ಮಲ್ಯ ಗಡೀಪಾರಿಗೆ ಯುಕೆ ಸರಕಾರ ಒಪ್ಪಿಗೆ


Team Udayavani, Feb 5, 2019, 12:30 AM IST

d-27.jpg

ಲಂಡನ್‌: ಭಾರತೀಯ ಬ್ಯಾಂಕ್‌ಗಳಿಗೆ 9,000 ಕೋಟಿ ರೂ. ವಂಚಿಸಿ ಲಂಡನ್‌ನಲ್ಲಿ ಅಡಗಿರುವ ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಯು.ಕೆ. ಸರಕಾರ ಒಪ್ಪಿಗೆ ನೀಡಿದೆ. ಇದು ಕೇಂದ್ರದ ಎನ್‌ಡಿಎ ಸರಕಾರಕ್ಕೆ ಸಂದ ಮಹತ್ವದ ಜಯವಾಗಿದೆ. ಭ್ರಷ್ಟಾಚಾರಿಗಳು ಯಾವುದೇ ದೇಶದಲ್ಲಿ ಅಡಗಿದ್ದರೂ ಹುಡುಕಿ ಭಾರತಕ್ಕೆ ಕರೆತರುತ್ತೇವೆ ಎಂದು ಪದೇ ಪದೆ ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದು ನೈತಿಕ ಬಲ ತಂದುಕೊಡಲಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

ಮಲ್ಯ ಹಸ್ತಾಂತರಕ್ಕಾಗಿ ಭಾರತೀಯ ಸ್ಟೇಟ್‌ ಬ್ಯಾಂಕ್‌ ನೇತೃತ್ವದ 17 ವಿವಿಚಧ ಭಾರತೀಯ ಬ್ಯಾಂಕುಗಳ ಒಕ್ಕೂಟವು ಹೂಡಿದ್ದ ದಾವೆಯ ವಿಚಾರಣೆ ನಡೆಸಿದ್ದ ಲಂಡನ್‌ನ ವೆಸ್ಟ್‌ ಮಿನ್‌ಸ್ಟರ್‌ ನ್ಯಾಯಾಲಯ, ಕಳೆದ ವರ್ಷ ಡಿ. 10ರಂದು ಮಲ್ಯ ಹಸ್ತಾಂತರಕ್ಕೆ ಆದೇಶಿಸಿತ್ತು. ಆದರೆ ಈ ಬಗ್ಗೆ ಯು.ಕೆ. ಇಲಾಖೆ ಅಂತಿಮ ತೀರ್ಮಾನ ಕೈಗೊಳ್ಳಬೇಕಾದ್ದರಿಂದ ಈ ಪ್ರಕರಣವನ್ನು ನ್ಯಾಯಾಲಯ, ಗೃಹ ಇಲಾಖೆಗೆ ವರ್ಗಾವಣೆ ಮಾಡಿತ್ತು. ನಿಯಮಗಳಂತೆ, ಇಂಥ ಪ್ರಕರಣವು ತನಗೆ ವರ್ಗಾವಣೆಗೊಂಡ ದಿನದಿಂದ 2 ತಿಂಗಳುಗಳ ಕಾಲಾವಧಿಯಲ್ಲಿ ಗೃಹ ಇಲಾಖೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದ್ದು, ಮಲ್ಯ ಪ್ರಕರಣ ದಲ್ಲಿ ಕಾಲಾವಧಿ ಫೆ. 10ಕ್ಕೆ ಮುಕ್ತಾಯ ವಾಗುವುದರಲ್ಲಿತ್ತು. ಆದರೆ ಅದಕ್ಕಿನ್ನೂ ಒಂದು ವಾರ ಬಾಕಿ ಇರು ವಾಗಲೇ, ಮಲ್ಯರ ಹಸ್ತಾಂತರಕ್ಕೆ ಗೃಹ ಇಲಾಖೆ ಒಪ್ಪಿಗೆ ನೀಡಿದೆ.

ಮಲ್ಯಗೆ ಬಚಾವಾಗಲು ಇನ್ನೊಂದು ಅವಕಾಶ?
ಯು.ಕೆ. ಗೃಹ ಇಲಾಖೆಯಿಂದ ಹಸ್ತಾಂ ತರಕ್ಕೆ ಅಧಿಕೃತ ಒಪ್ಪಿಗೆ ಸಿಕ್ಕಿದ್ದರೂ, ಈ ನಿರ್ಧಾರದ ವಿರುದ್ಧವೇ ಮೇಲ್ಮನವಿ ಸಲ್ಲಿಸಲು ಮಲ್ಯ ಅವರಿಗೆ ಅವಕಾಶವಿದೆ. ಅತ್ತ, ಮಲ್ಯ ಭಾರತದಲ್ಲಿ ತಮಗೆ ಸಂಬಂಧಿಸಿದ 13,000 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದ್ದು ಇದು ತಾವು ಬಾಕಿ ಉಳಿಸಿಕೊಂಡಿರುವ ಸಾಲಕ್ಕಿಂತ (9,000 ಕೋಟಿ ರೂ.) ಹೆಚ್ಚಾಗಿದೆ ಎಂದು ಗುಡುಗಿದ್ದಾರೆ. ಇದೇ ವಿಚಾರವನ್ನು ಅವರು ಮೇಲ್ಮನವಿಯಲ್ಲಿ ಉಲ್ಲೇಖೀಸಿ, ತಮ್ಮ ಗಡೀಪಾರು ಆದೇಶ ಹಿಂಪಡೆಯಲು ಕೋರಬಹುದಾಗಿದೆ.

ಟಾಪ್ ನ್ಯೂಸ್

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.