ಅಪಘಾತಕ್ಕೆ ಅಜಾಗರೂಕತೆಯೇ ಕಾರಣ


Team Udayavani, Feb 5, 2019, 6:12 AM IST

dvg-3.jpg

ದಾವಣಗೆರೆ: ಚಾಲಕರ ಅಜಾಗರೂಕತೆಯಿಂದಲೇ ರಸ್ತೆ ಅಪಘಾತಗಳಲ್ಲಿ ಹೆಚ್ಚು ಸಾವು ಸಂಭವಿಸುತ್ತಿದ್ದು, ಸಂಚಾರಿ ನಿಯಮಗಳ ಪಾಲನೆ ಅತ್ಯಗತ್ಯ ಎಂದು ಎಂದು ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ್‌ ಪ್ರತಿಪಾದಿಸಿದ್ದಾರೆ.

ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಸಂಯುಕ್ತಾಶ್ರಯದಲ್ಲಿ ಸೋಮವಾರ ಆರ್‌ಟಿಒ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 2016 ರಿಂದ 2018ರ ವರೆಗೆ ಸಂಭವಿಸಿರುವ ರಸ್ತೆ ಅಪಘಾತಗಳಲ್ಲಿ ನಮ್ಮ ಇಲಾಖೆ ಅಧಿಕೃತ ಅಂಕಿ ಅಂಶಗಳ ಪ್ರಕಾರ 824 ಜನರು ಮೃತಪಟ್ಟಿದ್ದಾರೆ. ಇದಕ್ಕೆ ಚಾಲಕರ ಅಜಾಗರೂಕತೆಯೇ ಮೂಲ ಕಾರಣ ಎಂದರು.

ಜಿಲ್ಲೆಯಲ್ಲಿ 2016 ರಲ್ಲಿ 895, 2017ರಲ್ಲಿ 897 ಹಾಗೂ 2018ರಲ್ಲಿ 853 ಅಪಘಾತ ಪ್ರಕರಣ ದಾಖಲಾಗಿವೆ. ಸರಾಸರಿ ವರ್ಷಕ್ಕೆ 1500 ಅಪಘಾತ ಪ್ರಕರಣಗಳು ದಾಖಲಾಗುತ್ತಿವೆ. ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಈ ಅಪಘಾತ ತಡೆಯಲು ಸಾಧ್ಯವಿಲ್ಲ. ಇದಕ್ಕೆ ರಸ್ತೆ ಸಂಚಾರ ನಿಯಮಗಳ ಪಾಲನೆ ಮತ್ತು ಜಾಗರೂಕತೆಯೇ ಮದ್ದು ಎಂದು ಸಲಹೆ ನೀಡಿದರು.

18 ವರ್ಷದೊಳಗಿನ ಮಕ್ಕಳು, ಡಿಎಲ್‌ ಹೊಂದಿಲ್ಲದದವರಿಗೆ ವಾಹನ ಚಲಾಯಿಸಲು ನೀಡಬಾರದು ಎಂಬ ನಿಯಮವಿದ್ದರೂ ಪೋಷಕರು, ಮಾಲೀಕರ ಅಸಡ್ಡೆಯಿಂದ ಮಕ್ಕಳು ಬಲಿಯಾಗುತ್ತಿದ್ದಾರೆ. ರಸ್ತೆಯಲ್ಲಿ ವೇಗದ ಮಿತಿ, ರಸ್ತೆ ತಿರುವುಗಳಲ್ಲಿ ಓವರ್‌ಟೇಕಿಂಗ್‌, ರಸ್ತೆ ಸಂಚಾರಿ ಫಲಕ ಗಮನಿಸಬೇಕಿದೆ. ವಾಹನ ಚಾಲನೆ ವೇಳೆ ಹೆಲ್ಮೆಟ್ ಬಳಕೆ, ಸೀಟ್ ಬೆಲ್ಟ್ ಧರಿಸುವುದು, ವೇಗದ ಮಿತಿ ಕುರಿತು ತಮ್ಮ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಶಾಲಾ ಮಕ್ಕಳಿಗೆ ರಸ್ತೆ ಸಂಚಾರಿ ನಿಯಮಗಳ ಕುರಿತು ಮುಂದಿನ ದಿನಗಳಲ್ಲಿ ಪಠ್ಯ ಪುಸ್ತಕಗಳಲ್ಲಿ ಅಳವಡಿಸಬೇಕಿದೆ ಎಂದು ಆಶಿಸಿದರು.

ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿ ಲಕ್ಷೀಕಾಂತ್‌ ಬಿ. ನಲವಾರ್‌ ಮಾತನಾಡಿ, ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಮೂಲ ಉದ್ದೇಶ ಅಪಘಾತಗಳ ಸಂಖ್ಯೆ ಕಡಿಮೆ ಮಾಡುವುದಾಗಿದೆ. ದೇಶದಲ್ಲಿ ಪ್ರತಿವರ್ಷ 5 ಲಕ್ಷ ಅಪಘಾತ ಸಂಭವಿಸುತ್ತಿವೆ. ಅದರಲ್ಲಿ 1 ಲಕ್ಷಕಿಂತ ಹೆಚ್ಚು ಜನರು ಮರಣ ಹೊಂದುತ್ತಿದ್ದಾರೆ ಎಂದರು.

ದೇಶವ್ಯಾಪಿ ರಸ್ತೆ ಸುರಕ್ಷತೆ ಕುರಿತು ಕಾರ್ಯಕ್ರಮ ಹಮ್ಮಿಕೊಂಡು ಪ್ರತಿವರ್ಷ ಶೇ.10ರಷ್ಟು ರಸ್ತೆ ಅಪಘಾತ ಕಡಿಮೆ ಮಾಡುವ ಗುರಿ ಹೊಂದಲಾಗಿದೆ. ಒಟ್ಟಾರೆ ಅಪಘಾತ ಸಂಭವಿಸುವುದು ಶೇ. 98ರಷ್ಟು ಚಾಲಕರ ಅಜಾಗರೂಕತೆಯಿಂದಲೇ ಎಂಬುದು ಸಾಬೀತಾಗಿದೆ. ಉಳಿದ ಶೇ.2ರಷ್ಟು ಮಾತ್ರ ವಾಹನ ದೋಷಗಳಿಂದ ಅಪಘಾತಗಳು ಸಂಭವಿಸುತ್ತಿವೆ. ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಮಾತ್ರ ಅಪಘಾತಗಳ ಸಂಖ್ಯೆ ಕಡಿಮೆ ಮಾಡಲು ಸಾಧ್ಯ ಎಂದು ಹೇಳಿದರು.

ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸೈಫುಲ್ಲಾ ಮಾತನಾಡಿ, ಪ್ರಸ್ತುತ ಈ ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿರುವುದಕ್ಕೆ ಜಾಗೃತಿ ಅಭಾವವೇ ಕಾರಣ. ಮಕ್ಕಳು, ಪೋಷಕರು ರಸ್ತೆ ನಿಯಮ ಉಲ್ಲಂಘಿಸಿದಾಗ ಅವರಿಗೆ ಅರ್ಥವಾಗುವ ರೀತಿ ತಿಳಿಹೇಳಬೇಕು. ರಾತ್ರಿ 11ರ ನಂತರ ವಾಹನ ಚಲಾವಣೆ ಮಾಡದಿರುವುದು ಒಳಿತು ಎಂದು ಹೇಳಿದರು.

ಎಸ್‌ಬಿಎಸ್‌ ನಗರದ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜ್ಞಾನೇಶ್ವರ್‌ ಮಾತನಾಡಿ, ಇತರೆ ರಾಷ್ಟ್ರಗಳಂತೆ ನಮ್ಮ ದೇಶದಲ್ಲೂ ಪ್ರತಿಯೊಬ್ಬರೂ ರಸ್ತೆ ನಿಯಮ ಪಾಲಿಸಬೇಕು. ಶಾಲಾ ಮಕ್ಕಳು ರಸ್ತೆ ನಿಯಮದಂತೆ ರಸ್ತೆ ದಾಟಬೇಕು. ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ರಸ್ತೆ ನಿಯಮ ತಿಳಿಸಬೇಕು ಎಂದು ಹೇಳಿದರು. ಮೋಟಾರ್‌ ವಾಹನ ನಿರೀಕ್ಷಕ ಮಲ್ಲೇಶಪ್ಪ, ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.