ವೃತ್ತಿ ಆಯ್ಕೆಗೆ ಮಕ್ಕಳೊಂದಿಗೆ ಸಂವಾದ


Team Udayavani, Feb 5, 2019, 7:10 AM IST

vturi.jpg

ಕೋಲಾರ: ಪ್ರೌಢಶಾಲಾ ಹಂತದಲ್ಲೇ ಮಕ್ಕಳು ಗುರಿ ಸಾಧನೆಗೆ ಅಗತ್ಯವಾದ ವೃತ್ತಿ ಅಥವಾ ಕೋರ್ಸಿನ ಆಯ್ಕೆಗೆ ಆಲೋಚನೆ ನಡೆಸಬೇಕು ಎಂದು ಬೆಂಗಳೂರಿನ ಗೂಗಲ್‌ ಕಂಪನಿ ಇಂಟಲೆಕ್ಚುಯಲ್‌ ಪ್ರಾಪರ್ಟೀಸ್‌ನ ನೋಂದಣಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಎಂ.ರೋಷಿಣಿ ತಿಳಿಸಿದರು.

ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳೊಂದಿಗೆ ‘ಶಾಲೆಗೆ ಬನ್ನಿ ಶನಿವಾರ ಕಲಿಯಲು ನೀಡಿ ಸಹಕಾರ’ ಕಾರ್ಯಕ್ರಮದಡಿ ನಡೆದ ಸಂವಾದದಲ್ಲಿ ಮಾತನಾಡಿದರು. ಸ್ವ ಅಭಿವೃದ್ಧಿ ಮತ್ತು ವೃತ್ತಿ ಆಯ್ಕೆಯ ಕುರಿತು ಮಕ್ಕಳಿಗೆ ಅಗತ್ಯ ಮಾಹಿತಿ ಒದಗಿಸಿದರು.

ನುರಿತವರ ಸಲಹೆ ಪಡೆಯಿರಿ: ಶಿಕ್ಷಣದ ಜತೆಗೆ ಸಾಮಾನ್ಯ ಜ್ಞಾನವೂ ಅಗತ್ಯ. ನಿಮ್ಮ ಮುಂದಿನ ಜೀವನ ಉಜ್ವಲವಾಗಿರಲು ನೀವು ಗುರಿಯನ್ನು ಹೊಂದಿರಬೇಕು. ಇಂದು ಕಲಿಕೆಗೆ, ವೃತ್ತಿಜೀವನಕ್ಕೆ ಅನೇಕ ಮಾರ್ಗಗಳಿವೆ. ಅವುಗಳ ಆಯ್ಕೆಗೆ ನುರಿತವರ ಸಲಹೆ ಪಡೆಯಬೇಕೆಂದರು. ಬಡತನ ಶಾಶ್ವತವಲ್ಲ, ಅದನ್ನು ಮೆಟ್ಟಿನಿಲ್ಲುವ ಶಕ್ತಿ ಪ್ರತಿಯೊಬ್ಬರಲ್ಲೂ ಇದೆ ಆದರೆ, ಆತ್ಮವಿಶ್ವಾಸ ನಿಮ್ಮಲ್ಲಿ ಇಲ್ಲವಾದರೆ ಗುರಿ ತಲುಪಲು ಸಾಧ್ಯವಿಲ್ಲ ಎಂದರು.

ಆತ್ಮವಿಶ್ವಾಸ ಕಳೆದುಕೊಳ್ಳದಿರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಹತ್ತಿರವಾಗುತ್ತಿದೆ. ನಾನು ಎಷ್ಟು ಓದಿದರೂ ಅರ್ಥವಾಗುತ್ತಿಲ್ಲ, ಫೇಲಾಗು ತ್ತೇನೆ ಎಂದು ನೀವೇ ನಿರ್ಧರಿಸಿ ಬಿಟ್ಟರೆ ನಿಮ್ಮ ಆತ್ಮವಿಶ್ವಾಸ ಮಾಯವಾಗುತ್ತದೆ ಎಂದು ಎಚ್ಚರಿಸಿದರು.

ಕಷ್ಟಗಳನ್ನು ಎದುರಿಸಿ: ತನ್ನ ಆಶಯ ಈಡೇರಿಸಿಕೊಳ್ಳುವ ದೃಢ ನಿರ್ಧಾರ ಕೈಗೊಂಡರೆ ಅವನಿಗೆ ಎಂತಹ ಸಂಕಷ್ಟಗಳು ಎದುರಾದರೂ ಅವನು ಮೆಟ್ಟಿನಿಲ್ಲ ಬಲ್ಲ ಎಂದು ಕಿವಿಮಾತು ಹೇಳಿದರು. ಮುಖ್ಯ ಶಿಕ್ಷಕ ಸಿ.ಎನ್‌.ಪ್ರದೀಪ್‌ ಕುಮಾರ್‌, ರತ್ನಾಬಾಯಿ, ಹಿರಿಯ ಶಿಕ್ಷಕರಾದ ಎಸ್‌.ಅನಂತಪದ್ಮನಾಭ್‌, ಸತೀಶ್‌ ಎಸ್‌. ನ್ಯಾಮತಿ, ಭವಾನಿ, ಶ್ವೇತಾ, ಸುಗುಣಾ, ಲೀಲಾ, ಶ್ರೀನಿವಾಸಲು, ವೆಂಕಟರೆಡ್ಡಿ, ಫರೀದಾ, ಡಿ.ಚಂದ್ರಶೇಖರ್‌ ಇದ್ದರು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.