ವೃದ್ಧರು ಇಂದಿಗೂ ಪಿಂಚಣಿ ಪಡೆಯದಿರುವುದು ಬೇಸರ
Team Udayavani, Feb 5, 2019, 7:09 AM IST
ಮಧುಗಿರಿ: ಕಳೆದ ಅವಧಿಯಲ್ಲಿ ಕ್ಷೇತ್ರ ದಲ್ಲಿ ಎಲ್ಲ ಸಾಧನೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದು, ಆದರೆ, ಗ್ರಾಮಗಳಲ್ಲಿರುವ 80 ವರ್ಷದ ವೃದ್ಧರು ಇಂದಿಗೂ ಪಿಂಚಣಿ ಪಡೆಯದಿರುವುದು ಬೇಸರ ತರಿಸಿದೆ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ಅಸಮಾಧಾನ ವ್ಯಕ್ತ ಪಡಿಸಿದರು.
ತಾಲೂಕಿನ ಮಿಡಿಗೇಶಿ ಹೋಬಳಿಯ ನೆರಳೇಕೆರೆ ಗ್ರಾಪಂ ವ್ಯಾಪ್ತಿಯ ವೀರಾಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆಮಾಡಿ ನೂರಾರು ವೃದ್ಧರಿಗೆ ಪಿಂಚಣಿ ಆದೇಶಪತ್ರ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್ ವಿತರಿಸಿ ಮಾತನಾಡಿದರು.
ಹಿಂದಿನ ಅವಧಿಯಲ್ಲಿ ಸಮಗ್ರ ಸಾಧನೆ ಮಾಡಿದ್ದೇವೆಂಬ ಅಧಿಕಾರಿಗಳು ಇಲ್ಲಿನ ಗ್ರಾಮದ ಹಲವಾರು ವೃದ್ಧರಿಗೆ ಅವಧಿ ಮೀರಿದರೂ ಪಿಂಚಣಿ ನೀಡಿಲ್ಲ ಎಂದು ಹಿಂದಿನ ಆಡಳಿತ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಅಧಿಕಾರಿ ಗಳಿಂದ ಕೂಬಿಂಗ್ ಮಾಡಿಸಿ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗ ದಂತೆ ಕ್ರಮವಹಿಸುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖಂಡ ತುಂಗೋಟಿ ರಾಮಣ್ಣ, ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಶಿವಣ್ಣ, ತಾಪಂ ಸದಸ್ಯೆ ಪುಟ್ಟತಾಯಮ್ಮ, ದಲಿತ ಮುಖಂಡ ಶಿವಣ್ಣ, ಹೋಬಳಿ ಅಧ್ಯಕ್ಷ ಡಾ.ಶಿವಕುಮಾರ್, ಆಹಾರ ನಿರೀಕ್ಷಕ ಕೃಷ್ಣಮೂರ್ತಿ, ಶಿವಕುಮಾರ್ ವೀರಾ ಪುರ, ಪಾಪಣ್ಣ, ರಘು, ದ¿ನಂದ್, ಪಿಡಿಒ ಶಿವಕುಮಾರ್, ಹಾಗೂ ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ