ಪುಟ್ಟನ ಟೊಪ್ಪಿಗೆ


Team Udayavani, Feb 8, 2019, 12:30 AM IST

19.jpg

ಘಟನೆ-1
ಅನುಪಮಾ, ನಿನ್ನೆ ನಿಮ್ಮ ಮಗುವಿಗೆ ಟೊಪ್ಪಿ ಹಾಕಿದ್ರಲ್ಲಾ , ಆ ಟೊಪ್ಪಿ ಎಲ್ಲಿ ತಗೊಂಡ್ರಿ? ತುಂಬಾ ಚೆನ್ನಾಗಿತ್ತು. ನಾನಂತೂ ಇಂಥ ಟೋಪಿಯನ್ನು  ಎಲ್ಲೂ ನೋಡೇ ಇಲ್ಲ. ನಿಮಗೆ ಹೇಗೆ ಸಿಕ್ತು?

ಘಟನೆ-2
ಪುಸ್ತಕ ಖರೀದಿಗೆ ಹೋಗಿದ್ದಾಗ, ಆ ಅಂಗಡಿಯಲ್ಲಿದ್ದ ವಯಸ್ಸಾದವರೊಬ್ಬರು, “ಎಷ್ಟು ದಿನ ಆಯ್ತು ಇಂಥ ಕೊಂಚಿಗೆ ನೋಡಿ. ನನ್ನ ಬಾಲ್ಯದ ದಿನಗಳು ನೆನಪಾದವು. ನಾನು, ನನ್ನ ತಮ್ಮ ಇಂತಹದ್ದೇ ಕೊಂಚಿಗೆ ಕಟ್ಟಿಕೊಂಡು ತೆಗೆಸಿಕೊಂಡ ಫೋಟೋ ಇದೆ. ಈಗ ಯಾರೂ ಇದನ್ನ ಮಕ್ಕಳಿಗೆ ಹಾಕೋದೇ ಇಲ್ಲ. ಈ ಮಗೂನ ನೋಡಿ ಖುಷಿಯಾಯ್ತು.

ಘಟನೆ-3
ಬೆಂಗಳೂರಿನಲ್ಲಿ ನಾವಿರೋ ಬಡಾವಣೆಯಲ್ಲಿ ಇರುವ ಅಸ್ಸಾಮ್‌ನ ಮಹಿಳೆಯೊಬ್ಬಳು, “ಇವನು ನಿಮ್ಮ ಮಗನೇ? ನಾನು ದಿನಾ ಇವನನ್ನು ಕೆರೆ ಪಕ್ಕ ಇರುವ ಉದ್ಯಾನದಲ್ಲಿ , ಅಪ್ಪನ ಜೊತೆ ಆಡೋದನ್ನು ನೋಡಿದ್ದೇನೆ. ಅವನ ತಲೆಮೇಲೆ ವಿಶಿಷ್ಟ ರೀತಿಯ ಟೊಪ್ಪಿ ಇರುತ್ತಲ್ಲಾ? ಅದಕ್ಕೇನಂತಾರೆ? ದೊಡ್ಡವರೂ ಅದನ್ನು ಹಾಕಿಕೊಳ್ಳಬಹುದಲ್ವಾ? ಅದನ್ನು ಲೆಹೆಂಗಾ ಜೊತೆ ಹಾಕಿಕೊಳ್ಳಬಹುದು?’ ಎಂದು ಕೇಳಿದರು.
.
.
ಹೀಗೆ, ನನ್ನ ಮಗ ಪ್ರಣವ್‌ನ ಜೊತೆ ಎಲ್ಲಿಗೇ ಹೋದರೂ ಜನರು ಅವನನ್ನು ತಿರುತಿರುಗಿ ನೋಡುತ್ತಿರುತ್ತಾರೆ. ಇದಕ್ಕೆ ಕಾರಣ; ಅವನ ತಲೆಗೆ ಕಟ್ಟಿರುವ ಕೊಂಚಿಗೆ ಎಂಬ ಟೊಪ್ಪಿ. ಅದುವೇ ಎಲ್ಲರನ್ನೂ ಆಕರ್ಷಿಸುವುದು.

ಈ ವರ್ಷ ಚಳಿ ಯಾರನ್ನು ಬಿಟ್ಟಿದೆ ಹೇಳಿ? ಇನ್ನು ಚಿಕ್ಕ ಮಕ್ಕಳ ಬಗ್ಗೆ ಹೇಳಬೇಕೆ? ಇಂಥ ಚಳಿಯಿಂದ ಮಕ್ಕಳನ್ನು ರಕ್ಷಿಸಲು ಅಮ್ಮಂದಿರು ಮಕ್ಕಳಿಗೆ ಸ್ವೆಟರ್‌, ಟೊಪ್ಪಿ ಹಾಕುತ್ತಾರೆ. ಇತ್ತೀಚೆಗಂತೂ ವಿವಿಧ ಬಗೆಯ ಟೊಪ್ಪಿಗಳು ಮಾರುಕಟ್ಟೆಯಲ್ಲಿ ಲಭ್ಯ. ಮಕ್ಕಳನ್ನು ಸೆಳೆಯಲು, ಕಾಟೂìನ್‌ ಕ್ಯಾರೆಕ್ಟ್ಗಳ, ಪ್ರಾಣಿ-ಪಕ್ಷಿಗಳ ವಿನ್ಯಾಸದ ಟೊಪ್ಪಿಗಳು ಬಂದಿವೆ. ಟೊಪ್ಪಿ ನೋಡಲು ಎಷ್ಟೇ ಆಕರ್ಷಕವಿದ್ದರೂ, ಮೊದಲ ಆದ್ಯತೆ ಗುಣಮಟ್ಟ ಹಾಗೂ ಚಳಿ ತಡೆಯುವ ಸಾಮರ್ಥ್ಯದ್ದು. ಈ ಎರಡೂ ಗುಣಗಳನ್ನು ಹೊಂದಿರುವ ಟೊಪ್ಪಿಗಳಲ್ಲಿ ಕೊಂಚಿಗೆ/ಕುಲಾವಿಗೆ ಮೊದಲ ಸ್ಥಾನ ಸಲ್ಲತಕ್ಕದ್ದು.

ಏನಿದು ಕೊಂಚಿಗೆ-ಕುಲಾವಿ?
ಕೊಂಚಿಗೆ ಎಂಬುದು ಮಕ್ಕಳ ತಲೆಗೆ ಕಟ್ಟುವ ಟೊಪ್ಪಿ . ಇದನ್ನು ಕಾಟನ್‌ ಬಟ್ಟೆಯಿಂದ ಹೊಲಿದಿರುತ್ತಾರೆ. ನವಜಾತ ಶಿಶುವಿನಿಂದ ಹಿಡಿದು, ಐದು ವರ್ಷದ ಮಕ್ಕಳ ತನಕ ನಾನಾ ಗಾತ್ರದ ಕೊಂಚಿಗೆ ಹೊಲಿಯಬಹುದು. ಇದು ತಲೆ ಮತ್ತು ಕಿವಿಯನ್ನು ಬೆಚ್ಚಗಿಡುವುದಲ್ಲದೆ, ಒಂದು ಗೇಣು ಬೆನ್ನನ್ನು ಕೂಡ ಕವರ್‌ ಮಾಡುತ್ತದೆ. ಆದರೆ ಕುಲಾವು, ಕುತ್ತಿಗೆಯವರೆಗಷ್ಟೇ ಚಳಿಯಿಂದ ರಕ್ಷಿಸುತ್ತದೆ. ಇದೇ, ಕೊಂಚಿಗೆ ಮತ್ತು ಕುಲಾವಿನ ನಡುವಿರುವ ವ್ಯತ್ಯಾಸ. ಕೊಂಚಿಗೆ/ಕುಲಾವು ಎರಡಕ್ಕೂ; ಎರಡು ನಾಡಿಗಳಿರುತ್ತವೆ. ಇವು ತಲೆಯ ಗಾತ್ರಕ್ಕೆ ತಕ್ಕಂತೆ ಬಿಗಿ ಮತ್ತು ಸಡಿಲಗೊಳಿಸಲು ಇರುತ್ತವೆ. ಕೊಂಚಿಗೆಯನ್ನು ಕಟ್ಟಬೇಕಾದರೆ ಎಡನಾಡಿಯನ್ನು ಬಲಗಡೆಯಿಂದ ಹಾಗೂ ಬಲ ನಾಡಿಯನ್ನು ಎಡಗಡೆಯಿಂದ ಕುತ್ತಿಗೆಯ ಸುತ್ತು ಬಳಸಿ ಹಿಂಭಾಗಕ್ಕೆ ಕಟ್ಟಲಾಗುತ್ತದೆ. ಇದರಿಂದ ಗಂಟು ಭದ್ರವಾಗಿ ಇರುವುದಲ್ಲದೆ ಮಗುವಿನ ಚರ್ಮಕ್ಕೆ ಕಚಗುಳಿ ಮಾಡುವುದಿಲ್ಲ. ಕುಲಾವಿಯನ್ನು ಸಾಮಾನ್ಯ ಟೊಪ್ಪಿಯ ಹಾಗೆ ಕುತ್ತಿಗೆಯ ಮುಂದಿನ ಭಾಗಕ್ಕೆ ಕಟ್ಟಲಾಗುತ್ತದೆ.

ಕೊಂಚಿಗಿ ಕುಲಾವೀ ಗೊಂಚಲು ಬಿಳಿಮುತ್ತ…
ಶೃಂಗಾರ ಶ್ರೀಕೃಷ್ಣಗೆ ಚಂದಾಗಿ ತೊಡಿಸೀರಿ…
ಜೋ… ಜೋ.
..
ಹಿಂದಿನ ಕಾಲದಲ್ಲಿ ಕೊಂಚಿಗೆಗೆ, ಮುತ್ತು ರತ್ನ ಹಾಗೂ ಬಂಗಾರದ ಹೂವುಗಳಿಂದ ಕಸೂತಿ ಮಾಡುತ್ತಿದ್ದರು. ಈಗಲೂ ವಿಶೇಷ ಸಮಾರಂಭಗಳಿಗಾಗಿ ಕೊಂಚಿಗೆಗೆ ಮುತ್ತು ಪೋಣಿಸಿ, ಹೊಲಿಯುವ ವಾಡಿಕೆ ಇದೆ. ತಾಯಿ ಮತ್ತು ಮಗು ಮೊದಲನೇ ಸಲ ಗಂಡನ ಮನೆಗೆ ಬರುವಾಗ, ತವರುಮನೆಯಿಂದ ತೊಟ್ಟಿಲು ಹಾಗೂ ಆ ತೊಟ್ಟಿಲಿನ ನಾಲ್ಕೂ ಮೂಲೆಗಳಿಗೆ ನಾಲ್ಕು ಕೊಂಚಿಗೆಗಳನ್ನು ಹಾಕಿ, ಒಂದು ಕೊಂಚಿಗೆಯನ್ನು ಮಧ್ಯದಲ್ಲಿ ಇರಿಸಿ, ತೊಟ್ಟಿಲನ್ನು ಮಗುವಿನ ಸೋದರಮಾವನು ಹೊತ್ತು ತರುವ ಸಂಪ್ರದಾಯವಿದೆ.

ಪ್ರಾಚೀನ ಸಂಸ್ಕೃತಿ ಹಾಗೂ ಭಾವನಾತ್ಮಕ ಸಂಬಂಧದ ಪ್ರತೀಕವಾಗಿರುವ ಕೊಂಚಿಗೆಯ ಮುಂದೆ, ನಿಟ್ಟೆಡ್‌ ಕ್ಯಾಪ್‌ನ ಥಳುಕು ನಿಲ್ಲಲು ಸಾಧ್ಯವೇ?

ಕೊಂಚಿಗೆಯ ಲಾಭಗಳು
.ಕಾಟನ್‌ ಬಟ್ಟೆಯದ್ದಾದ ಕಾರಣ, ಮಗುವಿನ ಚರ್ಮಕ್ಕೆ ಉತ್ತಮ.
.ಉಣ್ಣೆ ಟೊಪ್ಪಿಯಂತೆ ದಾರದ ಎಳೆ, ಮಗುವಿನ ಕಿವಿಯೋಲೆಯಲ್ಲಿ ಸಿಕ್ಕಿ ಹಾಕಿಕೊಳ್ಳುವುದಿಲ್ಲ.
.ಬೆನ್ನನ್ನೂ ಕವರ್‌ ಮಾಡುವುದರಿಂದ ಚಳಿಯಿಂದ ಸಂಪೂರ್ಣ ರಕ್ಷಣೆ ಸಿಗುತ್ತದೆ.
.ತೆಳ್ಳನೆಯ ಕಾಟನ್‌ ಬಟ್ಟೆಯಿಂದ ಮಾಡಲ್ಪಟ್ಟಿರುವ ಕೊಂಚಿಗೆಯನ್ನು ಬಿಸಿಲಿನಿಂದ ರಕ್ಷಣೆ ಪಡೆಯಲೂ ಬಳಸಬಹುದು.
.ಮಗು ಎಷ್ಟೇ ಕಿತ್ತೆಸೆಯಲು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ.
.ನೋಡಲು ಆಕರ್ಷಕವಾಗಿರುತ್ತದೆ (ತಲೆಯ ಮೇಲೆ ಗೋಪುರಾಕಾರದ ವಿನ್ಯಾಸ ಬರುವುದರಿಂದ) ಅಲ್ಲದೆ ನಮಗೆ ಇಷ್ಟವಾದ ಬಟ್ಟೆಯಲ್ಲಿ ಡಿಸೈನ್‌ ಮಾಡಿಸಬಹುದು.
.ಬೆಲೆಯೂ ಅಗ್ಗ. ರೇಷ್ಮೆ ಬಟ್ಟೆಯಲ್ಲಿ (ಕಾಟನ್‌ ಲೈನಿಂಗ್‌ ಬಳಸಿ) ಹೊಲಿಸಬಹುದು.

ಅನುಪಮಾ  ಬೆಣಚಿನ ಮರ್ಡಿ

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.