52ನೇ ವಾರ್ಷಿಕ ಉತ್ಸವ ಸಂಭ್ರಮಿಸಿದ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿ


Team Udayavani, Feb 5, 2019, 4:00 PM IST

0401mum02.jpg

ಮುಂಬಯಿ: ಶನೈಶ್ವರನ ನಾಮ ಕೇಳಿ ಭಯಬೀಳುವ, ಆವಶ್ಯಕತೆಯಿಲ್ಲ. ಕಾರಣ ಶನೈಶ್ವರನು ಜಾತಕದಲ್ಲಿರುವ ಸ್ಥಾನಗಳ ಪ್ರಕಾರ ಜನ್ಮಶನಿ, ದ್ವಾದಶ ಶನಿ, ಅಂತಹ ಸ್ಥಾನಗಳ ಪ್ರಕಾರ ಸ್ವಲ್ಪ ಕಷ್ಟನಷ್ಟಗಳನ್ನು ಪ್ರಾಪ್ತಿಸಿದರೂ ಆತನಿಗೆ ಶ್ರದ್ಧಾಭ‌ಕ್ತಿಯಿಂದ ಪೂಜಿಸಿದರೆ ಶನೈಶ್ವರನು ನಮ್ಮೆಲ್ಲಾ ಇಷ್ಟರ್ಥಗಳನ್ನು ಪೂರೈಸಿ ನೆಮ್ಮದಿಯ ಜೀವನ ಪ್ರಾಪ್ತಿಸುವನು. ಸಪ್ತಮ ಶನಿ ಮತ್ತು ಅಷ್ಟಮಿ ಶನಿ, ಅರ್ಧಾಷ್ಟಮಿ ಶನಿ ಕೇಳಿಕೊಂಡಗಲೇ  ಭಯಪಟ್ಟು ಮೈ ಕಂಪಿಸುವುದಕ್ಕಿಂತ ಅಸಲಿಗೆ ಶನೀಶ್ವರನನ್ನು ಆರಾಧಿಸಿ ಪುಣ್ಯಗಳನ್ನು ಪ್ರಾಪ್ತಿಸಿಕೊಳ್ಳಬೇಕು. ಈಶ್ವರ ಎಂಬ ಶಬ್ದ ಎಲ್ಲಿ ಇರುತ್ತದೆಯೋ ಅಲ್ಲಿ ಐಶ್ವರ್ಯದ ಭೋಳಾತತ್ವ ಇರುತ್ತದೆ.  ಆದ್ದರಿಂದ ಶನೈಶ್ವರಸ್ವಾಮಿಯನ್ನು ಶನಿ ಎಂದು ಕರೆಯದೆ   ಶನೈಶ್ವರನ ನಾಮದಿಂದ ಸ್ತುತಿಸಿರಿ. ಕಾರಣ ಸಂಕಟಮುಕ್ತಿಗೆ ಶನಿದೇವರೇ ವಾರಸುದಾರನು ಎಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್‌.ಕೋಟ್ಯಾನ್‌ (ಶಾಂತಿ) ತಿಳಿಸಿದರು.

ಉಪನಗರ ಖಾರ್‌ ಪೂರ್ವದ ಸಾಯಿಬಾಬಾ ರಸ್ತೆಯಲ್ಲಿನ ಜವಾಹರ್‌ನಗರದ ಪಹೆಲ್ವಾನ್‌ ಚಾಳ್‌ನಲ್ಲಿನ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿ ತನ್ನ 52ನೇ ವಾರ್ಷಿಕ ಉತ್ಸವವನ್ನು ಫೆ. 3ರಂದು ಅಪರಾಹ್ನ ಸಾಂತಕ್ರೂಜ್‌ ಪೂರ್ವದ ಬಿಲ್ಲವರ ಭವನದ ಸಭಾಗೃಹದಲ್ಲಿ ಸಂಭ್ರಮಿಸಿದ್ದು, ಧನಂಜಯ ಶಾಂತಿ ಅವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸೇವಾ ಸಮಿತಿ ಅಧ್ಯಕ್ಷ ಶಂಕರ್‌ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಸಭಾ ಕಾರ್ಯಕ್ರಮದಲ್ಲಿ ಭಾರತ್‌ ಬ್ಯಾಂಕ್‌ನ ನಿರ್ದೇಶಕ ಪ್ರೇಮನಾಥ್‌ ಪಿ.ಕೋಟ್ಯಾನ್‌, ಸಮಾಜ ಸೇವಕಿ ವಾರಿಜಾ ಎಸ್‌. ಕರ್ಕೇರ  ಅತಿಥಿಗಳಾಗಿ ಹಾಗೂ ಸೇವಾ ಸಮಿತಿ ಗೌರವ ಅಧ್ಯಕ್ಷ  ಶ್ರೀಧರ್‌  ಜೆ.ಪೂಜಾರಿ, ಉಪಾಧ್ಯಕ್ಷ ದೇವೆಂದ್ರ ವಿ.
ಬಂಗೇರ, ಕಾರ್ಯಧ್ಯಕ್ಷ ಆರ್‌.ಡಿ.ಕೋಟ್ಯಾನ್‌,ಜತೆ ಕಾರ್ಯದರ್ಶಿಗಳಾದ ಜನಾರ್ದನ ಎನ್‌.ಸಾಲ್ಯಾನ್‌, ಹರೀಶ್‌ ಕೋಟ್ಯಾನ್‌ ಕಾಪು, ಗೌ| ಪ್ರ| ಕೋಶಾಧಿಕಾರಿ ನಾಗೇಶ್‌ ಜಿ.ಸುವರ್ಣ, ಮಹಿಳಾ ಸಮಿತಿ ಮುಖ್ಯಸ್ಥರಾದ ಕೇಸರಿ ಬಿ.ಅಮೀನ್‌, ಶೋಭಾ ವಿ.ಕೋಟ್ಯಾನ್‌, ಲೀಲಾವತಿ ವೈ. ಹೆಜ್ಮಾಡಿ ಮತ್ತು ಶಾರದಾ ಎಸ್‌.ಪೂಜಾರಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿಜಯ್‌ ಎನ್‌.ಸಾಲ್ಯಾನ್‌, ವಿಶ್ವಸ್ತ ಸದಸ್ಯರು ಹಾಗೂ ಇತರ ಪದಾಧಿಕಾರಿಗಳು ವೇದಿಕೆಯಲ್ಲಿ ಆಸೀನರಾಗಿದ್ದರು.

ಶನಿದೇವರನ್ನು ಪ್ರಸನ್ನಗೊಳಿಸುವ ವಾರವೇ ಶನಿವಾರ. ಆ ದಿನ ಶನಿದೋಷವುಳ್ಳವರು ಶನಿ ಪೂಜೆ ಮಾಡುವುದು ವಾಡಿಕೆ. ದುಃಖ ಹಾಗೂ ದೌರ್ಭಾಗ್ಯವನ್ನು ದೂರ ಮಾಡಲು ಶನಿವಾರ ನೀಲಿ ಬಣ್ಣದ ಪುಷ್ಪ ಜೊತೆಗಿರಿಸುವ, ಎಳ್ಳನ್ನು ದಾನ ಮಾಡುವ ವಾಡಿಕೆಯಿದೆ. ಶನಿದೇವರು ಕೊಡುವ ಕಷ್ಟಗಳಿಗಿಂತಲೂ ನೀಡುವ ವರಗಳ ಬಗ್ಗೆ ತಿಳಿಯುವ ಅಗತ್ಯವಿದೆ. ಇದನ್ನೆಲ್ಲಾ ತಿಳಿದ ಪೂರ್ವಜರು ಇಂತಹ ಧಾರ್ಮಿಕ ಶಕ್ತಿ ತುಂಬುವ ಸಂಸ್ಥೆಗಳನ್ನು ಹುಟ್ಟುಹಾಕಿ ನಮಗೆಲ್ಲಾ ದಾರಿದೀಪವಾಗಿದ್ದಾರೆ ಎಂದು ಶಂಕರ್‌ ಸುವರ್ಣ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.

ಅತಿಥಿಗಳು ಸಮಿತಿ ಉಪ ಕಾರ್ಯಾಧ್ಯಕ್ಷ ಜಯರಾಮ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ವಾಸು ಎಸ್‌.ಕೋಟ್ಯಾನ್‌, ಭೋಜ ಸಿ.ಪೂಜಾರಿ, ಕಾರ್ಯಕ್ರಮ ಸಮಿತಿ ಕಾರ್ಯದರ್ಶಿ ಹರಿಶ್ಚಂದ್ರ ಶೆಟ್ಟಿ ಇವರಿಗೆ ಸಾಧಕ ಸನ್ಮಾನ ಪ್ರದಾನಿಸಿ ಗೌರವಿಸಿದರು ಹಾಗೂ ಸುಮಾರು 21 ಮಹಿಳಾ ಕಾರ್ಯಕರ್ತೆಯರಿಗೆ ಸತ್ಕರಿಸಿ ಅಭಿನಂದಿಸಿದರು. ಸಮಿತಿ ಸದಸ್ಯರು ಮತ್ತು ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ, ಕಿರು ನಾಟಕ, ಭಾÅಮರಿ ಯಕ್ಷನƒತ್ಯ ಕಲಾನಿಲಯ ಇದರ ಖಾರ್‌ ವಿಭಾಗದ ಕಲಾವಿದರು “ಭಸ್ಮಾಸುರ ಮೋಹಿನಿ’ ಯಕ್ಷಗಾನ ನೃತ್ಯರೂಪಕ ಪ್ರದರ್ಶಿಸಿದರು. ಹರಿಶ್ಚಂದ್ರ ಶೆಟ್ಟಿ ಮತ್ತು ಸಚಿನ್‌ ಪೂಜಾರಿ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು. ಕು| ದೀಪಾ ಸಾಲ್ಯಾನ್‌ ಪ್ರಾರ್ಥನೆ ಹಾಡಿದರು. ಸೇವಾ ಸಮಿತಿ  ಗೌರವ ಪ್ರಧಾನ ಕಾರ್ಯದರ್ಶಿ ಯೋಗೇಶ್‌ ಹೆಜ್ಮಾಡಿ ಸ್ವಾಗತಿಸಿ ಪ್ರಸ್ತಾವನೆಗೈದ‌ು ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಗೌರವ ಕೋಶಾಧಿಕಾರಿ, ಮಂದಿರದ ಅರ್ಚಕ ನಾಗೇಶ್‌ ಜಿ.ಸುವರ್ಣ ಅತಿಥಿಗಳನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ರಮೇಶ್‌ ಎನ್‌.ಪೂಜಾರಿ ವಂದಿಸಿದರು. 

 ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.