ಪುಷ್ಪಾಂಡಜ ಆಶ್ರಮಕ್ಕೆ ನಿವೇಶನ


Team Udayavani, Feb 4, 2019, 7:24 AM IST

pushpandaja.jpg

ದೊಡ್ಡಬಳ್ಳಾಪುರ: ಗ್ರಾಮೀಣ ಭಾಗದ ಜನರಿಗೆ ಗುರುಕುಲ ಪದ್ಧತಿಯಡಿ ಉತ್ತಮ ಶಿಕ್ಷಣ ನೀಡುತ್ತಿರುವ ತಾಲೂಕಿನ ತಪಸಿಹಳ್ಳಿ ಶ್ರೀ ಪುಷ್ಪಾಂಡಜ ಆಶ್ರಮಕ್ಕೆ ಅಗತ್ಯ ನಿವೇಶನ ಹಾಗೂ ಅನುದಾನ ನೀಡಲಾಗುವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ಅಖೀಲ ಭಾರತ ತೊಗಟವೀರ ಕ್ಷತ್ರಿಯ ಸಂಘಗಳ ಮಹಾ ಮಂಡಳಿ ಮತ್ತು ಶ್ರೀ ಪುಷ್ಪಾಂಡಜ ಮಹರ್ಷಿ ಗುರುಪೀಠದ ನೇತೃ ತ್ವದಲ್ಲಿ ತಾಲೂಕಿನ ಪುಷ್ಪಾಂಡಜ ಮಹರ್ಷಿ ಗುರುಕುಲ ಶಾಲೆಯಲ್ಲಿ ನಡೆದ ಶಾಲೆಯ ಮೊದಲ ವಾರ್ಷಿಕೋತ್ಸವ ಮತ್ತು ಶ್ರೀ ದಿವ್ಯ ಜ್ಞಾನಾನಂದ ಸ್ವಾಮೀಜಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

5 ಲಕ್ಷ ರೂ.ಅನುದಾನದ ಭರವಸೆ: ಶ್ರೀ ಪುಷ್ಪಾಂಡಜ ಆಶ್ರಮ ನನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಾರದ ಕಾರಣ ಶಾಸನ ಬದ್ಧವಾಗಿ ಅನುದಾನ ಮತ್ತು ಭೂಮಿ ಮಂಜೂರು ಮಾಡಲು ನನಗೆ ಸಾಧ್ಯವಿಲ್ಲ. ಹೀಗಾಗಿ, ದೇವನಹಳ್ಳಿ ಶಾಸಕ ಮತ್ತು ನಾನು ಜೊತೆ ಗೂಡಿ 5ರಿಂದ 10 ಎಕರೆ ಭೂಮಿಯನ್ನು ಆಶ್ರಮದ ಶಿಕ್ಷಣ ಸಂಸ್ಥೆಗೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಹಾಗೂ ಶಾಸಕರ ನಿಧಿಯಿಂದ 5ಲಕ್ಷ ರೂ. ನೀಡು ವುದಾಗಿ ಭರವಸೆ ನೀಡಿದರು.

ಭೂಮಿ ನೀಡಲು ಪ್ರಯತ್ನ: ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತ ನಾಡಿ, ಶ್ರೀ ಪುಷ್ಪಾಂಡಜ ಮಹರ್ಷಿ ಗುರು ಪೀಠ ಟ್ರಸ್ಟ್‌ನ ಶಿಕ್ಷಣ ಸಂಸ್ಥೆಗೆ ಅಗತ್ಯ ಭೂಮಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶಾಸಕ ನಿಧಿಯಿಂದ 10 ಲಕ್ಷ ರೂ.ನೀಡು ವುದಾಗಿ ತಿಳಿಸಿದರು.

ಆರೋಗ್ಯ ತಪಾಸಣಾ ಶಿಬಿರ: ಶ್ರೀ ದಿವ್ಯ ಜ್ಞಾನಾನಂದ ಸ್ವಾಮೀಜಿ ಜನ್ಮದಿನಾಚರಣೆ ಅಂಗವಾಗಿ ಸ್ವಾಮೀಜಿ ಅವರನ್ನು ನಗರದ ಪ್ರವಾಸಿ ಮಂದಿರದ ವೃತ್ತದಿಂದ ತಪಸೀ ಹಳ್ಳಿಯ ಪುಷ್ಟಾಂಡಜ ಮಹರ್ಷಿ ಆಶ್ರಮ ದವರೆಗೆ ಪುಷ್ಟ ವೃಷ್ಠಿಯೊಂದಿಗೆ ಆಶ್ರಮದ ಭಕ್ತಾದಿಗಳು ಮೆರವಣಿಗೆ ನಡೆಸಿದರು. ಸ್ವಾಮಿಗಳ ಜನ್ಮದಿನಾಚರಣೆ ಅಂಗವಾಗಿ ಅಭಿಷೇಕ್‌ ನೇತ್ರಧಾಮದಿಂದ ಉಚಿತ ಕಣ್ಣಿನ ತಪಾಸಣೆ ನಡೆಸಲಾಯಿತು. ಮಾನಸ ಆಸ್ಪತ್ರೆ ಮತ್ತು ಆಪೆಲ್‌ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿ ಕೊಳ್ಳಲಾಗಿತ್ತು. ಸ್ವಾಮಿಗಳ ಜನ್ಮ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ಲಯನ್ಸ್‌ ಕ್ಲಬ್‌ನಿಂದ ಉಚಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ಆಶ್ರಮದ ಭಕ್ತಾದಿಗಳು ರಕ್ತದಾನ ಮಾಡಿದರು.

ಭಕ್ತರಿಂದ ಲಕ್ಷಾಂತರ ರೂ. ದೇಣಿಗೆ: ಶ್ರೀ ದಿವ್ಯ ಜ್ಞಾನಾನಂದ ಸ್ವಾಮೀಜಿಗೆ ತಾಲೂಕು ಸೇರಿದಂತೆ ವಿವಿಧ ಜಿಲ್ಲೆಗಳು ಹಾಗೂ ಆಂಧ್ರಪ್ರದೇಶದ ಕೆಲ ಗಣ್ಯರು ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿ, ಸ್ವಾಮಿಗಳ ಆಶೀ ರ್ವಾದ ಪಡೆದರು. ಕಾರ್ಯಕ್ರಮದಲ್ಲಿ ಆಶ್ರ ಮದ ಭಕ್ತರು ಲಕ್ಷ ರೂ. ಅಂದಾಜಿನಲ್ಲಿ ದೇಣಿಗೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಸ್ವಾಮಿಗಳ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ವಿತರಣೆ ಮಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ದಿವ್ಯ ಜ್ಞಾನಾನಂದ ಸ್ವಾಮೀಜಿ ವಹಿಸಿ ಆಶೀರ್ವಚನ ನೀಡಿದರು. ಶ್ರೀ ಪುಷ್ಪಾಂಡಜ ಮಹರ್ಷಿ ಗುರುಪೀಠ ಟ್ರಸ್ಟ್‌ ಅಧ್ಯಕ್ಷ ಸಿ.ಅಶ್ವ ತ್ಥನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಜಿಲ್ಲಾ ಪಂಚಾಯಿತಿ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಅಪ್ಪಯಣ್ಣ, ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಸೇರಿದಂತೆ ಶ್ರೀ ಪುಷ್ಪಾಂಡಜ ಮಹರ್ಷಿ ಗುರುಪೀಠ ಟ್ರಸ್ಟ್‌ನ ಸಮಸ್ತ ಪದಾಧಿಕಾರಿಗಳು, ಆಶ್ರಮದ ಭಕ್ತಾದಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.