ರಾಜಕೀಯ ಪಕ್ಷಗಳಿಗೆ ವಾಟ್ಸ್ಆ್ಯಪ್ ಎಚ್ಚರಿಕೆ
Team Udayavani, Feb 7, 2019, 12:30 AM IST
ಹೊಸದಿಲ್ಲಿ/ಮುಂಬಯಿ: ಲೋಕಸಭೆ ಚುನಾವಣೆ ಘೋಷಣೆಗೆ ದಿನಗಳು ಹತ್ತಿರ ಬರುತ್ತಿರುವಂತೆಯೇ ವಾಟ್ಸ್ ಆಪ್ ಅನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಸ್ಥೆ ಎಚ್ಚರಿಕೆ ನೀಡಿದೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಸಂಸ್ಥೆಯ ಸಂವಹನ ವಿಭಾಗದ ಮುಖ್ಯಸ್ಥ ಕಾರ್ಲ್ ವೂಗ್ ಹೇಳಿದ್ದಾರೆ. ಯಾವ ಪಕ್ಷ ದುರುಪಯೋಗ ಮಾಡಿದೆ ಎಂಬುದರ ಬಗ್ಗೆ ಅವರು ಮಾಹಿತಿ ನೀಡಲಿಲ್ಲ. ಇದೇ ವೇಳೆ, ತನ್ನ ಲ್ಲಿ ಕಂಟೆಂಟ್ಅನ್ನು ಸೆನ್ಸಾರ್ ಮಾಡಲಾಗದು ಎಂದು ಬಾಂಬೆ ಹೈಕೋರ್ಟ್ಗೆ ಫೇಸ್ಬುಕ್ ಹೇಳಿದೆ. ಫೇಸ್ಬುಕ್ನಲ್ಲಿ ರಾಜಕೀಯ ಜಾಹೀರಾತು ಪ್ರದರ್ಶಿಸುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ದೂರಿನ ವಿಚಾರಣೆ ವೇಳೆ ಫೇಸ್ಬುಕ್ ಈ ಹೇಳಿಕೆ ನೀಡಿದೆ.