ಸ್ಮಾರ್ಟ್‌ ಪಾರ್ಕಿಂಗ್‌ ಅನುಮಾನ?


Team Udayavani, Feb 7, 2019, 4:30 AM IST

blore-4.jpg

ಬೆಂಗಳೂರು: ಬೆಂಗಳೂರಿನಲ್ಲಿ ಪಾರ್ಕಿಂಗ್‌ ಸಮಸ್ಯೆಗೆ ನಿವಾರಣೆ ಹಾಗೂ ಪಾರ್ಕಿಂಗ್‌ ಮಾಫಿಯಾ ನಿಯಂತ್ರಿಸಲು ಜಾರಿಗೊಳಿಸಲು ಮುಂದಾಗಿದ್ದ ‘ಸ್ಮಾರ್ಟ್‌ ಪಾರ್ಕಿಂಗ್‌’ ಯೋಜನೆಗೆ ಸರ್ಕಾರ ಅನುಮೋದಿಸದ ಹಿನ್ನೆಲೆಯಲ್ಲಿ ಯೋಜನೆಗೆ ಹಿನ್ನಡೆಯುಂಟಾಗಿದೆ.

ಪಾರ್ಕಿಂಗ್‌ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರುವ ಉದ್ದೇಶದಿಂದ ಮಾನವ ರಹಿತ ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆ ಜಾರಿಗೊಳಿಸಲು ಪಾಲಿಕೆ ಯೋಜನೆ ರೂಪಿ ಸಿತ್ತು. ಆ ಮೂಲಕ ಪಾರ್ಕಿಂಗ್‌ ಮಾಫಿಯಾ ಗಳಿಗೆ ಕಡಿವಾಣ ಹಾಕುವುದು, ಪಾರ್ಕಿಂಗ್‌ ಶುಲ್ಕದಿಂದ ಸಂಪನ್ಮೂಲ ಕ್ರೋಢೀ ಕರಣದ ಜತೆಗೆ, ವಾಹನ ಸವಾರರಿಗೆ ವ್ಯವಸ್ಥಿತ ವಾದ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸುವುದು ಯೋಜನೆಯ ಉದ್ದೇಶವಾಗಿತ್ತು.

ಅದರಂತೆ ನಗರದ 87 ರಸ್ತೆಗಳಲ್ಲಿ ಸ್ವಯಂ ಚಾಲಿತ ಪಾರ್ಕಿಂಗ್‌ ವ್ಯವಸ್ಥೆ ಜಾರಿಗೊಳಿಸಲು ಪಾಲಿಕೆ ಮುಂದಾಗಿತ್ತು. ಅದರಂತೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಗುತ್ತಿಗೆದಾರರನ್ನು ಆಯ್ಕೆ ಮಾಡಿ, ಅಂತಿಮ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಆದರೆ, ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಸರ್ಕಾರ, ಸ್ಮಾರ್ಟ್‌ ಪಾಕಿಂಗ್‌ ಯೋಜನೆ ಜಾರಿಗೆ ಮರು ಟೆಂಡರ್‌ ನಡೆಸುವಂತೆ ಸೂಚಿಸಿದೆ. ಪರಿಣಾಮ ಕಳೆದ ಒಂದೂವರೆ ವರ್ಷಗಳಿಂದ ಸ್ಮಾರ್ಟ್‌ಪಾರ್ಕಿಂಗ್‌ ಯೋಜನೆ ಜಾರಿಗೊಳಿಸಲು ಅಧಿಕಾರಿಗಳು ನಡೆಸಿದ ಪ್ರಯತ್ನ ವಿಫ‌ಲವಾಗಿದ್ದು, ಮತ್ತೆ ಟೆಂಡರ್‌ ಪ್ರಕ್ರಿಯೆ ನಡೆಸಿ ಗುತ್ತಿಗೆದಾರರನ್ನು ಆಯ್ಕೆ ಮಾಡಲು ಕನಿಷ್ಠ ಆರು ತಿಂಗಳು ಸಮಯಾವಕಾಶ ಬೇಕಾಗಲಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವುದರಿಂದ ಸ್ಮಾರ್ಟ್‌ ಪಾರ್ಕಿಂಗ್‌ ಯೋಜನೆ ಅನುಷ್ಠಾ ನವಾಗುವುದು ಅನುಮಾನ ಎನ್ನಲಾಗಿದೆ.

ಜತೆಗೆ ಸ್ಮಾರ್ಟ್‌ ಪಾರ್ಕಿಂಗ್‌ ಯೋಜನೆ ಯಾವ ರಸ್ತೆಗಳಲ್ಲಿ ಜಾರಿಗೊಳಿಸಬೇಕೆಂಬ ಗೊಂದಲ ಅಧಿಕಾರಿಗಳಲ್ಲಿ ಮೂಡಿಸಿದೆ. ಪಾಲಿಕೆಯಿಂದ ಈ ಹಿಂದೆ ಆಯ್ಕೆ ಮಾಡಿಕೊಂಡ ರಸ್ತೆಗಳಲ್ಲಿ ಬಹುತೇಕ ರಸ್ತೆಗಳಲ್ಲಿ ಟೆಂಡರ್‌ಶ್ಯೂರ್‌ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಕೆಲವು ರಸ್ಯೆಗಳಲ್ಲಿ ಮಾತ್ರ ಪ್ರಗತಿಯಲ್ಲಿದೆ. ಇನ್ನುಳಿದಂತೆ ವೈಟ್ಟಾಪಿಂಗ್‌ ಕಾಮಗಾರಿ ಯಿಂದ ರಸ್ತೆಗಳ ಅಳತೆಯಲ್ಲಿ ಹೆಚ್ಚಿನ ವ್ಯತ್ಯಾಸ ಉಂಟಾಗುವುದಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಇನ್ನು ಹೊಸ ರಸ್ತೆಗಳನ್ನು ಆಯ್ಕೆ ಮಾಡುವ ಮಾನದಂಡಗಳ ಬಗ್ಗೆಯೂ ಗೊಂದಲ ಸೃಷ್ಟಿಯಾಗಿದ್ದು, ಹಿಂದೆ ರಸ್ತೆಗಳನ್ನು ಎ (ಪ್ರೀಮಿಯಂ), ಬಿ (ವಾಣಿಜ್ಯ) ಹಾಗೂ ಸಿ (ಸಾಮಾನ್ಯ) ಎಂದು ಮೂರು ಭಾಗಗಳಾಗಿ ವಿಂಗಡಿಸಲಾಗಿತ್ತು. ಜತೆಗೆ ಒಟ್ಟು 87 ರಸ್ತೆಗಳಲ್ಲಿ 2,500 ಕಾರುಗಳು ಹಾಗೂ 5 ಸಾವಿರ ದ್ವಿಚಕ್ರ ವಾಹನಗಳ ನಿಲುಗಡೆ ಸ್ಥಳಾವಕಾಶವನ್ನು ಗುರುತಿಸಲಾಗಿತ್ತು. ಇದೀಗ ಮರು ಟೆಂಡರ್‌ ಕರೆಯುವುದರಿಂದ ಮತ್ತೆ ರಸ್ತೆಗಳ ಅಧ್ಯಯನ ನಡೆಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಸರ್ಕಾರದ ಆದೇಶದಲ್ಲೇನಿದೆ?: ಪಾಲಿಕೆಯ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ ಆಯ್ಕೆ ಮಾಡಿಕೊಂಡಿರುವ ರಸ್ತೆಗಳಲ್ಲಿ ಟೆಂಡರ್‌ ಶ್ಯೂರ್‌ ಅಥವಾ ವೈಟ್ಟಾಪಿಂಗ್‌ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಮಗಾರಿ ಗಳು ಪೂರ್ಣಗೊಂಡ ನಂತರ ರಸ್ತೆಗಳ ವಿನ್ಯಾಸವೇ ಬದಲಾಗಲಿದ್ದು, ಬಿಡ್‌ ಸಲ್ಲಿಸಿರುವ ಸಂಸ್ಥೆಗಳು ನಮೂದಿಸಿರುವ ಮೊತ್ತದಲ್ಲಿ ಭಾರಿ ವ್ಯಾತ್ಯಾಸ ಕಂಡು ಬರುವು ದರಿಂದ ಮರು ಟೆಂಡರ್‌ ಆಹ್ವಾನಿಸುವಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಹೆಚ್ಚುವುದೇ ಆದಾಯ?: ನಗರದ ಪ್ರಮುಖ 87 ರಸ್ತೆಗಳಲ್ಲಿ ಸ್ಮಾರ್ಟ್‌ ಪಾಕಿಂಗ್‌ ವ್ಯವಸ್ಥೆ ಜಾರಿಯಿಂದಾಗಿ ಪಾಲಿಕೆಗೆ ವಾರ್ಷಿಕ 31.56 ಕೋಟಿ ರೂ. ಆದಾಯ ಬರುತ್ತದೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಗುತ್ತಿಗೆ ಪಡೆದ ಬಿಲ್ಡಿಂಗ್‌ ಕಂಟ್ರೋಲ್‌ ಸಲ್ಯೂಷನ್ಸ್‌ ಇಂಡಿಯಾ ಕಂಪನಿಯು 10 ವರ್ಷಗಳಿಗೆ ಪಾಲಿಕೆಗೆ 315.60 ಕೋಟಿ ರೂ. ನೀಡಲು ಒಪ್ಪಿಕೊಂಡಿತ್ತು. ಇದೀಗ ಮರು ಟೆಂಡರ್‌ ಕರೆಯುವುದರಿಂದ ಪಾಲಿಕೆಗೆ ಆದಾಯ ಹೆಚ್ಚಬಹುದು ಅಥವಾ ಎಸ್‌ಆರ್‌ ದರ ಹೆಚ್ಚಾಗಿದೆ ಎಂಬ ಕಾರಣ ನೀಡಿ ಕಡಿಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ನಗರದಲ್ಲಿ ಪಾರ್ಕಿಂಗ್‌ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ 87 ರಸ್ತೆಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ ಯೋಜನೆ ಜಾರಿಗೊಳಿಸಲು ಪಾಲಿಕೆ ಮುಂದಾಗಿತ್ತು. ಅದರಂತೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಸರ್ಕಾರದ ಅನುಮತಿಗಾಗಿ ಕಳುಹಿಸಲಾಗಿದ್ದು, ಸರ್ಕಾರ ಮರು ಟೆಂಡರ್‌ ಆಹ್ವಾನಿಸುವಂತೆ ಸೂಚಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮರು ಟೆಂಡರ್‌
ಕರೆಯಲಾಗುವುದು. 
●ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ

ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.