ಸವರ್ಣೀಯರೇ ಅಸ್ಪೃಶ್ಯತೆ ವಿರುದ್ಧ ಹೋರಾಡಲಿ


Team Udayavani, Feb 6, 2019, 7:28 AM IST

sarvan.jpg

ಸಂತೆಮರಹಳ್ಳಿ: ಅಸ್ಪೃಶ್ಯತೆ ಸವರ್ಣೀಯ ರಿಗೆ ಅಂಟಿಕೊಂಡಿರುವ ಜಾಡ್ಯವಾಗಿದೆ. ಆದರೆ, ಇದರ ನೋವುಣ್ಣುತ್ತಿರುವುದು ತಳ ಸಮುದಾಯಗಳು. ದಲಿತರು ಎಂದಿಗೂ ಅಸ್ಪೃಶ್ಯತೆ ಆಚರಿಸುತ್ತಿಲ್ಲ. ಇವರೇ ನಿಜವಾದ ಭಾರತೀಯರು ಎಂದು ಶಾಸಕ ಎನ್‌.ಮಹೇಶ್‌ ತಿಳಿಸಿದರು.

ಯಳಂದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ‌ಲ್ಲಿ ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಾಗರಿಕ ಹಕ್ಕು ಸಂರಕ್ಷಣಾ ಕಾಯ್ದೆ ಹಾಗೂ ಪರಿಶಿಷ್ಟ ಜಾತಿ, ವರ್ಗಗಳ ದೌರ್ಜನ್ಯ ಪ್ರತಿಬಂಧಕ ಅಧಿನಿಯಮದಡಿ ಹಮ್ಮಿಕೊಂಡಿದ್ದ ವಿಚಾರ ಗೋಷ್ಠಿಯಲ್ಲಿ ಮಾತನಾಡಿದರು.

ಜಾತಿ ಮನುಷ್ಯನ ಸೃಷ್ಟಿಯಾಗಿದೆ. ಹೆಣ್ಣು ಗಂಡೆಂಬುವುದೂ ಜಾತಿಯಲ್ಲ, ಅದು ಪ್ರಬೇಧ ಮಾತ್ರ. ಜಾತಿಯ ಹುಳುಕಿನಿಂದ ದೇಹ ಹಾಗೂ ಮನಸ್ಸು ಹಾಳಾಗುತ್ತದೆ. ದೇಶದಲ್ಲಿ ಸಂವಿಧಾನ ಜಾರಿಯಾದ ನಂತರ ಸ್ವಲ್ಪ ಮಟ್ಟಿಗಾದರೂ ಅಸ್ಪೃಶ್ಯತೆ ತೊಲಗಿದೆ. ಮುಂದಿನ 30 ವರ್ಷಗಳಲ್ಲಿ ಇದು ದೇಶದಿಂದ ಮರೆಯಾಗಲಿದೆ.

ಹೀಗಾಗಲು ಎಲ್ಲಾ ಸಮುದಾಯದವರೂ ತಾಳ್ಮೆ, ಐಕ್ಯತೆ, ಸಹನೆಯಿಂದ ಇರಬೇಕು. ಇದೊಂದು ಮಾನಸಿಕ ರೋಗವಾಗಿದ್ದು, ಇದನ್ನು ಹೋಗಲಾಡಿಸಿ ಸಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಬೇಕು. ಈ ಕಾರ್ಯಕ್ರಮದಡಿ ಬೀದಿ ನಾಟಕಗಳನ್ನು ಜನನಿಬಿಡ ಪ್ರದೇಶಗಳಲ್ಲಿ ಹಾಗೂ ಸವರ್ಣೀಯರ ಬೀದಿಯಲ್ಲಿ ನಡೆಸಬೇಕು ಎಂದು ಸಲಹೆ ನೀಡಿದರು.

ವಿಚಾರವಾದಿ ಡಾ. ಕೃಷ್ಣಮೂರ್ತಿ ಚಮರಂ ಮಾತನಾಡಿ, ಅಸ್ಪೃಶ್ಯತೆ ಹೋಗ ಲಾಡಿಸಲು ಸವರ್ಣೀಯರೇ ಹೋರಾಟ ಮಾಡಬೇಕು. ಆಗ ಮಾತ್ರ ಇದರ ಮೂಲ ಬೇರುಗಳನ್ನು ಕೀಳಲು ಸಾಧ್ಯ. ಶಾಸ್ತ್ರ ಪುರಾಣಗಳು, ಜಾತೀಯತೆಯ ಪ್ರತಿಬಿಂಬಕ ಗಳಾಗಿವೆ. ಮನಸ್ಸಿನಿಂದ ಇದನ್ನು ಸುಟ್ಟು ನಾಗರಿಕ ಸಮಾಜಲಕ್ಕೆ ಲಗ್ಗೆ ಇಡುವ ಅನಿವಾರ್ಯತೆ ಇದೆ ಎಂದರು.

ಜಿಪಂ ಉಪಾಧ್ಯಕ್ಷ ಜೆ. ಯೋಗೇಶ್‌, ಸದಸ್ಯೆ ಉಮಾವತಿ, ತಾಪಂ ಅಧ್ಯಕ್ಷ ನಿರಂಜನ್‌, ಬಾಬು ಜಗಜೀವನರಾಂ ಸೇವಾ ಸಮಿತಿಯ ಮರಪ್ಪ, ತಾಪಂ ಉಪಾಧ್ಯಕ್ಷೆ ಮಲ್ಲಾಜಮ್ಮ, ಸದಸ್ಯರಾದ ಭಾಗ್ಯ, ಪಲ್ಲವಿ, ಪುಟ್ಟು, ವೆಂಕಟೇಶ್‌, ನಂಜುಂಡಯ್ಯ, ನಾಗರಾಜು, ಸಿದ್ದರಾಜು ಡಿ.ರೇವಣ್ಣ ತಹಶೀಲ್ದಾರ್‌ ವರ್ಷ ಒಡೆಯರ್‌, ಇಒ ರಾಜು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.