ವಕೀಲೆ ಸಾವು ಪ್ರಕರಣ: ಸಿಬಿಐಗೆ ವಹಿಸಲು ಅರ್ಜಿ
Team Udayavani, Feb 7, 2019, 5:58 AM IST
ಬೆಂಗಳೂರು: ವಕೀಲೆ ಎಸ್.ಧರಣಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ ಗೃಹ ಇಲಾಖೆಗೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾ. ಎಲ್.ನಾರಾ ಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯ ಪೀಠ ಬುಧವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರು, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ವೈಟ್ಫೀಲ್ಡ್ ಎಸಿಪಿ, ಮಹದೇವಪುರ ಪೊಲೀಸ್ ಠಾಣಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೂ ನೋಟಿಸ್ ಜಾರಿ ಗೊಳಿಸುವಂತೆ ನ್ಯಾಯಪೀಠ ಆದೇಶಿಸಿದೆ. ವಕೀಲೆ ಧರಣಿ ಅವರು 2018ರ ಡಿ. 31ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ವಕೀಲೆ ಧರಣಿ ವಾಸವಿದ್ದ ಮನೆ ಕಬಳಿಸಲು ಸ್ಥಳೀಯ ಪಾಲಿಕೆ ಸದಸ್ಯ ಸುರೇಶ್ ಹಾಗೂ ಆತನ ಸಹಚರರು ಕೊಲೆ ಬೆದರಿಕೆ ಹಾಕಿದ್ದರು. ಅವರ ಮನಗೆ ನುಗ್ಗಿ ಹಲ್ಲೆಯನ್ನೂ ನಡೆಸಲಾಗಿತ್ತು. ಇದರಿಂದಾಗಿ ಧರಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಸಂಘದ ಆರೋಪವಾಗಿದೆ.
ಕೋರಿಕೆ ಏನು?: ಧರಣಿ ಪರಿಶಿಷ್ಟ ಜಾತಿಗೆ ಸೇರಿದ ವಕೀಲೆ. ಅವರ ಸಾವಿಗೆ ಸ್ಥಳೀಯ ಪಾಲಿಕೆ ಸದಸ್ಯ ಸುರೇಶ್ ಮೂಲ ಕಾರಣ. ಸುರೇಶ್ ರಾಜಕೀಯ ಪ್ರಭಾವ ಹೊಂದಿದ್ದು ಪೊಲೀಸರು ಅವರ ವಿರುದ್ಧ ವಿಚಾರಣೆ ನಡೆಸುತ್ತಿಲ್ಲ. ಸರ್ಕಾರ ಆದ್ಯತೆಯ ಮೇರೆಗೆ ಈ ಪ್ರಕರಣದ ವಿಚಾರಣೆಗೆ ಮುಂದಾಗ ಬೇಕಿತ್ತು. ಆದರೆ, ಆಗಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಧರಣಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ. ಪರಿಹಾರ ನೀಡುವಂತೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ