ಶಾಸಕ ಗಣೇಶ್ ಬಂಧನಕ್ಕೆ ಸಿದ್ಧತೆ
Team Udayavani, Feb 6, 2019, 6:39 AM IST
ರಾಮನಗರ: ಬಿಡದಿಯ ಈಗಲ್ಟನ ರೆಸಾರ್ಟ್ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪಿ ಕಂಪ್ಲಿ ಕ್ಷೇತ್ರ ಶಾಸಕ ಜೆ.ಎನ್.ಗಣೇಶ್ ಅವರನ್ನು ಬಂಧಿಸಲು ರಾಮನಗರ ಪೊಲೀಸರು ತಯಾರಿ ನಡೆಸಿದ್ದಾರೆ.
ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಾಸಕ ಆನಂದ್ ಸಿಂಗ್ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ನಂತರ ಶಾಸಕ ಗಣೇಶ್ ನಾಪತ್ತೆಯಾಗಿದ್ದರು.
ಬುಧವಾರ ಬಜೆಟ್ ಅಧಿವೇಶನ ಆರಂಭ ವಾಗಲಿದ್ದು, ಕಂಪ್ಲಿ ಶಾಸಕ ಜಿ.ಎನ್.ಗಣೇಶ್ ವಿಧಾನ ಸೌಧಕ್ಕೆ ಆಗಮಿಸುವ ಎಲ್ಲಾ ನಿರೀಕ್ಷೆಗಳು ಇದೆ. ಅವರನ್ನು ಅಲ್ಲಿಯೇ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ಶಾಸಕರನ್ನು ಬಂಧಿಸಲು ಬಿಡದಿ ಪೊಲೀಸರು ಸ್ಪೀಕರ್ ಅವರಿಂದ ಅನುಮತಿ ಕೇಳಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ವಿಪ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸಲೇ ಬೇಕಾದ ಅನಿವಾರ್ಯತೆ ಶಾಸಕ ಗಣೇಶ್ಗೆ ಇದೆ. ಹೀಗಾಗಿ ಅವರನ್ನು ಅಲ್ಲಿಯೇ ಬಂಧಿಸುವುದು ಸ್ಥಳೀಯ ಪೊಲೀಸರ ಲೆಕ್ಕಾಚಾರ.
ಕಾಂಗ್ರೆಸ್ ಪಕ್ಷ ನೀಡಿರುವ ವಿಪ್ ಶಾಸಕ ಗಣೇಶ್ ಅವರ ಕೈ ಸೇರಿದೆಯೇ ಎಂಬುದು ಗೊತ್ತಾಗಿಲ್ಲ. ಆದರೆ, ವಿಧಾನಸಭೆ ಕಲಾಪದ ವೇಳೆ ಅಥವಾ ವಿಧಾನಸಭೆಯಲ್ಲಿ ಯಾರನ್ನಾದರು ಬಂಧಿಸಬೇಕಾದರೆ ಸ್ಪೀಕರ್ ಅವರ ಅನುಮತಿ ಪಡೆಯುವುದು ಕಡ್ಡಾಯ. ಹೀಗಾಗಿ ಎಸ್ಪಿ ರಮೇಶ್, ಬಿಡದಿ ಪೊಲೀಸರು ಬುಧವಾರ ಬೆಳಿಗ್ಗೆಯೇ ಸ್ಪೀಕರ್ ಅವರ ಬಳಿ ಅನುಮತಿ ಕೇಳಲಿದ್ದಾರೆ.
ಬಂಧನದ ಭೀತಿ ಇದ್ದರೂ ಶಾಸಕ ಜಿ.ಎನ್.ಗಣೇಶ್ ಸ್ಥಳೀಯ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಎಂಬುದು ಇಲ್ಲಿ ಗಮನಸಿಬೇಕಾದ ಅಂಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ