ಕನಸು ವಾಸ್ತವದ ಸುತ್ತ ಸ್ಟ್ರೈಕರ್‌


Team Udayavani, Feb 8, 2019, 12:30 AM IST

21.jpg

ನಾಯಕ ಯಾವುದೋ ಒಂದು ಮಾನಸಿಕ ಸಮಸ್ಯೆಗೆ ಸಿಕ್ಕಿ, ಮುಂದೆ ಅದರಿಂದ ತೊಂದರೆ ಅನುಭವಿಸುವ ಅನೇಕ ಸಿನಿಮಾಗಳು ಈಗಾಗಲೇ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಂದಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಸ್ಟ್ರೈಕರ್‌’. “ಸ್ಟ್ರೈಕರ್‌’ ಎಂಬ ಚಿತ್ರ ಆರಂಭವಾಗಿರುವ ವಿಚಾರವನ್ನು ನೀವು ಕೇಳಿರಬಹುದು. ಈಗ ಈ ಚಿತ್ರ ಚಿತ್ರೀಕರಣ ಮುಗಿಸಿ, ಬಿಡುಗಡೆಯ ಹಂತಕ್ಕೆ ಬಂದಿದೆ. ಇದೊಂದು ಸೈಕಲಾಜಿಕಲ್‌ ಕ್ರೈಮ್‌ ಥಿಲ್ಲರ್‌ ಜಾನರ್‌ಗೆ ಸೇರಿದ ಸಿನಿಮಾ. ಪ್ರವೀಣ್‌ ತೇಜ್‌ ಈ ಚಿತ್ರದ ನಾಯಕ. ಈ ಹಿಂದೆ ಪ್ರವೀಣ್‌ ಒಂದಷ್ಟು ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದರೂ, ಯಾವ ಚಿತ್ರವೂ ದೊಡ್ಡ ಮಟ್ಟದಲ್ಲಿ ಅವರ ಕೈ ಹಿಡಿಯಲಿಲ್ಲ. ಈಗ “ಸ್ಟ್ರೈಕರ್‌’ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ಇಲ್ಲಿ ಅವರು ಮಾನಸಿಕ ಸಮಸ್ಯೆ ಇರುವ ಮೆಕ್ಯಾನಿಕ್‌ ಆಗಿ ಕಾಣಿಸಿಕೊಂಡಿದ್ದಾರೆ. 

ಈ ಚಿತ್ರವನ್ನು ಪವನ್‌ ತ್ರಿವಿಕ್ರಮ ನಿರ್ದೇಶಿಸಿದ್ದಾರೆ. ಇಲ್ಲಿ ಕನಸು ಮತ್ತು ವಾಸ್ತವದ ನಡುವೆ ನಾಯಕ ಹೇಗೆ ಗೊಂದಲಕ್ಕೆ ಒಳಗಾಗುತ್ತಾನೆ ಮತ್ತು ಅದರಿಂದ ಆತ ಹೇಗೆ ಸಮಸ್ಯೆಗೆ ಸಿಕ್ಕಿಕೊಳ್ಳುತ್ತಾನೆ ಎಂಬ ಅಂಶವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರಂತೆ. ರಾತ್ರಿ ಕಂಡ ಕನಸನ್ನು ನಿಜವೆಂದು ನಂಬುವ ನಾಯಕನ ಸುತ್ತವೇ ಇಡೀ ಕಥೆ ಸಾಗುತ್ತದೆ. ಕೆಲವು ವರ್ಷಗಳ ಹಿಂದೆ ನಿರ್ದೇಶಕರು ಕೂಡಾ ಈ ರೀತಿಯ ಸಮಸ್ಯೆಯನ್ನು ಹೊಂದಿದ್ದರಂತೆ. ಹಾಗಾಗಿ, ಅವರಿಂದಲೇ ಈ ಕಥೆ ಸ್ಫೂರ್ತಿ ಪಡೆದಿದೆ ಎಂದರೂ ತಪ್ಪಲ್ಲ. ಇದೊಂದು ಹೊಸ ಬಗೆಯ ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ನಿರ್ದೇಶಕರಿಗಿದೆ. 

ನಾಯಕ ಪ್ರವೀಣ್‌ ಕೂಡಾ ಚಿತ್ರದ ಬಗ್ಗೆ ಮಾತನಾಡಿದರು. “ನಾನಿಲ್ಲಿ ಮೆಕ್ಯಾನಿಕ್‌ ಆಗಿ ಕಾಣಿಸಿಕೊಂಡಿದ್ದೇನೆ. ನಿರ್ದೇಶಕು ಒಂದು ಸೂಕ್ಷ್ಮ ಅಂಶವನ್ನಿಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ಸಣ್ಣ ಸಣ್ಣ ಅಂಶಗಳ ಕುರಿತು ಹೆಚ್ಚು ಗಮನಹರಿಸಿದ್ದಾರೆ. ಇದೊಂದು ಸೈಕಲಾಜಿಕಲ್‌ ಕ್ರೈಮ್‌ ಥ್ರಿಲ್ಲರ್‌ ಚಿತ್ರ. ಕನಸು ಮತ್ತು ವಾಸ್ತವದ ನಡುವೆ ಈ ಸಿನಿಮಾ ನಡೆಯುತ್ತದೆ’ ಎಂದು ಚಿತ್ರದ ಬಗ್ಗೆ ವಿವರ ನೀಡಿದರು. ಚಿತ್ರದಲ್ಲಿ ಶಿಲ್ಪಾ ಮಂಜುನಾಥ್‌ ನಾಯಕಿ. ತಾನೇ ದೊಡ್ಡ ಸಮಸ್ಯೆಯಲ್ಲಿದ್ದೇನೆಂದುಕೊಂಡಿರುವಾಗ ಆಕೆಗೆ ಸಿಗುವ ಬಾಯ್‌ಫ್ರೆಂಡ್‌ ಅವರಿಂತ ದೊಡ್ಡ ಸಮಸ್ಯೆ ಇರುವವನಾಗಿರುತ್ತಾನಂತೆ. ನಾಯಕನ ಸಮಸ್ಯೆಗೆ ಪರಿಹಾರ ಕೊಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾಗಿ ಹೇಳಿಕೊಂಡರು ಶಿಲ್ಪಾ.  ಚಿತ್ರದಲ್ಲಿ “ಭಜರಂಗಿ’ ಲೋಕಿ ಮೊದಲ ಬಾರಿಗೆ ಪಾಸಿಟಿವ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ದಕ್ಷ ಪೊಲೀಸ್‌ ಆಫೀಸರ್‌ ಆಗಿ ನಟಿಸಿದ್ದಾರೆ. ಈ ಚಿತ್ರವನ್ನು ಜಿ.ಶಂಕರಪ್ಪ, ಸಿ.ರಮೇಶ್‌ ಬಾಬು ಹಾಗೂ ಸಿ.ಸುರೇಶ್‌ ಬಾಬು ಸೇರಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಭರತ್‌ ಬಿ.ಜೆ ಸಂಗೀತವಿದೆ. ಚಿತ್ರ ಫೆಬ್ರವರಿ ಕೊನೆ ಅಥವಾ ಮಾರ್ಚ್‌ ಮೊದಲ ವಾರ ತೆರೆಕಾಣಲಿದೆ. 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.