ಕರ್ನಾಟಕ ಭವನದಲ್ಲಿ ಸಾಹಿತಿಗಳ ಗದ್ದಲ!


Team Udayavani, Feb 8, 2019, 12:21 AM IST

200.jpg

ಬೆಂಗಳೂರು: ಪ್ರಾದೇಶಿಕ ಭಾಷೆಗಳಿಗೆ ಪ್ರಾಧಾನ್ಯತೆ ನೀಡುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ತೆರಳಿದ್ದ ರಾಜ್ಯದ ಸಾಹಿತಿಗಳ ನಿಯೋಗದ ಸದಸ್ಯರ ಪೈಕಿ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದವರು ಬುಧವಾರ ತಡರಾತ್ರಿವರೆಗೂ ಪಾರ್ಟಿ ಮಾಡಿ, ಜೋರಾಗಿ ಹರಟೆ ಹೊಡೆದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಿಗೆ ಕಿರಿ ಕಿರಿ ಉಂಟು ಮಾಡಿದ್ದಾರೆ ಎನ್ನಲಾದ ಪ್ರಹಸನ ಜರುಗಿದೆ.

ಮತ್ತೂಂದೆಡೆ, ಘಟನೆಗೆ ಸಂಬಂಧಿಸಿದಂತೆ ವಿವರಣಾ ವರದಿ ನೀಡುವಂತೆ ರಾಜ್ಯಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್‌ ಭಾಸ್ಕರ್‌, ಕರ್ನಾಟಕ ಭವನದ ಸ್ಥಾನಿಕ ಆಯುಕ್ತ ನಿಲಯ್‌ ಮಿತಾಶ್‌ಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ. ‘ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಸಾಹಿತಿಗಳು ಯಾವುದೇ ರೀತಿಯ ಪಾರ್ಟಿ ಮಾಡಿಲ್ಲ, ಗದ್ದಲವೂ ಮಾಡಿಲ್ಲ ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ’ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ.ಸಿದ್ದರಾಮಯ್ಯ ತಿಳಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ ಸಿದ್ದರಾಮಯ್ಯ ನೇತೃತ್ವದ ನಿಯೋಗದಲ್ಲಿ ಕಸಾಪ ಅಧ್ಯಕ್ಷ ಮನು ಬಳಿಗಾರ್‌, ಕವಿ ಸಿದ್ದಲಿಂಗಯ್ಯ, ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಸೇರಿ ಹಲವರು ಇದ್ದರು.

ಘಟನೆ ಏನು?: ನಿಯೋಗದಲ್ಲಿದ್ದ ಸಾಹಿತಿಗಳು ಕರ್ನಾಟಕ ಭವನದಲ್ಲಿ ಬುಧವಾರ ರಾತ್ರಿ ತಂಗಿದ್ದರು. ಮೊದಲನೇ ಮಹಡಿಯ ಕೊಠಡಿಯಲ್ಲಿ ಉಳಿದುಕೊಂಡಿದ್ದ ಕೆಲ ಸಾಹಿತಿಗಳ ಹರಟೆ ಹಾಗೂ ಗದ್ದಲ ತಡರಾತ್ರಿಯವರೆಗೂ ಮುಂದುವರಿದಿದೆ. ಈ ಗದ್ದಲದಿಂದ ಪಕ್ಕದ ಕೊಠಡಿಯಲ್ಲಿ ತಂಗಿದ್ದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಅವರಿಗೆ ಇನ್ನಿಲ್ಲದ ಕಿರಿಕಿರಿ ತರಿಸಿದೆ ಎನ್ನಲಾಗಿದೆ. ಸಾಹಿತಿಗಳ ಅನಗತ್ಯ ಗದ್ದಲದಿಂದ ಬೇಸತ್ತು, ಗಲಾಟೆ ಮಾಡದಂತೆ ಹೇಳಲು ತಮ್ಮ ಭದ್ರತಾ ಸಿಬ್ಬಂದಿಗೆ ಸೂಚಿಸಿದ್ದಾರೆ. ಭದ್ರತಾ ಸಿಬ್ಬಂದಿ ಸಾಹಿತಿಗಳ ಕೊಠಡಿಗೆ ತೆರಳಿ ಗದ್ದಲ ನಡೆಸದಂತೆ ಹೇಳಿದರೂ ಪ್ರಯೋಜನಕ್ಕೆ ಬರಲಿಲ್ಲ. ಸಾಹಿತಿಗಳ ಜೋರು ಮಾತು ಸಾಗಿತ್ತು ಎನ್ನಲಾಗಿದೆ.

ಇದರಿಂದ ಅಸಮಾಧಾನಗೊಂಡ ನ್ಯಾ.ದಿನೇಶ್‌ ಮಾಹೇಶ್ವರಿ, ಸ್ವಾಗತಕಾರರ ಪಡಸಾಲೆಗೆ ಬಂದು ದೆಹಲಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ 12 ಮಂದಿ ಪೊಲೀಸರು ಸ್ಥಳಕ್ಕೆ ಧಾವಿಸಿ ಕರ್ನಾಟಕ ಭವನದ ಮುಖ್ಯದ್ವಾರ ಬಂದ್‌ ಮಾಡಿ, ಸಾಹಿತಿಗಳಿದ್ದ ಕೊಠಡಿಗೆ ತೆರಳಿ ಗದ್ದಲ ಮುಂದುವರಿಸಿದರೆ ಕೇಸ್‌ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಷಯ ತಿಳಿದ ಕೂಡಲೇ ಕರ್ನಾಟಕ ಭವನದ ಸ್ಥಾನಿಕ ಆಯುಕ್ತ ನಿಲಯ್‌ ಮಿತಾಶ್‌ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎನ್ನಲಾಗಿದೆ.

ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ

ಘಟನೆ ಕುರಿತಂತೆ ಉದಯವಾಣಿ ಜತೆ ಮಾತನಾಡಿದ ಪ್ರಾಧಿಕಾರ ಅಧ್ಯಕ್ಷ ಎಸ್‌.ಜಿ ಸಿದ್ದರಾಮಯ್ಯ, ‘ಕರ್ನಾಟಕ ಭವನದ ಮೂರನೇ ಮಹಡಿಯ ಕೊಠಡಿಯಲ್ಲಿ ನಾನು ತಂಗಿದ್ದೆ. ಕೆಲವು ಸಾಹಿತಿ ಸ್ನೇಹಿತರು ಮೊದಲನೇ ಮಹಡಿಯಲ್ಲಿ ತಂಗಿದ್ದರು. ಸ್ಥಳೀಯ ಸ್ನೇಹಿತರ ಜತೆ ತಮಾಷೆಯಾಗಿ ಮಾತನಾಡಿ ಕೆಲಹೊತ್ತು ಹರಟೆ ನಡೆಸಿರಬಹುದು. ಇದರಿಂದ ನ್ಯಾಯಮೂರ್ತಿಗಳಿಗೆ ಕಿರಿಕಿರಿಯಾಗಿದೆ. ಹೀಗಾಗಿ, ಅವರ ಭದ್ರತಾ ಸಿಬ್ಬಂದಿ ಬಂದು ಸೂಚಿಸಿದ್ದಾರೆ. ಹಿಂದಿಯಲ್ಲಿ ಅವರು ಹೇಳಿದ್ದರಿಂದ ಇವರಿಗೆ ಸರಿಯಾಗಿ ಅರ್ಥವಾಗಿಲ್ಲ. ವಿಷಯ ತಿಳಿದ ಕೂಡಲೇ ಧಾವಿಸಿ ಅವರನ್ನು ಸಮಾಧಾನ ಮಾಡಿದೆ, ಬಳಿಕ ನ್ಯಾಯಮೂರ್ತಿಗಳ ಬಳಿ ತೆರಳಿ ತೊಂದರೆಯಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದೆ. ನ್ಯಾಯಮೂರ್ತಿಗಳು, ಪರವಾಗಿಲ್ಲ. ನಿಮ್ಮ ಬಗ್ಗೆ ಗೊತ್ತಿದೆ ಎಂದು ಪ್ರೀತಿಯಿಂದಲೇ ಮಾತನಾಡಿಸಿ ಕಾಫಿ ನೀಡಿ ಕಳುಹಿಸಿಕೊಟ್ಟರು. ಗುರುವಾರ ಬೆಳಿಗ್ಗೆಯೂ ನ್ಯಾಯಮೂರ್ತಿಗಳ ಬಳಿ ತೆರಳಿ ವಿಷ್‌ ಮಾಡಿದಾಗ ಘಟನೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿ ಕಳುಹಿಸಿದರು. ಆದರೆ, ಈ ವಿಷಯವನ್ನು ಅನಗತ್ಯವಾಗಿ ಎಳೆದಾಡಲಾಗುತ್ತಿದೆ’ ಎಂದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.