ಬೆಂಗಳೂರಿನಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್
Team Udayavani, Feb 5, 2019, 2:06 PM IST
ಬೆಂಗಳೂರು: ಸಿಸಿಬಿ ಪೊಲೀಸರು ಮಂಗಳವಾರ ಸಂಜೆ ನಟೋರಿಯಸ್ ರೌಡಿ ಶೀಟರ್ ಸ್ಲಂ ಭರತ್ ಮೇಲೆ ಗುಂಡು ಹಾರಿಸಿದ ಘಟನೆ ಕೆಂಗೇರಿ ಉಪನಗರ ಬಳಿ ನಡೆದಿದೆ.
ಬಂಧನಕ್ಕೆ ತೆರಳಿದ್ದ ವೇಳೆ ಪೇದೆ ಹನುಮೇಶ್ ಮೇಲೆ ಭರತ್ ಹಲ್ಲೆ ನಡೆಸಿದ್ದಾನೆ.ತಕ್ಷಣ ಆತ್ಮರಕ್ಷಣೆಗಾಗಿ ಪಿಎಸ್ಐ ಪ್ರವೀಣ್ ಅವರು ಗುಂಡು ಹಾರಿಸಿದ್ದು ಸ್ಲಂ ಭರತ್ ಕಾಲಿಗೆ ತಗುಲಿದೆ. ಕೂಡಲೇ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೆಂಗೇರಿ ಸರ್ಕಲ್ ಬಳಿ ಕಾರಿನಲ್ಲಿ ಭರತ್ ತೆರಳುತ್ತಿದ್ದ ವೇಳೆ ಸಿಸಿಬಿ ತಂಡ ಬೆನ್ನಟ್ಟಿ ಕಾರ್ಯಾಚರಣೆ ನಡೆಸಿದೆ.
ರಾಜಗೋಪಾಲ ನಗರ ಠಾಣೆಯಲ್ಲಿ ಭರತ್ ಮೇಲೆ ರೌಡಿ ಶೀಟರ್ ದಾಖಲಾಗಿದೆ.
30 ಕ್ಕೂ ಹೆಚ್ಚು ಪ್ರಕರಣಗಳು ಸ್ಲಂ ಭರತ್ ಮೇಲೆ ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ