ನಾರಾಯಣರಾವ್‌ ಉದ್ಯಾನವನದಲ್ಲಿ ನಿರ್ವಹಣೆ ಕೊರತೆ!


Team Udayavani, Feb 5, 2019, 10:58 AM IST

bell.jpg

ಬಳ್ಳಾರಿ: ನಗರದ ಹೃದಯಭಾಗದಲ್ಲಿ ನಿರ್ಮಿಸಲಾಗಿರುವ ನಗರೂರು ನಾರಾಯನರಾವ್‌ (ಕಾಗೆ) ಉದ್ಯಾನವನ ನಿರ್ವಹಣೆಯ ಕೊರತೆ ಎದುರಿಸುತ್ತಿದೆ. ಸ್ವಚ್ಛತೆ ಕಾಪಾಡಬೇಕಿದ್ದ ಮಹಾನಗರ ಪಾಲಿಕೆ ನಿರ್ಲಕ್ಷ್ಯದಿಂದಾಗಿ ಉದ್ಯಾನವನದಲ್ಲಿನ ಕನ್ನಡ ತಾಯಿ ಭುವನೇಶ್ವರಿ ವಿಗ್ರಹ ಬಳಿಯೆಲ್ಲ ಮದ್ಯದ ಬಾಟಲ್‌ಗ‌ಳೇ ರಾರಾಜಿಸುತ್ತಿದ್ದು, ಕಿಡಿಗೇಡಿಗಳ ಹಾವಳಿ ಅಧಿಕವಾಗಿದೆ.

ನಗರದ ಡಾ. ರಾಜ್‌ಕುಮಾರ್‌ ರಸ್ತೆಯಲ್ಲಿ ಕಳೆದ ಎರಡು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ನಗರೂರು ನಾರಾಯಣರಾವ್‌ ಉದ್ಯಾನವನ ಸದ್ಯ ನಿರ್ವಹಣೆ ಕೊರತೆ ಎದುರಿಸುತ್ತಿದೆ. ಆರಂಭದಲ್ಲಿ ಒಂದಷ್ಟು ವರ್ಷಗಳ ಕಾಲ ಸಾರ್ವಜನಿಕರ ಬಳಕೆಗೆ ಅಣಿಯಾಗಿದ್ದ ಉದ್ಯಾನವನ ನಂತರದ ದಿನಗಳಲ್ಲಿ ನಿರ್ವಹಣೆ ಕೊರತೆಯಿಂದಾಗಿ ಸ್ವಚ್ಛತೆಯಿಲ್ಲದೆ, ಮೂಲೆಗುಂಪಾಗಿದೆ. ಮಾಜಿ ಉಪಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಾಶರ ಅಧಿಕಾರವಧಿಯಲ್ಲಿ ಉದ್ಯಾನವನದಲ್ಲಿ ಕನ್ನಡತಾಯಿ ಭುವನೇಶ್ವರಿ ಮೂರ್ತಿ ಸ್ಥಾಪಿಸಲಾಗಿದೆ. ಉದ್ಯಾನದ ಮೂಲೆಯಲ್ಲಿ ಈ ಮೂರ್ತಿಯನ್ನ ಸ್ಥಾಪಿಸಿದ್ದು, ಅದರ ಹಿಂದುಗಡೆ ಕಾರಂಜಿ ನಿರ್ಮಿಸಲಾಗಿದೆ. ಆದರೆ, ಸಂಜೆಯೊತ್ತಿಗೆ ಈ ಕಾರಂಜಿ ಬಳಿ ಮಗದೊಂದು ಲೋಕ ತೆರೆದುಕೊಳ್ಳುತ್ತದೆ. ಉದ್ಯಾನದ ಹಿಂಭಾಗ ಕೊಳಚೆ ಪ್ರದೇಶದ ನಿವಾಸಿಗಳು ವಾಸಿಸುತ್ತಿದ್ದಾರೆ. ಉದ್ಯಾನದ ಮುಖ್ಯರಸ್ತೆಯ ಗೇಟ್‌ಗೆ ಬೀಗ ಜಡಿದರೂ ಸಹ ಉದ್ಯಾನದ ಒಳಗಡೆಯಿಂದಲೇ ವಾಮಮಾರ್ಗವಿದೆ. ಆ ಮಾರ್ಗವಾಗಿ ಕೊಳಚೆ ಪ್ರದೇಶದ ಯುವಜನರ ತಂಡೋಪ ತಂಡವಾಗಿ ತಡರಾತ್ರಿ ಒಳಪ್ರವೇಶಿಸಿ, ಮದ್ಯ ಸೇವನೆ ಮಾಡುತ್ತಾರೆ. ಮದ್ಯದ ಬಾಟಲ್‌ ಭುವನೇಶ್ವರಿ ಮೂರ್ತಿಯ ಬಳಿಯಿರುವ ನೀರಿನ ಕಾರಂಜಿಯಲ್ಲೇ ಬಿಸಾಡಿ ಹೋಗುತ್ತಾರೆ. ಅದರಿಂದ ಕಾರಂಜಿಯಲ್ಲಿ ನೀರು ಪಾಚಿಗಟ್ಟಿದೆ. ಉದ್ಯಾನದಲ್ಲಿ ವಾಯುವಿಹಾರ ಮಾಡುತ್ತಿರುವವರಿಗಂತೂ ಸೊಳ್ಳೆಗಳ ಕಾಟ ವಿಪರೀತವಾಗಿರುವ ಅನುಭವ ಆಗಿದೆ ಎನ್ನುತ್ತಾರೆ ವಾಯುವಿಹಾರಿಯೊಬ್ಬರು.

ತಾಯಿ ಭುವನೇಶ್ವರಿ ಮೂರ್ತಿ ಬಳಿಯೇ ಮದ್ಯದ ಬಾಟಲ್‌ಗ‌ಳು ಪ್ರತ್ಯಕ್ಷವಾಗಿರುವುದು ದುರ್ದೈವದ ಸಂಗತಿ. ಆ ಕಾರಂಜಿಯ ತುಂಬೆಲ್ಲಾ ಮದ್ಯದ ಬಾಟಲ್‌ ಬಿಸಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕುಡಿದ ಅಮಲಿನಲ್ಲಿ ಮೂರ್ತಿ ಭಗ್ನಗೊಳಿಸಿದೂ ಅಚ್ಚರಿಪಡಬೇಕಿಲ್ಲ. ಹೀಗಾಗಿ, ಪಾಲಿಕೆಯು ಕೂಡಲೇ ಎಚ್ಚೆತ್ತುಕೊಂಡು ಮೂರ್ತಿ ರಕ್ಷಣೆಗೆ ಮುಂದಾಗಬೇಕು. ಅಲ್ಲದೇ, ಉದ್ಯಾನ ಪ್ರವೇಶಿಸಲು ಇರುವ ಹಲವು ವಾಮ ಮಾರ್ಗಗಳನ್ನು ಬಂದ್‌ ಮಾಡಬೇಕು. ಅದಕ್ಕಾಗಿ ಸಿಸಿ ಕ್ಯಾಮೆರಾ ಅಳವಡಿಸಿ, ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂಬುದು ನವಕರ್ನಾಟಕ ಯುವಶಕ್ತಿ ಸಂಘಟನೆಯ ಯುವ ಮುಖಂಡ ಮಹೇಶ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.