ಪಪಂ ಬಜೆಟ್: ಅಭಿವೃದ್ಧಿ-ಪ್ರವಾಸೋದ್ಯಮಕ್ಕೆ ಆದ್ಯತೆ


Team Udayavani, Feb 7, 2019, 12:04 PM IST

shiv-1.jpg

ತೀರ್ಥಹಳ್ಳಿ: 2019-20ನೇ ಸಾಲಿನ ಪಟ್ಟಣ ಪಂಚಾಯತ್‌ ಬಜೆಟ್‌ನಲ್ಲಿ ಪಟ್ಟಣದ ಅಭಿವೃದ್ಧಿ, ಮೂಲ ಸೌಕರ್ಯ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ ರೂಪಿಸಲಾಗಿದೆ. 23,26,14,996 ರೂ. ಒಟ್ಟು ಬಜೆಟ್‌ನಲ್ಲಿ ಪ್ರಮುಖ ಮೂಲಗಳಿಂದ ಸಂಪನ್ಮೂಲವನ್ನು ನಿರೀಕ್ಷಿಸಿ ಜನಪರ ಬಜೆಟ್ ನೀಡಿದ್ದೇವೆ ಎಂದು ಪಟ್ಟಣ ಪಂಚಾಯತ್‌ ಅಧ್ಯಕ್ಷ ಸಂದೇಶ್‌ ಜವಳಿ ಹೇಳಿದರು.

ಪಟ್ಟಣದ ಪಪಂನ ರವೀಂದ್ರ ಶೆಟ್ಟಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ 2019-20ನೇ ಸಾಲಿನ ಪಟ್ಟಣ ಪಂಚಾಯತ್‌ ಬಜೆಟ್ ಮಂಡಿಸಿ ಅವರು ಮಾತನಾಡಿದರು.

ಈ ಬಾರಿಯ ಬಜೆಟ್‌ನಲ್ಲಿ ಆಧುನಿಕ ಮಾದರಿಯ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ ಬಾಳೇಬೈಲಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನೀರಿನ ಘಟಕ ಸ್ಥಾಪನೆ, ಬಯಲು ಶೌಚಾಲಯ ಮುಕ್ತ ಪಟ್ಟಣ ಘೋಷಣೆ, ಹಾಗೂ ಪಟ್ಟಣದ ಎರಡು ಪ್ರಮುಖ ಸ್ಥಳಗಳಲ್ಲಿ ಸ್ವಾಗತ ಕಮಾನುಗಳ ನಿರ್ಮಾಣಕ್ಕೆ 15ಲಕ್ಷ ರೂ. ಕಾಯ್ದಿರಿಸಲಾಗಿದೆ ಎಂದರು.

ಪಟ್ಟಣದಲ್ಲಿ ಘನತ್ಯಾಜ್ಯ ವಿಲೇವಾರಿ ಹಾಗೂ ಸಂಸ್ಕರಣೆಗಾಗಿ ಹೆಚ್ಚು ನಿಗಾ ವಹಿಸಲಾಗಿದೆ. ಘನತ್ಯಾಜ್ಯ ವಸ್ತುಗಳಿಂದ, ಸಾವಯವ ಗೊಬ್ಬರ ತಯಾರಿಕೆಯಿಂದ ಈ ಬಜೆಟ್‌ನಲ್ಲಿ 3 ಲಕ್ಷ ರೂ. ಆದಾಯ ನಿರೀಕ್ಷಿಸಲಾಗಿದೆ. ಮಾನವ ತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪನೆಗೆ 20 ಲಕ್ಷ ಅನುದಾನ ಕಾಯ್ದಿರಿಸಲಾಗಿದ್ದು, ಸೌರ ವಿದ್ಯುತ್‌ ಉತ್ಪಾದನಾ ಘಟಕಗಳ ನಿರ್ಮಾಣಕ್ಕೆ ಉದ್ಯಮ ನಿಧಿಯಿಂದ 75ಲಕ್ಷ ಹಣ ಕಾಯ್ದಿರಿಸಲಾಗಿದೆ ಎಂದರು.

ಈ ಬಾರಿ ವಿಶೇಷವಾಗಿ ರಸ್ತೆ ಬದಿ ವ್ಯಾಪಾರಿಗಳಿಗೆ ಪುನರ್‌ವಸತಿ ಉದ್ದೇಶಕ್ಕಾಗಿ ಸೇಫ್‌ ಫುಡ್‌ ಜೋನ್‌ ಸ್ಥಾಪಿಸಿದ್ದು, 25 ಲಕ್ಷ ಹಣವನ್ನು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಿಂದ ವಿಶೇಷ ಯೋಜನೆಯಲ್ಲಿ ತರಲು ನಿರ್ಧರಿಸಲಾಗಿದೆ. ಪಟ್ಟಣದ ಸಿದ್ಧೇಶ್ವರ ಬೆಟ್ಟ ಅಭಿವೃದ್ಧಿ ಹಾಗೂ ತುಂಗಾನದಿ ತೀರದಲ್ಲಿ ಉದ್ಯಾನದ ಅಭಿವೃದ್ಧಿಗೆ 5 ಲಕ್ಷ ಹಣ, ಅಧುನಿಕ ಈಜು ಕೊಳ ನಿರ್ಮಾಣಕ್ಕೆ 25 ಲಕ್ಷ, ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ 30 ಲಕ್ಷ, ಪಟ್ಟಣದ ಆಗುಂಬೆ ಬಸ್‌ ನಿಲ್ದಾಣದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಕ್ಕೆ 5 ಲಕ್ಷ, ಪಟ್ಟಣದಲ್ಲಿ ವ್ಯಾಯಾಮ ಶಾಲೆ ನಿರ್ಮಾಣ ಹಾಗೂ ಅಭಿವೃದ್ಧಿಗೆ 5 ಲಕ್ಷ, ಮಳೆನೀರು ಕೊಯ್ಲು ಹಾಗೂ ತ್ಯಾಜ್ಯನೀರು ಸಂಸ್ಕರಣ ಘಟಕಕ್ಕೆ 5ಲಕ್ಷ ಹಣ ಕಾಯ್ದಿರಿಸಲಾಗಿದೆ ಎಂದರು.

ಪಟ್ಟಣದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ತುಂಗಾನದಿ ತೀರವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಬೇಕೆಂದು 20 ಲಕ್ಷ ಹಣ ಮೀಸಲಿಟ್ಟಿದ್ದೇವೆ. ಸೀಬಿನಕೆರೆ ಅಭಿವೃದ್ಧಿಗೆ 5 ಲಕ್ಷ, ವಿವಿಧ ವನಮಹೋತ್ಸವ ಕಾರ್ಯಕ್ರಮಗಳಿಗೆ 5ಲಕ್ಷ, ಪಟ್ಟಣ ವ್ಯಾಪ್ತಿಯಲ್ಲಿನ ದಸರಾ ಹಾಗೂ ಎಳ್ಳಮಾವಾಸ್ಯೆ ಜಾತ್ರೆಗೆ 5 ಲಕ್ಷ ಹಣ, ಬಡವರ ಕಲ್ಯಾಣ ಕಾರ್ಯಕ್ರಮದ ಶೇ.7.25 ಯೋಜನೆಗೆ, ವಿಕಲಚೇತನರ ಕಲ್ಯಾಣಕ್ಕೆ ವಸತಿ ಯೋಜನೆಗಳಿಗೆ, ಕೈಗಾರಿಕಾ ಉದ್ಯಮ, ಬಯಲು ರಂಗಮಂದಿರದ ನಿರ್ಮಾಣ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಬಡಾವಣೆ ನಿರ್ಮಾಣಕ್ಕೆ ಹೆಚ್ಚಿನ ಹಣ ಕಾಯ್ದಿರಿಸಲಾಗಿದೆ ಎಂದರು. ಪಪಂ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ, ನಾಗೇಂದ್ರ ಕುಮಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.