ಒಂಟಿ ವೃದ್ಧರ ಮೇಲಿನ ದೌರ್ಜನ್ಯ ತಡೆಗೆ ಚಿಂತನೆ


Team Udayavani, Feb 7, 2019, 5:10 AM IST

blore-5.jpg

ಬೆಂಗಳೂರು: ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ತರುವ ನಿಟ್ಟಿನಲ್ಲಿ ಮತ್ತೂಂದು ಹೆಜ್ಜೆ ಇಟ್ಟಿರುವ ನಗರ ಪೊಲೀಸರು ‘ಹಿರಿಯ ನಾಗರಿಕರು ಮತ್ತು ಪೋಷಕರನ್ನೊಳಗೊಂಡ ಸಮಿತಿ’ ರಚಿಸುವ ಮೂಲಕ ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರ ಜತೆ ಉತ್ತಮ ಬಾಂಧವ್ಯ ಹೊಂದಲು ಮುಂದಾಗಿದ್ದಾರೆ.

ಈಗಾಗಲೇ ನಗರದ ಎಲ್ಲ ಎಂಟು ಕಾನೂನು ಸುವ್ಯವಸ್ಥೆ ವಲಯಗಳಲ್ಲಿ ಜಾರಿಯಲ್ಲಿರುವ ಗಸ್ತು ಪೊಲೀಸ್‌ ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿರುವ 15-20 ಮಂದಿ ಹಿರಿಯ ಹಾಗೂ ಜವಾಬ್ದಾರಿಯುತ ನಾಗರಿಕರನ್ನು ಆಯ್ಕೆ ಮಾಡಿ ಅವರೊಂದಿಗೆ ತಿಂಗಳಿಗೊಮ್ಮೆ ಸಭೆ ನಡೆಸಿ ಕೆಲ ಸಲಹೆ ಪಡೆಯಲು ಸೂಚಿಸಲಾಗಿದೆ. ಸಮಿತಿಗೆ ಆಯ್ಕೆಯಾದ ನಾಗರಿಕರಿಗೆ ಆಯಾ ವಲಯ ಪೊಲೀಸ್‌ ಠಾಣೆಯಿಂದ ಪ್ರತ್ಯೇಕ ಗುರುತಿನ ಚೀಟಿ ವಿತರಿಸಲಾಗುತ್ತದೆ. ಈ ಮೂಲಕ ಕಮ್ಯೂನಿಟಿ ಪೊಲೀಸಿಂಗ್‌ (ಸಮುದಾಯ ಪೊಲೀಸ್‌ ವ್ಯವಸ್ಥೆ) ಅನ್ನು ಇನ್ನಷ್ಟು ಗಟ್ಟಿ ಮಾಡಲಾಗುವುದು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಅಷ್ಟೇ ಅಲ್ಲದೆ, ಗಸ್ತು ತಿರುಗುವ ಸಿಬ್ಬಂದಿ ಕಡ್ಡಾಯವಾಗಿ ಸಮಿತಿ ಸದಸ್ಯರ ಜತೆ ಸಮಾಲೋಚನೆ ನಡೆಸಿ, ಅವರಿಂದ ಸರಗಳ್ಳತನ ಹಾಗೂ ಇತರೆ ಕಾನೂನು ಬಾಹಿರ ಚಟು ವಟಿಕೆಗಳ ತಡೆಗೆ ಏನೆಲ್ಲ ಮುನ್ನೆಚ್ಚರಿಕಾ ಕ್ರಮವಹಿಸ‌ಬೇಕು ಎಂಬುದರ ಬಗ್ಗೆ ಸಲಹೆ ಪಡೆಯಬೇಕು. ಜತೆಗೆ ಪೊಲೀಸ್‌ ಇಲಾಖೆಯಿಂದ ಆಯೋಜಿಸುವ ಜಾಗೃತಿ ಕಾರ್ಯಕ್ರಮ, ಆಂದೋಲನಗಳಲ್ಲಿ ಸಮಿತಿಯ ಸದಸ್ಯರನ್ನು ಸೇರಿಸಿಕೊಂಡು ಸ್ಥಳೀಯವಾಗಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂಬುದು ಸಮಿತಿಯ ಮುಖ್ಯ ಉದ್ದೇಶ ಎಂದು ಅಧಿಕಾರಿಗಳು ವಿವರಿಸಿದರು.

ಹಿರಿಯ ನಾಗರಿಕರ ಬಗ್ಗೆ ಮಾಹಿತಿ: ಇತ್ತೀಚೆಗೆ ನಗರದಲ್ಲಿ ಒಂಟಿ ವೃದ್ಧರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳು ಹಿರಿಯ ನಾಗರಿಕರ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖಾ ಹಂತ ಮತ್ತು ಪ್ರಗತಿ, ಜರುಗಿಸಲಾದ ಕಾನೂನು ಕ್ರಮಗಳು ಹಾಗೂ ಇಂತಹ ಪ್ರಕರಣಗಳು ಮತ್ತೆ ನಡೆಯದಂತೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರತಿ ತಿಂಗಳ 20ನೇ ತಾರೀಖೀನೊಳಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಮಾಹಿತಿಯನ್ನು ಎಲ್ಲ ಉಪ ಪೊಲೀಸ್‌ ಆಯುಕ್ತರು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಮೊದಲ ಬಾರಿಗೆ ವೃದ್ಧರ ಮಾಹಿತಿ ಸಂಗ್ರಹ
ಇದೇ ಮೊದಲ ಬಾರಿಗೆ ನಗರ ಪೊಲೀಸ್‌ ಕಮಿಷನರೆಟ್ ವ್ಯಾಪ್ತಿಯಲ್ಲಿ ಪ್ರತಿ ಠಾಣೆಗಳ ಗಸ್ತು ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿರುವ ಹಿರಿಯ ನಾಗರಿಕರು, ಪ್ರಮುಖವಾಗಿ ಆರೈಕೆ ಮಾಡುವವರಿಲ್ಲದೆ ಒಂಟಿಯಾಗಿ ವಾಸವಾಗಿರುವ ವೃದ್ಧರ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. ಪ್ರತಿ ಮನೆಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟ ವೃದ್ಧರ ವಯಸ್ಸು, ವಿಳಾಸ, ಭಾವಚಿತ್ರ ಹಾಗೂ ಸಂಪರ್ಕ ಸಂಖ್ಯೆಯನ್ನು ಪಡೆಯುತ್ತಿದ್ದಾರೆ. ಜತೆಗೆ ಸರಗಳ್ಳರ ಬಗ್ಗೆ ಎಚ್ಚರದಿಂದಿರಲು, ಮನೆಯಿಂದ ಹೊರಗಡೆ ಹೋಗುವಾಗ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತ ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಕರಪತ್ರದಲ್ಲಿ ಗಸ್ತು ಸಿಬ್ಬಂದಿಯ ಸಂಪರ್ಕ ಸಂಖ್ಯೆಯನ್ನು ನಮೂದಿಸಲಾಗಿದ್ದು, ಒಂದು ವೇಳೆ ಅಪರಿಚಿತರಿಂದ ಮಾತ್ರವಲ್ಲದೆ, ಬೇರೆ ಯಾವುದೇ ರೀತಿಯ ತೊಂದರೆಯಾದಲ್ಲಿ ಕೂಡಲೇ ಸಿಬ್ಬಂದಿ ಸಂಪರ್ಕಿಸಬಹುದು. ನಂತರ ಆ ಪೊಲೀಸ್‌ ಸಿಬ್ಬಂದಿ ಕೆಲ ಕ್ಷಣಗಳಲ್ಲೇ ವೃದ್ಧರ ಸಮಸ್ಯೆಗೆ ನೆರವಾಗಲಿದ್ದಾರೆ. ಒಂಟಿಯಾಗಿ ವಾಸ ಮಾಡುವ ವೃದ್ಧರ ಬಗ್ಗೆ ಹೆಚ್ಚು ಕಾಳಜಿ ವಹಿಸಲಾಗುವುದು ಎಂದು ಅಧಿಕಾರಿ ಹೇಳಿದರು.

ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.