ವಿವಿಪ್ಯಾಟ್ನೊಂದಿಗೆ ಫಲಿತಾಂಶ ತಾಳೆ ಹಾಕಿ
Team Udayavani, Feb 5, 2019, 12:30 AM IST
ಹೊಸದಿಲ್ಲಿ: ವಿದ್ಯುನ್ಮಾನ ಮತಯಂತ್ರಗಳ ಕಾರ್ಯವೈಖರಿ ಬಗ್ಗೆ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜತೆಗೆ, ಮುಂಬರುವ ಲೋಕಸಭಾ ಚುನಾವಣೆಯ ನಂತರ, ಪ್ರತಿ ಕ್ಷೇತ್ರಗಳಲ್ಲಿ ವಿತರಣೆಯಾದ ಒಟ್ಟು ವಿವಿಪ್ಯಾಟ್ಗಳ ಶೇ. 50ರಷ್ಟನ್ನು ಫಲಿತಾಂಶದೊಂದಿಗೆ ತಾಳೆ ಹಾಕಿದ ಬಳಿಕವೇ ಫಲಿತಾಂಶ ಪ್ರಕಟಿಸುವ ಖಾತ್ರಿ ನೀಡಬೇ ಕೆಂದು ವಿರೋಧ ಪಕ್ಷಗಳ ನಾಯಕರ ನಿಯೋಗವೊಂದು ಕೇಂದ್ರ ಚುನಾವಣಾ ಆಯೋಗವನ್ನು (ಇಸಿಐ) ಆಗ್ರಹಿಸಿದೆ.
ಇಸಿಐ ಕಚೇರಿಗೆ ಸೋಮವಾರ ಆಗಮಿಸಿದ ನಿಯೋಗದಲ್ಲಿ, ಗುಲಾಂ ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ, ಅಹ್ಮದ್ ಪಟೇಲ್, ಆನಂದ್ ಶರ್ಮಾ (ಕಾಂಗ್ರೆಸ್), ಚಂದ್ರಬಾಬು ನಾಯ್ಡು (ಟಿಡಿಪಿ), ಮಜೀದ್ ಮೆನನ್ (ಎನ್ಸಿಪಿ), ಡೆರೆಕ್ ಒಬ್ರಿಯಾನ್ (ಟಿಎಂಸಿ), ರಾಮ್ಗೊàಪಾಲ್ ಯಾದವ್ (ಎಸ್ಪಿ), ಸತೀಶ್ ಚಂದ್ರ ಮಿಶ್ರಾ (ಬಿಎಸ್ಪಿ) ಹಾಗೂ ಇತರರು ಇದ್ದರು. ಇತ್ತೀಚೆಗೆ, ಚುನಾವಣೆಯಲ್ಲಿ ಬ್ಯಾಲೆಟ್ ಆಧಾರಿತ ಮತದಾನ ಪದ್ಧತಿ ಜಾರಿಗೊಳ್ಳಬೇಕೆಂದು ವಿರೋಧ ಪಕ್ಷಗಳು ಮಾಡಿದ್ದ ಆಗ್ರಹವನ್ನು ಆಯೋಗ ತಳ್ಳಿಹಾಕಿತ್ತು. ಹಾಗಾಗಿ, ಪಕ್ಷಗಳು ಈಗ ಹೊಸ ಆಗ್ರಹವನ್ನು ಇಸಿಐ ಮುಂದಿಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ