ಬಿಲ್ಲವರ ಅಸೋಸಿಯೇಶನ್‌ ಮಲಾಡ್‌: ಮಹಿಳೆಯರಿಂದ ಅರಸಿನ ಕುಂಕುಮ 


Team Udayavani, Feb 6, 2019, 2:31 PM IST

0502mum06.jpg

ಮುಂಬಯಿ: ತಿಳಿವಳಿಕೆಯ ಸಹಮತದಲ್ಲಿ ಸಂಸಾರವನ್ನು ಹೊಂದಿಸಿಕೊಳ್ಳುವ ಗುಣ ಮಹಿಳೆಯರಲ್ಲಿ ಇರಬೇಕು. ಸಾಮಾಜಿಕ ವಿಘಟನೆಯ ಶಕ್ತಿಯನ್ನು ಮೀರಿ ಸಾಂಸಾರಿಕ ಬದುಕಿಗೆ ಮಹತ್ವ ನೀಡಿದಾಗ ಕೌಟುಂಬಿಕ ಜೀವನ ಸುಖಮಯವಾಗುವುದು ಎಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌ ಅಭಿಪ್ರಾಯಪಟ್ಟರು.

ಫೆ.2ರಂದು ಬಿಲ್ಲವರ ಅಸೋಸಿಯೇಶನ್‌ ಮಲಾಡ್‌ ಸ್ಥಳೀಯ ಕಚೇರಿಯ ಹೊರ ಸಭಾಂಗಣ, ಬ್ರಿಜ್‌ವಾಸಿ ಅಪಾರ್ಟ್‌ಮೆಂಟ್‌, ದಪ್ತರಿ ರೋಡ್‌ ಮಲಾಡ್‌ ಇಲ್ಲಿ  ಸಮಿತಿಯ ಮಹಿಳೆಯರು ಆಯೋಜಿಸಿದ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಅವರು ಮಾತನಾಡುತ್ತಿದ್ದರು.

ಜಯ ಸಿ. ಸುವರ್ಣ ಅವರ ದೂರದೃಷ್ಟಿ, ಚಿಂತನೆಯಿಂದ ಮಹಿಳೆಯರಿಗೆ ಇಂದು ಉತ್ತಮ ವೇದಿಕೆ ದೊರೆತಿದೆ. ಅಸೋಸಿಯೇಶನ್‌ ಕೂಡ ಮಹಿಳೆಯರ ಅಭ್ಯುದಯಕ್ಕಾಗಿ ಅತೀವ ಕಾಳಜಿ ವಹಿಸಿದೆ. ಶ್ರೀ ನಾರಾಯಣ ಗುರುಗಳ ತತ್ವಾದರ್ಶಕ್ಕೆ ನಾವೆಲ್ಲ ಬದ್ಧರಾಗಿ ಸ್ಥಳೀಯ ಸಮಿತಿಯ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳಬೇಕು ಎಂದವರು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಸಹ ನೃತ್ಯ ನಿರ್ದೇಶಕಿ ಜ್ಯೋತಿ ಎಸ್‌. ಸರ್ಕಾರ್‌ ಮಾತನಾಡಿ, ಮಹಿಳೆಯರು ಅಸಮಾನತೆಯನ್ನು ತೊರೆದು ಒಂದೇ ವೇದಿಕೆಯಲ್ಲಿ ಒಟ್ಟುಗೂಡಲು ಇದು ಒಂದು ಸುಸಂದರ್ಭ. ನೃತ್ಯರಂಗ ಕ್ಷೇತ್ರಕ್ಕೆ ಈಗ ಎಲ್ಲೆಡೆ ಅಭಿಮಾನಿಗಳ ಬೇಡಿಕೆ ಇರುವುದರಿಂದ ನೃತ್ಯದಲ್ಲಿ ಅಭಿರುಚಿ ಇರುವ ಸಮಿತಿಯ ಹೆತ್ತವರ ಮಕ್ಕಳಿಗೆ ನೃತ್ಯ ನಿರ್ದೇಶನದ ಸಹಾಯ ನೀಡುವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಗರಸೇವಕಿ ಉಪಸ್ಥಿತರಿದ್ದು, ಸ್ಥಳೀಯ ಸಮಿತಿಯ ಮಹಿಳೆಯರಿಗೆ ಯಾವುದೇ ಸಹಾಯ ನೀಡುವ ಭರವಸೆಯಿತ್ತರು.

ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ ಬಿಲ್ಲವರ ಅಸೋಸಿಯೇಶನ್‌ನ ಕೇಂದ್ರ ಕಚೇರಿಯ ಉಪಾಧ್ಯಕ್ಷ ಶಂಕರ್‌ ಡಿ. ಪೂಜಾರಿ ಮಾತನಾಡಿ, ಮಹಿಳೆಯರೆಲ್ಲ ಸದಾ ಒಗ್ಗಟ್ಟಿನಿಂದ ಇದ್ದು ಸಮಿತಿಯ ಕಾರ್ಯಕ್ರಮಗಳು ಸುಲಲಿತವಾಗಿ ನಡೆಯುವಂತೆ ಸಹಕರಿಸಬೇಕು ಎಂದರು.

ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್‌ ಕೆ. ಪೂಜಾರಿ  ಅವರು ಮಾತನಾಡಿ, ಮಲಾಡ್‌ ಸಮಿತಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಸದಾ ದೊರೆಯುತ್ತಿದ್ದು, ಸಮಿತಿಯ ಸದಸ್ಯರು ಭಾಗವಹಿಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ ಬಹುಮಾನ ಗಳಿಸುವ ಅವಕಾಶದ ಆಶೀರ್ವಾದ ನೀಡುತ್ತಿದ್ದಾರೆ. ನಮ್ಮ ಪ್ರತಿಯೊಂದು ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಉತ್ಸುಕತೆಯಿಂದ ಸಹಕಾರ ನೀಡಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಮಹಿಳೆಯರು ಪ್ರಾರ್ಥನೆ ಹಾಡಿದರು. ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಜ್ಯೋತಿ ಎಸ್‌. ಸರ್ಕಾರ್‌, ಜಯಂತಿ ವಿ. ಉಳ್ಳಾಲ್‌, ಮಹಿಳಾ ವಿಭಾಗದ ಕಾರ್ಯದರ್ಶಿ ಸುಮಿತ್ರಾ ಎಸ್‌. ಬಂಗೇರ, ಜತೆ ಕಾರ್ಯದರ್ಶಿ ಪ್ರಭಾ ಎಸ್‌. ಬಂಗೇರ, ಸವಿತಾ ಡಿ. ಸಾಲ್ಯಾನ್‌, ಇಂದಿರಾ ವಿ. ಕರ್ಕೇರ ಅವರನ್ನು ಸಮಿತಿಯ ಮಹಿಳಾ ಸದಸ್ಯರು ಗೌರವಿಸಿದರು. ಸದಸ್ಯರ ಮಕ್ಕಳಿಂದ ವಿವಿಧ ಮನೋರಂಜನೆ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಕೊನೆಯಲ್ಲಿ ಮಹಿಳೆಯರೆಲ್ಲರೂ ಅರಸಿನ ಕುಂಕುಮ ಹಚ್ಚಿ, ಎಳ್ಳುಂಡೆ ಹಂಚಿ ಪರಸ್ಪರ ಪ್ರೀತಿ ಸೌಹಾರ್ದ ವಿನಿಮಯಿಸಿದರು.

ಲತಾ ವೈ. ಪೂಜಾರಿ, ಯಶೋದಾ ಪೂಜಾರಿ, ಸಂಗೀತಾ ಡಿ. ಸನಿಲ್‌ ಅತಿಥಿಗಳನ್ನು ಪರಿಚಯಿಸಿದರು. ವಿಜಯಾ ಎಸ್‌. ಪೂಜಾರಿ ಸ್ವಾಗತಿಸಿದರು. ಅನಿತಾ ಜೆ. ಅಂಚನ್‌ ಕಾರ್ಯಕ್ರಮ ನಿರೂಪಿಸಿದರು. ನಳಿನಿ ಪದ್ಮನಾಭ ಕರ್ಕೇರ ವಂದಿಸಿದರು. ಸಮಿತಿಯ ಗೌರವಾಧ್ಯಕ್ಷ ಕೆ. ಗೋಪಾಲ್‌ ಪಾಲನ್‌, ಉಪ ಕಾರ್ಯಾಧ್ಯಕ್ಷ ಕೃಷ್ಣ ಎ. ಪೂಜಾರಿ, ಶೇಖರ ಕೆ. ಪೂಜಾರಿ, ಕಾರ್ಯದರ್ಶಿ ದಿನೇಶ್‌ ಸಿ. ಸಾಲ್ಯಾನ್‌, ಕೋಶಾಧಿಕಾರಿ ಹರಿಶ್ಚಂದ್ರ ಕೆ. ಪೂಜಾರಿ, ಇತರ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.  

 ಚಿತ್ರ-ವರದಿ: ರಮೇಶ್‌ ಉದ್ಯಾವರ್‌

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.