ಹಂಪಿ ಉತ್ಸವಕ್ಕೆ ಕೊನೆಗೂ ಡೇಟ್ ಫಿಕ್ಸ್‌!


Team Udayavani, Feb 7, 2019, 10:15 AM IST

bell-1.jpg

ಹೊಸಪೇಟೆ: ಬರಗಾಲದ ನೆಪವೊಡ್ಡಿ ಹಂಪಿ ಉತ್ಸವವನ್ನು ಮುಂದೂಡುತ್ತ ಬರುತ್ತಿದ್ದ ಮೈತ್ರಿ ಸರ್ಕಾರ, ಕೊನೆಗೂ ಮಾ.2 ಮತ್ತು 3ರಂದು ಎರಡು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ದಿನಾಂಕ ನಿಗದಿ ಮಾಡಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಫೆ.7ರಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಹಂಪಿ ಉತ್ಸವ ಆಚರಣೆಗೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಲಿದೆ. ಈ ಸಂಬಂಧ ಜಿಲ್ಲಾಡಳಿತ ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸುವಂತೆ ಬುಧವಾರ ಸುತ್ತೋಲೆ ಹೊರಡಿಸಿದೆ.

ಆರಂಭದಲ್ಲೇ ಎದುರಾಗಿದ್ದ ವಿಘ್ನ: ಪ್ರತಿವರ್ಷ ನ.3ರಿಂದ 5ರವರೆಗೆ ನಡೆಯುತ್ತಿದ್ದ ಐತಿಹಾಸಿಕ ಹಂಪಿ ಉತ್ಸವಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿತ್ತು. ಕಳೆದ ಮೂರು ತಿಂಗಳಿಂದ ಚುನಾವಣೆ ನೀತಿ ಸಂಹಿತೆ, ಅನುದಾನ ಕೊರತೆ ಸೇರಿದಂತೆ ನಾನಾ ವಿಘ್ನಗಳು ಎದುರಾಗಿದ್ದು ಒಂದೆಡೆಯಾದರೆ, ಬರಗಾಲ ನೆಪವೊಡ್ಡಿ ಉತ್ಸವ ರದ್ದುಗೊಳಿಸುವ ಮೂಲಕ ಮೈತ್ರಿ ಸರ್ಕಾರ ಜಿಲ್ಲೆಯ ಜನರ ಕೆಂಗಣ್ಣಿಗೆ ಗುರಿಯಾಗಿತ್ತು. ಅಲ್ಲದೆ, ಬರಗಾಲ ಹಿನ್ನೆಲೆಯಲ್ಲಿ ರದ್ದಾಗಿದ್ದ ಉತ್ಸವಕ್ಕೆ ಭಿಕ್ಷಾಟನೆ ಮಾಡಿಯಾದರೂ ಉತ್ಸವ ಆಚರಿಸುತ್ತೇವೆ ಎಂದು ವಿಪಕ್ಷಗಳ ಹೇಳಿಕೆ ಹಾಗೂ ಈ ಭಾಗದ ಕಲಾವಿದರ ಆಗ್ರಹಕ್ಕೆ ಮಣಿದ ಮೈತ್ರಿ ಸರ್ಕಾರ, ಕಳೆದ ಜ.12 ಮತ್ತು 13ರಂದು ದಿನಾಂಕ ದಿನಾಂಕ ನಿಗದಿ ಮಾಡಿತ್ತು. ಆದರೆ ನಿಗದಿಪಡಿಸಿ ದಿನಾಂಕದಂದು ಉತ್ಸವ ನಡೆಯಲಿಲ್ಲ.

ಪುನಃ ಉತ್ಸವ ಆಚರಣೆಗೆ ಸಾರ್ವಜನಿಕರಿಂದ ಹೋರಾಟ, ಪ್ರತಿಭಟನೆ ಹಾಗೂ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತ ಫೆ.15 ಮತ್ತು 16 ರಂದು ಉತ್ಸವಕ್ಕೆ ದಿನಾಂಕ ನಿಗದಿ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸರ್ಕಾರದಿಂದ ಯಾವುದೇ ಗ್ರೀನ್‌ ಸಿಗ್ನಲ್‌ ಸಿಕ್ಕಿರಲಿಲ್ಲ.

ಮತ್ತೆ ಕನ್ನಡಪರ ಸಂಘಟನೆಗಳು, ಕಲಾವಿದರು ಹಾಗೂ ಸಾರ್ವಜನಿಕರಿಂದ ಉತ್ಸವ ಆಚರಣೆಗೆ ಒತ್ತಡ ಹೆಚ್ಚಿದ್ದರಿಂದ ಇದೀಗ ಸರ್ಕಾರ ಮಾ.2 ಮತ್ತು 3ರಂದು ಉತ್ಸವ ಆಚರಿಸಲು ದಿನಾಂಕ ನಿಗದಿ ಮಾಡಿದೆ, ಜಿಲ್ಲಾಡಳಿತದಿಂದ ಘೋಷಣೆಯೊಂದೇ ಬಾಕಿ ಉಳಿದಿದೆ.

2.10 ಕೋಟಿ ರೂ. ಬಿಡುಗಡೆ: ಹಂಪಿ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಜಿಲ್ಲಾಡಳಿತ 8 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸರ್ಕಾರ ಪ್ರವಾಸೋದ್ಯಮ ಇಲಾಖೆಯಿಂದ 1.50 ಕೋಟಿ ರೂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 60 ಲಕ್ಷ ರೂ. ಸೇರಿ ಒಟ್ಟು 2.10 ಕೋಟಿ ರೂ. ಅನುದಾನ ಮಾತ್ರ ಬಿಡುಗಡೆ ಮಾಡಿದೆ.

• ಬರ ನೆಪದಲ್ಲಿ ಹಂಪಿ ಉತ್ಸವ ರದ್ದುಗೊಳಿಸಿದ್ದ ಸರ್ಕಾರ
• ಮಂಗಳವಾರ ಉತ್ಸವಕ್ಕಾಗಿ ಮಲಗಿ ಪ್ರತಿಭಟಿಸಿದ್ದ ವಾಟಾಳ್‌
• ಅಂತೂ ಸಾರ್ವಜನಿಕರ ಒತ್ತಾಯಕ್ಕೆ ಮಣಿದ ಮೈತ್ರಿ ಸರ್ಕಾರ
• ಹಂಪಿ ಉತ್ಸವಕ್ಕೆ ಸರ್ಕಾರದಿಂದ 2.10 ಕೋಟಿ ರೂ. ಬಿಡುಗಡೆ

ಐತಿಹಾಸಿಕ ಹಂಪಿ ಉತ್ಸವ ಉತ್ತರ ಕರ್ನಾಟಕದ ಪ್ರಾತಿನಿಧಿಕ ಉತ್ಸವವಾಗಿದೆ. ಈ ಭಾಗದ ಕಲಾವಿದರ ಪ್ರತಿಭೆ ಆನಾವರಣಗೊಳಿಸುವ ಬಹುದೊಡ್ಡ ಉತ್ಸವ ಎನಿಸಿದೆ. ಸರ್ಕಾರ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಎಂಬ ತಾರತ್ಯಮ ನೀತಿ ಕೈಬಿಡಬೇಕು. ಮೈಸೂರು ದಸರಾ ಉತ್ಸವಕ್ಕೆ ನೀಡಿದ ಮಹತ್ವವನ್ನು ಹಂಪಿ ಉತ್ಸವಕ್ಕೂ ನೀಡಬೇಕು. ಪ್ರತಿವರ್ಷ ಕಡ್ಡಾಯವಾಗಿ ಹಂಪಿ ಉತ್ಸವ ಆಚರಿಸಬೇಕು.
• ಮ.ಬ.ಸೋಮಣ್ಣ, ಸಾಹಿತಿ, ರಂಗಕರ್ಮಿ, ಮರಿಯಮ್ಮನಹಳ್ಳಿ.

ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.