ಊರಿಗೆ ಕಪ್ಪು ಚುಕ್ಕೆ. ಇಂತಹ ಘಟನೆಗಳು ಮರುಕಳಿಸಬಾರದು. ಹೀಗಾಗಿ ಈ ಆರೋಪಿಗಳಿಗೆ ಕಠಿನ ಶಿಕ್ಷೆಯಾಗಬೇಕು. ಫೆ. 6ರೊಳಗೆ ಪ್ರಕ ರಣದ ಆರೋಪಿಗಳ ಬಂಧನವಾಗದಿದ್ದಲ್ಲಿ ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದರು.
ಎಸ್.ಪಿ. ಮನವಿ ಸ್ವೀಕಾರ
ಪ್ರತಿಭಟನ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರ್ಗಿ ಭೇಟಿ ನೀಡಿದರು. ಈ ಸಂದರ್ಭ ಪ್ರತಿಭಟನಕಾರರು ಎಸ್ಪಿಯವರಿಗೆ ಮನವಿ ಸಲ್ಲಿಸಿ ಕಠಿನ ಕ್ರಮಕ್ಕೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಎಸ್ಪಿಯವರು ಈಗಾಗಲೇ ತನಿಖೆ ಚಾಲ್ತಿಯಲ್ಲಿದೆ. ಯಾವುದೇ ಕಾರಣಕ್ಕೂ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯ ವಿಲ್ಲ. ಸಾರ್ವಜನಿಕರು ಪೊಲೀಸ್ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ಮೃತ ಯುವಕರ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಹುಂಡಿ ಕಾಣಿಕೆ ಸಂಗ್ರಹಿಸಲಾಯಿತು.
ಸಭೆಯಲ್ಲಿ ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ಜಿಲ್ಲಾ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಸತೀಶ್ ಪೂಜಾರಿ, ಹೆದ್ದಾರಿ ಜಾಗೃತಿ ಸಮಿತಿಯ ಪ್ರತಾಪ್ ಶೆಟ್ಟಿ ಸಾಸ್ತಾನ, ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗ, ರಾಜೇಶ ಕಾವೇರಿ, ಕಿಶೋರ್ ಕುಮಾರ್, ಲಿಯಾಕತ್ ಸಾಹೇಬ್, ಭಗತ್ ಸಿಂಗ್ ಯುವ ವೇದಿಕೆಯ ಧನಂಜಯ್, ಉದ್ಯಮಿ ಎಂ.ಎಸ್. ಸಂಜೀವ, ಶಿವರಾಮ ಕೆ.ಎಂ. ಮಾತನಾಡಿದರು.
ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್, ತಾ.ಪಂ. ಸದಸ್ಯೆ ಲಲಿತಾ, ಶ್ಯಾಮ್ ಸುಂದರ್ ನಾೖರಿ, ವಿಟuಲ ಪೂಜಾರಿ, ಜಯಂತ್ ಅಮೀನ್, ಮೊಗವೀರ ಯುವ ಸಂಘಟನೆಯ ಚಂದ್ರ ಮೆಂಡನ್, ಕೋಟ ಗ್ರಾ.ಪಂ. ಅದ್ಯಕ್ಷ ವನಿತಾ ಶ್ರೀಧರ್ ಆಚಾರ್ಯ, ಕೋಟತಟ್ಟು ರಘು ತಿಂಗಳಾಯ, ಸ್ಥಳೀಯರಾದ ವಿವೇಕ ಸುವರ್ಣ, ಸಂದೀಪ್ ಕೋಡಿ, ಬಸವ ಮರಕಾಲ ಕಲ್ಲುಗದ್ದೆ, ಸುಬ್ರಾಯ ಆಚಾರ್ಯ, ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು. ಪ್ರಶಾಂತ್ ಶೆಟ್ಟಿ ಸಾಸ್ತಾನ ನಿರೂಪಿಸಿದರು.
ಪ್ರತಿಭಟನೆ ಸಂದರ್ಭ ಉಡುಪಿ ಡಿವೈಎಸ್ಪಿ ಜೈಶಂಕರ್, ಕುಂದಾಪುರ ಡಿವೈಎಸ್ಪಿ ದಿನೇಶ್, ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್, ಕೋಟ ಠಾಣಾಧಿಕಾರಿ ನರಸಿಂಹ ಶೆಟ್ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ