ಪ್ರಧಾನಮಂತ್ರಿ ಉಜ್ವಲ ಯೋಜನೆ: ಫಲಾನುಭವಿಗಳಿಗೆ ಗ್ಯಾಸ್ ವಿತರಣೆ
Team Udayavani, Feb 7, 2019, 1:00 AM IST
ಬ್ರಹ್ಮಾವರ: ಕೇಂದ್ರ ಸರಕಾರ ಜನಸಾಮಾನ್ಯರ ಕಣ್ಣೀರೊರೆಸುವ ಕೆಲಸ ಮಾಡುತ್ತಿದೆ. ಒಲೆಯ ಮುಂದೆ ಕುಳಿತು ಕಣ್ಣೀರುಡುತ್ತಿದ್ದ ತಾಯಂದಿರ ಮುಖದಲ್ಲಿ ಇಂದು ಮಂದಹಾಸ ಕಾಣುತ್ತಿದೆ. ಒಲೆಯ ಮುಂದೆ ಹೊಗೆಯ ಜತೆಗೆ ಕೂರುತ್ತಿದ್ದ ಕುಟುಂಬ ಇಂದು ಗ್ಯಾಸ್ ಸೌಲಭ್ಯ ಪಡೆದು ಸಂತೋಷವಾಗಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಮಂಗಳವಾರ ಕೊಕ್ಕರ್ಣೆ ಶ್ರೀ ಗಣೇಶ ಕಲಾ ಮಂದಿರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾ ಕಾಂಕ್ಷೆಯ ಯೋಜನೆಯಾದ ಉಜ್ವಲ ಯೋಜನೆಯ ಉಚಿತ ಗ್ಯಾಸ್ ಸಂಪರ್ಕ ವಿತರಿಸಿ ಅವರು ಮಾತನಾಡಿದರು.
ಉಡುಪಿ ಜಿಲ್ಲೆಯಲ್ಲಿ ಒಟ್ಟು 20,000 ಫಲಾನುಭವಿಗಳಿಗೆ ಗ್ಯಾಸ್ ಸೌಲಭ್ಯ ಈಗಾಗಲೇ ದೊರಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮೈರ್ಮಾಡಿ ಸುಧಾಕರ ಶೆಟ್ಟಿ, ಪ್ರತಾಪ್ ಹೆಗ್ಡೆ ಮಾರಾಳಿ, ಚೇರ್ಕಾಡಿ ಪಂಚಾಯತ್ ಅಧ್ಯಕ್ಷ ಹರೀಶ್ ಶೆಟ್ಟಿ, ಕೊಕ್ಕರ್ಣೆ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಉದ್ಯಮಿ ಬಾಲಕೃಷ್ಣ ಹೆಗ್ಡೆ, ತಾಲೂಕು ಪಂಚಾಯತ್ ಸದಸ್ಯರಾದ ಭುಜಂಗ ಶೆಟ್ಟಿ, ಸುನೀತಾ ಡಿ. ಶೆಟ್ಟಿ, ಶಾರದಾ ಎಚ್.ಪಿ. ಗ್ಯಾಸ್ನ ಗೀತಾ ಶ್ಯಾನುಭಾಗ್, ಜಿಲ್ಲಾ ನೋಡಲ್ ಅಧಿಕಾರಿ ಜುನೈದ್, ವೈದ್ಯಾಧಿಕಾರಿ ಸುರೇಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
400 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಂಪರ್ಕ ನೀಡಲಾಯಿತು. ಇದೇ ಸಂದರ್ಭ ಉಜ್ವಲ ಯೋಜನೆ ಕುರಿತು ಗ್ರಾಮೀಣ ಪ್ರದೇಶದಲ್ಲಿ ಮಾಹಿತಿ ನೀಡುವ ಉದ್ದೇಶದಿಂದ ಉಜ್ವಲ ರಥಕ್ಕೆ ಚಾಲನೆ ನೀಡಲಾಯಿತು. ಧ್ವನಿ ಸುರುಳಿ ಬಿಡುಗಡೆಗೊಳಿಸಲಾಯಿತು.
ಮಾಧವ ಪೈ ಸ್ವಾಗತಿಸಿ, ಹರೀಶ್ ಶ್ಯಾನುಭಾಗ್ ವಂದಿಸಿದರು. ಶಶಿಧರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್